ಮಾಧ್ಯಮಗಳಲ್ಲಿ ಸುದ್ದಿ ಬಹಿರಂಗವಾಗುತ್ತಿದ್ದಂತೆ ಸಂಚಲನಕ್ಕೆ ಕಾರಣವಾಗಿದ್ದು, ದೇವಾಲಯದ ಸಲಹಾ ಸಮಿತಿ ಮತ್ತು ಭಕ್ತರು ತನಿಖೆಗೆ ಒತ್ತಾಯಿಸಿದ್ದಾರೆ. ಮಣಿಗಳನ್ನು ಯಾರಾದರೂ ಕದ್ದಿದ್ದಾರೆಯೇ ಅಥವಾ ಮೂಲ ರುದ್ರಾಕ್ಷ ಮಾಲೆಯನ್ನು ಕಡಿಮೆ ಸಂಖ್ಯೆಯ ಮಣಿಗಳಿರುವ ಮಾಲೆ ಮೂಲಕ ಬದಲಾಯಿಸಲಾಗಿದೆಯೇ ಎಂದು ತನಿಖೆಯಿಂದ ಹೊರಬರಲಿ ಎಂದು ಒತ್ತಾಯಿಸಿದ್ದಾರೆ.