<p><strong>ನವದೆಹಲಿ</strong>: ಪೆಗಾಸಸ್ ವಿಚಾರದಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ(ಐಟಿ) ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ನೀಡಲಾಗಿರುವ ಹಕ್ಕುಚ್ಯುತಿ ನೋಟಿಸ್ ಕುರಿತು ಪರಿಶೀಲಿಸುತ್ತಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಗುರುವಾರ ಹೇಳಿದರು.</p>.<p>ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ‘ಹಕ್ಕುಚ್ಯುತಿ ನೋಟಿಸ್ನ ಪರಿಶೀಲನೆ ಬಳಿಕ ಸಚಿವರಿಂದ ಸ್ಪಷ್ಟನೆ ಕೇಳಲಾಗುವುದು. ಅದನ್ನು ಅವಲಂಬಿಸಿ ನೋಟಿಸ್ ಅನ್ನು ಒಪ್ಪಿಕೊಳ್ಳುವ ಅಥವಾ ತಿರಸ್ಕರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಕಾಂಗ್ರೆಸ್ನ ಕೆ.ಸಿ.ವೇಣುಗೋಪಾಲ್ ಹಾಗೂ ಇನ್ನಿಬ್ಬರು ಸಂಸದರು ಸಚಿವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ’ ಎಂದು ನಾಯ್ಡು ಹೇಳಿದರು.</p>.<p>ಪೆಗಾಸಸ್ ಕುತಂತ್ರಾಂಶ ಪ್ರಕರಣ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳೆದ ವರ್ಷ ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಹಕ್ಕುಚ್ಯುತಿ ನಿಲುವಳಿ ಮಂಡಿಸಲು ವಿರೋಧ ಪಕ್ಷಗಳ ಸಂಸದರು ನೋಟಿಸ್ ನೀಡಿದ್ದಾರೆ.</p>.<p>ಪೆಗಾಸಸ್ ಕುರಿತಂತೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಈಗ ನೋಟಿಸ್ ನೀಡಲಾಗಿದೆ. ಈ ವರದಿ ಪ್ರಕಾರ, ಕುತಂತ್ರಾಂಶವು ಇಸ್ರೇಲ್ ಜೊತೆಗೆ 2017ರಲ್ಲಿ ನಡೆದಿದ್ದ ರಕ್ಷಣಾ ಪರಿಕರ ವಹಿವಾಟಿನ ಭಾಗವೇ ಆಗಿತ್ತು.</p>.<p>ಕಳೆದ ವರ್ಷ ಜುಲೈನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ವೈಷ್ಣವ್ ಅವರು, ‘ಪೆಗಾಸಸ್ ಕುರಿತು ಅಧಿವೇಶನ ಸಂದರ್ಭದಲ್ಲಿಯೇ ಲೇಖನ ಪ್ರಕಟವಾಗಿರುವುದು ಕಾಕತಾಳೀಯ ಅಲ್ಲ. ಇದನ್ನು ಪ್ರಮುಖವಾಗಿ ಪರಿಗಣಿಸಲು ಆಧಾರಗಳಿಲ್ಲ’ ಎಂದಿದ್ದರು.</p>.<p>ಇಸ್ರೇಲ್ನ ಎನ್ಎಸ್ಒ ಗ್ರೂಪ್ ಕಂಪನಿಯು ತಯಾರಿಸುತ್ತಿರುವ ಪೆಗಾಸಸ್ ಬೇಹುಗಾರಿಕೆ ತಂತ್ರಾಂಶ ಬಳಸಿ ಜಗತ್ತಿನಾದ್ಯಂತ 50 ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ಅದರಲ್ಲಿ ಭಾರತದ ವಿರೋಧ ಪಕ್ಷಗಳ ಮುಖಂಡರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪೆಗಾಸಸ್ ವಿಚಾರದಲ್ಲಿ ಕೇಂದ್ರ ಮಾಹಿತಿ ತಂತ್ರಜ್ಞಾನ(ಐಟಿ) ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ನೀಡಲಾಗಿರುವ ಹಕ್ಕುಚ್ಯುತಿ ನೋಟಿಸ್ ಕುರಿತು ಪರಿಶೀಲಿಸುತ್ತಿರುವುದಾಗಿ ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಗುರುವಾರ ಹೇಳಿದರು.</p>.<p>ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ‘ಹಕ್ಕುಚ್ಯುತಿ ನೋಟಿಸ್ನ ಪರಿಶೀಲನೆ ಬಳಿಕ ಸಚಿವರಿಂದ ಸ್ಪಷ್ಟನೆ ಕೇಳಲಾಗುವುದು. ಅದನ್ನು ಅವಲಂಬಿಸಿ ನೋಟಿಸ್ ಅನ್ನು ಒಪ್ಪಿಕೊಳ್ಳುವ ಅಥವಾ ತಿರಸ್ಕರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು’ ಎಂದು ತಿಳಿಸಿದರು.</p>.<p>‘ಕಾಂಗ್ರೆಸ್ನ ಕೆ.ಸಿ.ವೇಣುಗೋಪಾಲ್ ಹಾಗೂ ಇನ್ನಿಬ್ಬರು ಸಂಸದರು ಸಚಿವರ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ್ದಾರೆ’ ಎಂದು ನಾಯ್ಡು ಹೇಳಿದರು.</p>.<p>ಪೆಗಾಸಸ್ ಕುತಂತ್ರಾಂಶ ಪ್ರಕರಣ ಸಂಬಂಧ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಳೆದ ವರ್ಷ ಸಂಸತ್ತಿನಲ್ಲಿ ನೀಡಿದ್ದ ಹೇಳಿಕೆಗೆ ಸಂಬಂಧಿಸಿ ಅವರ ವಿರುದ್ಧ ಹಕ್ಕುಚ್ಯುತಿ ನಿಲುವಳಿ ಮಂಡಿಸಲು ವಿರೋಧ ಪಕ್ಷಗಳ ಸಂಸದರು ನೋಟಿಸ್ ನೀಡಿದ್ದಾರೆ.</p>.<p>ಪೆಗಾಸಸ್ ಕುರಿತಂತೆ ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಈಗ ನೋಟಿಸ್ ನೀಡಲಾಗಿದೆ. ಈ ವರದಿ ಪ್ರಕಾರ, ಕುತಂತ್ರಾಂಶವು ಇಸ್ರೇಲ್ ಜೊತೆಗೆ 2017ರಲ್ಲಿ ನಡೆದಿದ್ದ ರಕ್ಷಣಾ ಪರಿಕರ ವಹಿವಾಟಿನ ಭಾಗವೇ ಆಗಿತ್ತು.</p>.<p>ಕಳೆದ ವರ್ಷ ಜುಲೈನಲ್ಲಿ ನಡೆದ ಮುಂಗಾರು ಅಧಿವೇಶನದಲ್ಲಿ ವೈಷ್ಣವ್ ಅವರು, ‘ಪೆಗಾಸಸ್ ಕುರಿತು ಅಧಿವೇಶನ ಸಂದರ್ಭದಲ್ಲಿಯೇ ಲೇಖನ ಪ್ರಕಟವಾಗಿರುವುದು ಕಾಕತಾಳೀಯ ಅಲ್ಲ. ಇದನ್ನು ಪ್ರಮುಖವಾಗಿ ಪರಿಗಣಿಸಲು ಆಧಾರಗಳಿಲ್ಲ’ ಎಂದಿದ್ದರು.</p>.<p>ಇಸ್ರೇಲ್ನ ಎನ್ಎಸ್ಒ ಗ್ರೂಪ್ ಕಂಪನಿಯು ತಯಾರಿಸುತ್ತಿರುವ ಪೆಗಾಸಸ್ ಬೇಹುಗಾರಿಕೆ ತಂತ್ರಾಂಶ ಬಳಸಿ ಜಗತ್ತಿನಾದ್ಯಂತ 50 ಸಾವಿರಕ್ಕೂ ಹೆಚ್ಚು ಮಂದಿಯ ಮೇಲೆ ಬೇಹುಗಾರಿಕೆ ನಡೆಸಲಾಗಿದೆ. ಅದರಲ್ಲಿ ಭಾರತದ ವಿರೋಧ ಪಕ್ಷಗಳ ಮುಖಂಡರು, ಪತ್ರಕರ್ತರು, ಸಾಮಾಜಿಕ ಹೋರಾಟಗಾರರು ಇದ್ದಾರೆ ಎಂಬ ಆರೋಪ ಕೇಳಿಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>