<p class="title"><strong>ಭುವನೇಶ್ವರ:</strong> ಒಡಿಸ್ಸಿ ಸಂಗೀತಕ್ಕೆ ಶಾಸ್ತ್ರೀಯ ಸಂಗೀತ ಸ್ಥಾನಮಾನ ನೀಡಬೇಕು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಒಡಿಸ್ಸಿ ಸಂಗೀತ ಸುಮಾರು 2000 ವರ್ಷಗಳ ಇತಿಹಾಸ ಹೊಂದಿದೆ. ತನ್ನದೇ ಆದ ರಾಗ ಹೊಂದಿದ್ದು, ಶಾಸ್ತ್ರ ಆಧಾರಿತವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p class="title">ಈ ಕುರಿತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, ತನ್ನದೇ ಆದ ವ್ಯಾಕರಣ, ರೀತಿ, ತಾಳ ಹೊಂದಿರುವ ಒಡಿಸ್ಸಿ ಸಂಗೀತ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತಕ್ಕಿಂತಲೂ ಭಿನ್ನವಾಗಿದೆ ಎಂದು ಉಲ್ಲೇಖಿಸಿದ್ದಾರೆ.</p>.<p>ಶಾಸ್ತ್ರೀಯ ಸಂಗೀತ ಸ್ಥಾನಮಾನ ಪಡೆಯಲು ಬೇಕಾದ ಎಲ್ಲ ಅರ್ಹತೆಗಳನ್ನು ಒಡಿಸ್ಸಿ ಸಂಗೀತ ಹೊಂದಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇದಕ್ಕೆ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರಮವಹಿಸಿದೆ. ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಹಿಂದೆಯೇ ಉತ್ಕಲ್ ಸಾಂಸ್ಕೃತಿಕ ವಿಶ್ವವಿದ್ಯಾಲಯವನ್ನೂ ಸ್ಥಾಪಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಭುವನೇಶ್ವರ:</strong> ಒಡಿಸ್ಸಿ ಸಂಗೀತಕ್ಕೆ ಶಾಸ್ತ್ರೀಯ ಸಂಗೀತ ಸ್ಥಾನಮಾನ ನೀಡಬೇಕು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಒಡಿಸ್ಸಿ ಸಂಗೀತ ಸುಮಾರು 2000 ವರ್ಷಗಳ ಇತಿಹಾಸ ಹೊಂದಿದೆ. ತನ್ನದೇ ಆದ ರಾಗ ಹೊಂದಿದ್ದು, ಶಾಸ್ತ್ರ ಆಧಾರಿತವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p class="title">ಈ ಕುರಿತು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರಿಗೆ ಪತ್ರ ಬರೆದಿದ್ದು, ತನ್ನದೇ ಆದ ವ್ಯಾಕರಣ, ರೀತಿ, ತಾಳ ಹೊಂದಿರುವ ಒಡಿಸ್ಸಿ ಸಂಗೀತ ಹಿಂದೂಸ್ತಾನಿ ಮತ್ತು ಕರ್ನಾಟಕ ಸಂಗೀತಕ್ಕಿಂತಲೂ ಭಿನ್ನವಾಗಿದೆ ಎಂದು ಉಲ್ಲೇಖಿಸಿದ್ದಾರೆ.</p>.<p>ಶಾಸ್ತ್ರೀಯ ಸಂಗೀತ ಸ್ಥಾನಮಾನ ಪಡೆಯಲು ಬೇಕಾದ ಎಲ್ಲ ಅರ್ಹತೆಗಳನ್ನು ಒಡಿಸ್ಸಿ ಸಂಗೀತ ಹೊಂದಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇದಕ್ಕೆ ಸ್ಥಾನಮಾನ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಕ್ರಮವಹಿಸಿದೆ. ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಹಿಂದೆಯೇ ಉತ್ಕಲ್ ಸಾಂಸ್ಕೃತಿಕ ವಿಶ್ವವಿದ್ಯಾಲಯವನ್ನೂ ಸ್ಥಾಪಿಸಿದೆ ಎಂದು ಅವರು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>