ಮಣಿಪುರದಲ್ಲಿ ಏಕತೆ ಕಾಪಾಡಲು ಬಿಜೆಪಿ ಬದ್ಧವಾಗಿದೆ ಹಾಗೂ ರಾಜ್ಯದಲ್ಲಿ ಜನಸಂಖ್ಯಾ ಸಮತೋಲವನ್ನು ಅಡ್ಡಿಪಡಿಸಲು ಅಕ್ರಮ ವಲಸಿಗರು ಶಾಂತಿ ಕದಡುವ ಪ್ರಯತ್ನಗಳು ನಡೆಸಿದ್ದರು. ಆದರೆ ಈ ವಿಷಯ ವಿರೋಧ ಪಕ್ಷಗಳಿಗೆ ಗೊತ್ತಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನು ಉಲ್ಲೇಖಿಸಿ ಬಿರೇನ್ ಹೇಳಿದ್ದಾರೆ.
ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ಗುರುತಿಸಲು ಸರ್ಕಾರ ರಚಿಸಿರುವ ಸಂಪುಟ ಉಪ ಸಮಿತಿಯ ಸದಸ್ಯರೂ ಆಗಿರುವ ಬಿಜೆಪಿಯ ಅಭ್ಯರ್ಥಿ ಬಸಂತಕುಮಾರ್ ಸಿಂಗ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಬಿಜೆಪಿ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಡೇರಿಸುತ್ತಾರೆ ಎಂದು ಬಿರೇನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.