<p><strong>ಪಟ್ನಾ</strong>: ಬಳಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ರಾಜ್ಯವನ್ನು ಮುನ್ನೆಡಸಲು ಸಾಧ್ಯವಿಲ್ಲ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ತಿಳಿಸಿದ್ದಾರೆ.</p>.<p>ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿತೀಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ತೇಜಸ್ವಿ ಯಾದವ್, 'ಈಗಾಗಲೇ ನಿತೀಶ್ ಅವರು ಬಳಲಿದ್ದು, ಬಿಹಾರವನ್ನು ಮುನ್ನೆಡಸಲು ಅವರಿಂದ ಸಾಧ್ಯವಿಲ್ಲ. ಜನರು ಅವರಿಗೆ ವಿದಾಯ ಹೇಳುವ ಕಾಲ ಸನ್ನಿಹಿತವಾಗಿದೆ' ಎಂದು ಹೇಳಿದ್ದಾರೆ.</p>.<p>ಬಿಹಾರದಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಕೇವಲ 77 ಪೊಲೀಸರು ಇದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ತೇಜಸ್ವಿ ಆರೋಪಿಸಿದ್ದಾರೆ.</p>.<p>'ಬಿಹಾರವನ್ನು ಮುನ್ನೆಡೆಸಲು ನೀವು ನಮಗೆ ಅವಕಾಶ ನೀಡಿ. ಕಳೆದ 15 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಸಾಧಿಲಾಗದ್ದನ್ನು ನಾವು ಸಾಧಿಸಿ ತೋರಿಸುತ್ತೇವೆ' ಎಂದು ಅವರು ಜನರಲ್ಲಿ ಮನವಿ ಮಾಡಿದ್ದಾರೆ.</p>.<p>ಇದೇ ವೇಳೆ, ತಮ್ಮನ್ನು ಕ್ರಿಕೆಟಿಗ ಎಂದು ಲೇವಡಿ ಮಾಡಿದ್ದ ನಿತೀಶ್ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್, 'ನಿತೀಶ್ ಕುಮಾರ್ ಅವರಿಗೆ ಏನಾಗಿದೆ? ಅಂತಹ ಅನುಭವಿ ರಾಜಕಾರಣಿಯಾಗಿರುವ ಅವರು ಈ ರೀತಿಯಲ್ಲಿ ಏಕೆ ಮಾತನಾಡುತ್ತಾರೆ? ಕ್ರಿಕೆಟ್ ಮತ್ತು ಚಲನಚಿತ್ರಗಳಿಂದ ನಾವು ರಾಜಕೀಯಕ್ಕೆ ಬರಲು ಸಾಧ್ಯವಿಲ್ಲವೇ? ವೈದ್ಯರು, ಎಂಜಿನಿಯರ್ಗಳೂ ಸಹ ರಾಜಕಾರಣಕ್ಕೆ ಬರಲು ಸಾಧ್ಯವಿಲ್ಲ ಎಂಬುದಾಗಿ ಅವರ ಮಾತಿನ ಅರ್ಥವೇ?' ಎಂದು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಳಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ರಾಜ್ಯವನ್ನು ಮುನ್ನೆಡಸಲು ಸಾಧ್ಯವಿಲ್ಲ ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ತಿಳಿಸಿದ್ದಾರೆ.</p>.<p>ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿತೀಶ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ತೇಜಸ್ವಿ ಯಾದವ್, 'ಈಗಾಗಲೇ ನಿತೀಶ್ ಅವರು ಬಳಲಿದ್ದು, ಬಿಹಾರವನ್ನು ಮುನ್ನೆಡಸಲು ಅವರಿಂದ ಸಾಧ್ಯವಿಲ್ಲ. ಜನರು ಅವರಿಗೆ ವಿದಾಯ ಹೇಳುವ ಕಾಲ ಸನ್ನಿಹಿತವಾಗಿದೆ' ಎಂದು ಹೇಳಿದ್ದಾರೆ.</p>.<p>ಬಿಹಾರದಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಕೇವಲ 77 ಪೊಲೀಸರು ಇದ್ದಾರೆ. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಲ್ಲ ಎಂದು ತೇಜಸ್ವಿ ಆರೋಪಿಸಿದ್ದಾರೆ.</p>.<p>'ಬಿಹಾರವನ್ನು ಮುನ್ನೆಡೆಸಲು ನೀವು ನಮಗೆ ಅವಕಾಶ ನೀಡಿ. ಕಳೆದ 15 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಸಾಧಿಲಾಗದ್ದನ್ನು ನಾವು ಸಾಧಿಸಿ ತೋರಿಸುತ್ತೇವೆ' ಎಂದು ಅವರು ಜನರಲ್ಲಿ ಮನವಿ ಮಾಡಿದ್ದಾರೆ.</p>.<p>ಇದೇ ವೇಳೆ, ತಮ್ಮನ್ನು ಕ್ರಿಕೆಟಿಗ ಎಂದು ಲೇವಡಿ ಮಾಡಿದ್ದ ನಿತೀಶ್ ವಿರುದ್ಧ ಹರಿಹಾಯ್ದಿರುವ ತೇಜಸ್ವಿ ಯಾದವ್, 'ನಿತೀಶ್ ಕುಮಾರ್ ಅವರಿಗೆ ಏನಾಗಿದೆ? ಅಂತಹ ಅನುಭವಿ ರಾಜಕಾರಣಿಯಾಗಿರುವ ಅವರು ಈ ರೀತಿಯಲ್ಲಿ ಏಕೆ ಮಾತನಾಡುತ್ತಾರೆ? ಕ್ರಿಕೆಟ್ ಮತ್ತು ಚಲನಚಿತ್ರಗಳಿಂದ ನಾವು ರಾಜಕೀಯಕ್ಕೆ ಬರಲು ಸಾಧ್ಯವಿಲ್ಲವೇ? ವೈದ್ಯರು, ಎಂಜಿನಿಯರ್ಗಳೂ ಸಹ ರಾಜಕಾರಣಕ್ಕೆ ಬರಲು ಸಾಧ್ಯವಿಲ್ಲ ಎಂಬುದಾಗಿ ಅವರ ಮಾತಿನ ಅರ್ಥವೇ?' ಎಂದು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>