<p><strong>ಭುವನೇಶ್ವರ, ಒಡಿಶಾ:</strong> ರಾಷ್ಟ್ರೀಯ ಆಹಾರ ಭದ್ರತೆ ಕಾರ್ಯಕ್ರಮದ ಫಲಾನುಭವಿಗಳಿಗೆ ಉಚಿತ ಅಕ್ಕಿಯ ವಿತರಣೆಯನ್ನು ಹೆಚ್ಚುವರಿಯಾಗಿ ಇನ್ನೂ ಎಂಟು ತಿಂಗಳ ಕಾಲ ವಿಸ್ತರಿಸಬೇಕು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.</p>.<p>‘ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಉಚಿತವಾಗಿ ಪಡಿತರವನ್ನು ಒದಗಿಸುವುದರಿಂದ ಯಾವ ಒಬ್ಬ ನಿರ್ಗತಿಕ ಮತ್ತು ದುರ್ಬಲ ವ್ಯಕ್ತಿಯೂ ಆಹಾರ ಧಾನ್ಯಗಳಿಂದ ವಂಚಿತರಾಗುವುದಿಲ್ಲ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ (ಪಿಎಂಜಿಕೆಎವೈ) ಹೆಚ್ಚುವರಿ ಅಕ್ಕಿಯ ಹಂಚಿಕೆಯನ್ನು ವಿಸ್ತರಿಸುವಂತೆ ಪ್ರಧಾನಿ ಮೋದಿ ಅವರನ್ನುಪಟ್ನಾಯಕ್ ಒತ್ತಾಯಿಸಿದ್ದಾರೆ. </p>.<p>ಪಿಎಂಜೆಕೆವೈ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಕೇಂದ್ರ ಸರ್ಕಾರ 80 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರ ಪೂರೈಸುತ್ತಿದೆ.</p>.<p>ಕೋವಿಡ್ ಸಾಂಕ್ರಾಮಿಕದ ಆರಂಭದಲ್ಲಿ ಪಿಎಂಜಿಕೆವೈ ಯೋಜನೆಯಡಿ ಮೂರು ತಿಂಗಳು (ಏಪ್ರಿಲ್–ಜೂನ್ 2020) ಉಚಿತ ಪಡಿತರ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ, ಒಡಿಶಾ:</strong> ರಾಷ್ಟ್ರೀಯ ಆಹಾರ ಭದ್ರತೆ ಕಾರ್ಯಕ್ರಮದ ಫಲಾನುಭವಿಗಳಿಗೆ ಉಚಿತ ಅಕ್ಕಿಯ ವಿತರಣೆಯನ್ನು ಹೆಚ್ಚುವರಿಯಾಗಿ ಇನ್ನೂ ಎಂಟು ತಿಂಗಳ ಕಾಲ ವಿಸ್ತರಿಸಬೇಕು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.</p>.<p>‘ಸಾಂಕ್ರಾಮಿಕದ ಈ ಸಂದರ್ಭದಲ್ಲಿ ಉಚಿತವಾಗಿ ಪಡಿತರವನ್ನು ಒದಗಿಸುವುದರಿಂದ ಯಾವ ಒಬ್ಬ ನಿರ್ಗತಿಕ ಮತ್ತು ದುರ್ಬಲ ವ್ಯಕ್ತಿಯೂ ಆಹಾರ ಧಾನ್ಯಗಳಿಂದ ವಂಚಿತರಾಗುವುದಿಲ್ಲ’ ಎಂದೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.</p>.<p>ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ (ಪಿಎಂಜಿಕೆಎವೈ) ಹೆಚ್ಚುವರಿ ಅಕ್ಕಿಯ ಹಂಚಿಕೆಯನ್ನು ವಿಸ್ತರಿಸುವಂತೆ ಪ್ರಧಾನಿ ಮೋದಿ ಅವರನ್ನುಪಟ್ನಾಯಕ್ ಒತ್ತಾಯಿಸಿದ್ದಾರೆ. </p>.<p>ಪಿಎಂಜೆಕೆವೈ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಕೇಂದ್ರ ಸರ್ಕಾರ 80 ಕೋಟಿ ಫಲಾನುಭವಿಗಳಿಗೆ ಉಚಿತ ಪಡಿತರ ಪೂರೈಸುತ್ತಿದೆ.</p>.<p>ಕೋವಿಡ್ ಸಾಂಕ್ರಾಮಿಕದ ಆರಂಭದಲ್ಲಿ ಪಿಎಂಜಿಕೆವೈ ಯೋಜನೆಯಡಿ ಮೂರು ತಿಂಗಳು (ಏಪ್ರಿಲ್–ಜೂನ್ 2020) ಉಚಿತ ಪಡಿತರ ನೀಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>