<p>ಶಿವಸಾಗರ್ (ಪಿಟಿಐ): ಧೈರ್ಯವಿದ್ದರೆ ಬಂಧಿಸಿ ಎಂದು ಪೊಲೀಸರಿಗೆ ಸವಾಲು ಹಾಕಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಹೈದರಾಬಾದ್ಗೆ ಓಡಿಹೋಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಲೇವಡಿ ಮಾಡಿದ್ದಾರೆ.</p>.<p>ಹಿಮಂತ ಮತ್ತು ಅವರ ಕುಟುಂಬದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರ ತಂಡವೊಂದು ಮಂಗಳವಾರ ಬೆಳಿಗ್ಗೆ ಪವನ್ ಖೇರಾ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು.</p>.<p>ಶಿವಸಾಗರ್ನಲ್ಲಿ ಪಿಟಿಐ ಜೊತೆ ಮಾತನಾಡಿದ ಹಿಮಂತ, ‘ಪವನ್ ಅವರು ನಿನ್ನೆಯೇ ಓಡಿ ಹೋಗಿದ್ದರೂ, ಪೊಲೀಸರು ಅವರ ಮನೆಗೆ ಯಾಕೆ ಹೋದರು ಎಂದು ನನಗೆ ಗೊತ್ತಿಲ್ಲ. ನಿನ್ನೆಯವರೆಗೂ ನನ್ನನ್ನು ಬಂಧಿಸಿ ಎಂದು ಅವರು ಹೇಳುತ್ತಿದ್ದರು’ ಎಂದು ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ಹಿಮಂತ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಹಲವು ಪಾಸ್ಪೋರ್ಟ್ಗಳನ್ನು ಮತ್ತು ವಿದೇಶಿ ಆಸ್ತಿಗಳನ್ನು ಹೊಂದಿದ್ದಾರೆ, ಆದರೆ ಮುಖ್ಯಮಂತ್ರಿ ಇದನ್ನು ಚುನಾವಣಾ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ ಎಂದು ಪವನ್ ಭಾನುವಾರ ಆರೋಪಿಸಿದ್ದರು. ಈ ಆರೋಪವನ್ನು ಹಿಮಂತ ಅವರು ಸುಳ್ಳು ಎಂದು ಪ್ರತಿಪಾದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-4-141676874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಸಾಗರ್ (ಪಿಟಿಐ): ಧೈರ್ಯವಿದ್ದರೆ ಬಂಧಿಸಿ ಎಂದು ಪೊಲೀಸರಿಗೆ ಸವಾಲು ಹಾಕಿದ್ದ ಕಾಂಗ್ರೆಸ್ ನಾಯಕ ಪವನ್ ಖೇರಾ ಹೈದರಾಬಾದ್ಗೆ ಓಡಿಹೋಗಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಲೇವಡಿ ಮಾಡಿದ್ದಾರೆ.</p>.<p>ಹಿಮಂತ ಮತ್ತು ಅವರ ಕುಟುಂಬದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರ ತಂಡವೊಂದು ಮಂಗಳವಾರ ಬೆಳಿಗ್ಗೆ ಪವನ್ ಖೇರಾ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿತ್ತು.</p>.<p>ಶಿವಸಾಗರ್ನಲ್ಲಿ ಪಿಟಿಐ ಜೊತೆ ಮಾತನಾಡಿದ ಹಿಮಂತ, ‘ಪವನ್ ಅವರು ನಿನ್ನೆಯೇ ಓಡಿ ಹೋಗಿದ್ದರೂ, ಪೊಲೀಸರು ಅವರ ಮನೆಗೆ ಯಾಕೆ ಹೋದರು ಎಂದು ನನಗೆ ಗೊತ್ತಿಲ್ಲ. ನಿನ್ನೆಯವರೆಗೂ ನನ್ನನ್ನು ಬಂಧಿಸಿ ಎಂದು ಅವರು ಹೇಳುತ್ತಿದ್ದರು’ ಎಂದು ಹೇಳಿದ್ದಾರೆ.</p>.<p>ಮುಖ್ಯಮಂತ್ರಿ ಹಿಮಂತ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಹಲವು ಪಾಸ್ಪೋರ್ಟ್ಗಳನ್ನು ಮತ್ತು ವಿದೇಶಿ ಆಸ್ತಿಗಳನ್ನು ಹೊಂದಿದ್ದಾರೆ, ಆದರೆ ಮುಖ್ಯಮಂತ್ರಿ ಇದನ್ನು ಚುನಾವಣಾ ಅಫಿಡವಿಟ್ನಲ್ಲಿ ಉಲ್ಲೇಖಿಸಿಲ್ಲ ಎಂದು ಪವನ್ ಭಾನುವಾರ ಆರೋಪಿಸಿದ್ದರು. ಈ ಆರೋಪವನ್ನು ಹಿಮಂತ ಅವರು ಸುಳ್ಳು ಎಂದು ಪ್ರತಿಪಾದಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-4-141676874</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>