ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷವು ‘ಇಂಡಿಯಾ’ ಕೂಟದ ಜತೆಗಿದೆ. ಮೈತ್ರಿ ಸೂತ್ರದಂತೆ ಎನ್ಸಿ ಪಕ್ಷವು ಶ್ರೀನಗರ, ಬಾರಾಮುಲ್ಲಾ ಮತ್ತು ಅನಂತನಾಗ್–ರಜೌರಿ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಪಿಡಿಪಿಗೆ ಯಾವುದೇ ಕ್ಷೇತ್ರ ಬಿಟ್ಟುಕೊಟ್ಟಿರಲಿಲ್ಲ. ಇದರಿಂದ ಮುಫ್ತಿ ಅವರು ಮೂರೂ ಕ್ಷೇತ್ರಗಳಲ್ಲಿ ಎನ್ಸಿ ವಿರುದ್ಧ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದರು. ಆದರೆ ಜಮ್ಮು ವಲಯದಲ್ಲಿ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ್ದರು.