<p><strong>ಇಂಫಾಲ</strong>: ಸಂಘರ್ಷ ಪೀಡಿತ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಮಾತುಕತೆಗಳು ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗಬಾರದು ಹಾಗೂ ಸ್ಥಳೀಯ ಜನರ ಹಿತರಕ್ಷಣೆಯೂ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಬುಧವಾರ ಹೇಳಿದ್ದಾರೆ.</p>.RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ.ಖರ್ಗೆ ರಾಜ್ಯ ಬಿಡದಿದ್ದರೆ ಪಕ್ಷ ತೊರೆಯುವುದಾಗಿ ಬೆದರಿಸಿದ್ದ ಸಿದ್ದರಾಮಯ್ಯ: HDK. <p>ಪಕ್ಷದ ಪ್ರಣಾಳಿಕೆ ‘ಸಂಕಲ್ಪ ಪತ್ರ‘ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಂತಿ ಮಾತುಕತೆಯು ಜನರ ಯೋಗಕ್ಷೇಮಕ್ಕೆ ಧಕ್ಕೆ ತರುವಂತಹ ವಿಷಯ ಹಾಗೂ ಮೂಲಭೂತ ಅಂಶಗಳನ್ನು ದುರ್ಬಲಗೊಳಿಸುವ ಪ್ರಸ್ತಾಪವನ್ನೂ ಒಪ್ಪುವುದಿಲ್ಲ ಎಂದಿದ್ದಾರೆ.</p><p>ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಔಪಚಾರಿಕ ಶಾಂತಿ ಮಾತುಕತೆಗಳು ನಡೆಯಲಿವೆ ಎನ್ನಲಾಗಿದೆ.</p>.ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನಿಗೆ ‘ಸೂರ್ಯ ತಿಲಕ’ದ ಗೌರವ.ರಾಮನವಮಿ ದಿನ ಎಎಪಿಯಿಂದ ‘ಆಪ್ ಕಾ ರಾಮರಾಜ್ಯ’ ವೆಬ್ಸೈಟ್ ಬಿಡುಗಡೆ .<p>ಮಣಿಪುರದಲ್ಲಿ ಏಕತೆ ಕಾಪಾಡಲು ಬಿಜೆಪಿ ಬದ್ಧವಾಗಿದೆ ಹಾಗೂ ರಾಜ್ಯದಲ್ಲಿ ಜನಸಂಖ್ಯಾ ಸಮತೋಲವನ್ನು ಅಡ್ಡಿಪಡಿಸಲು ಅಕ್ರಮ ವಲಸಿಗರು ಶಾಂತಿ ಕದಡುವ ಪ್ರಯತ್ನಗಳು ನಡೆಸಿದ್ದರು. ಆದರೆ ಈ ವಿಷಯ ವಿರೋಧ ಪಕ್ಷಗಳಿಗೆ ಗೊತ್ತಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿ ಬಿರೇನ್ ಹೇಳಿದ್ದಾರೆ.</p><p>ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ಗುರುತಿಸಲು ಸರ್ಕಾರ ರಚಿಸಿರುವ ಸಂಪುಟ ಉಪ ಸಮಿತಿಯ ಸದಸ್ಯರೂ ಆಗಿರುವ ಬಿಜೆಪಿಯ ಅಭ್ಯರ್ಥಿ ಬಸಂತಕುಮಾರ್ ಸಿಂಗ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.</p><p>ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಡೇರಿಸುತ್ತಾರೆ ಎಂದು ಬಿರೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ</strong>: ಸಂಘರ್ಷ ಪೀಡಿತ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವ ಮಾತುಕತೆಗಳು ರಾಜ್ಯದ ಪ್ರಾದೇಶಿಕ ಸಮಗ್ರತೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಉಂಟಾಗಬಾರದು ಹಾಗೂ ಸ್ಥಳೀಯ ಜನರ ಹಿತರಕ್ಷಣೆಯೂ ಮುಖ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಬುಧವಾರ ಹೇಳಿದ್ದಾರೆ.</p>.RamNavami: ಚುನಾವಣಾ ಪ್ರಚಾರದ ನಡುವೆಯೇ ಬಾಲರಾಮನ ‘ಸೂರ್ಯ ತಿಲಕ’ ವೀಕ್ಷಿಸಿದ ಮೋದಿ.ಖರ್ಗೆ ರಾಜ್ಯ ಬಿಡದಿದ್ದರೆ ಪಕ್ಷ ತೊರೆಯುವುದಾಗಿ ಬೆದರಿಸಿದ್ದ ಸಿದ್ದರಾಮಯ್ಯ: HDK. <p>ಪಕ್ಷದ ಪ್ರಣಾಳಿಕೆ ‘ಸಂಕಲ್ಪ ಪತ್ರ‘ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಂತಿ ಮಾತುಕತೆಯು ಜನರ ಯೋಗಕ್ಷೇಮಕ್ಕೆ ಧಕ್ಕೆ ತರುವಂತಹ ವಿಷಯ ಹಾಗೂ ಮೂಲಭೂತ ಅಂಶಗಳನ್ನು ದುರ್ಬಲಗೊಳಿಸುವ ಪ್ರಸ್ತಾಪವನ್ನೂ ಒಪ್ಪುವುದಿಲ್ಲ ಎಂದಿದ್ದಾರೆ.</p><p>ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಔಪಚಾರಿಕ ಶಾಂತಿ ಮಾತುಕತೆಗಳು ನಡೆಯಲಿವೆ ಎನ್ನಲಾಗಿದೆ.</p>.ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ: ಬಾಲರಾಮನಿಗೆ ‘ಸೂರ್ಯ ತಿಲಕ’ದ ಗೌರವ.ರಾಮನವಮಿ ದಿನ ಎಎಪಿಯಿಂದ ‘ಆಪ್ ಕಾ ರಾಮರಾಜ್ಯ’ ವೆಬ್ಸೈಟ್ ಬಿಡುಗಡೆ .<p>ಮಣಿಪುರದಲ್ಲಿ ಏಕತೆ ಕಾಪಾಡಲು ಬಿಜೆಪಿ ಬದ್ಧವಾಗಿದೆ ಹಾಗೂ ರಾಜ್ಯದಲ್ಲಿ ಜನಸಂಖ್ಯಾ ಸಮತೋಲವನ್ನು ಅಡ್ಡಿಪಡಿಸಲು ಅಕ್ರಮ ವಲಸಿಗರು ಶಾಂತಿ ಕದಡುವ ಪ್ರಯತ್ನಗಳು ನಡೆಸಿದ್ದರು. ಆದರೆ ಈ ವಿಷಯ ವಿರೋಧ ಪಕ್ಷಗಳಿಗೆ ಗೊತ್ತಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿ ಬಿರೇನ್ ಹೇಳಿದ್ದಾರೆ.</p><p>ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ಗುರುತಿಸಲು ಸರ್ಕಾರ ರಚಿಸಿರುವ ಸಂಪುಟ ಉಪ ಸಮಿತಿಯ ಸದಸ್ಯರೂ ಆಗಿರುವ ಬಿಜೆಪಿಯ ಅಭ್ಯರ್ಥಿ ಬಸಂತಕುಮಾರ್ ಸಿಂಗ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.</p><p>ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಡೇರಿಸುತ್ತಾರೆ ಎಂದು ಬಿರೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>