<p class="title"><strong>ನವದೆಹಲಿ:</strong> ‘ಪೆಗಾಸಸ್ ಗೂಢಚರ್ಯೆ ಪ್ರಕರಣ ಕುರಿತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನುಕೇಂದ್ರ ಸರ್ಕಾರವು ಬಹಿರಂಗಪಡಿಸಬೇಕು ಎಂದು ತಾನು ಬಯಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿತು.</p>.<p class="title">ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಕುರಿತಂತೆ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್ ಅನ್ನೂ ಜಾರಿ ಮಾಡಿತು.</p>.<p>ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಎದುರು, ‘ಮಾಹಿತಿಯು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ‘ ಎಂದುಕೇಂದ್ರ ಸರ್ಕಾರ ತಿಳಿಸಿತು.</p>.<p>ಆಗ ಮೇಲಿನ ಮಾತು ಹೇಳಿದ ಪೀಠವು, ಈ ಕುರಿತ ಅರ್ಜಿಗಳ ವಿಚಾರಣೆಯನ್ನು 10 ದಿನದ ನಂತರ ತೆಗೆದುಕೊಳ್ಳಲಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿತು.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಭೋಸ್ ಅವರೂ ಸದಸ್ಯರಾಗಿದ್ದ ಪೀಠವು, ಸರ್ಕಾರ ಈ ಕುರಿತು ಸಮಗ್ರ ಪ್ರಮಾಣಪತ್ರ ಸಲ್ಲಿಸಲಿದೆ ಎಂದು ಭಾವಿಸಿದ್ದೆವು ಎಂದೂ ಹೇಳಿತು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈಗಾಗಲೇ ಸಲ್ಲಿಸಿದ ಪ್ರಮಾಣಪತ್ರದಲ್ಲಿಯೇ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ ಎಂದರು.</p>.<p>‘ಈಗಾಗಲೇ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ.ಸರ್ವೋಚ್ಚ ನ್ಯಾಯಾಲಯದ ಎದುರು ಕೇಂದ್ರ ಸರ್ಕಾರ ನಿಂತಿದೆ. ನಮ್ಮ ದೃಷ್ಟಿಕೋನದಿಂದ ಈ ಅಂಶವನ್ನು ಪರಿಶೀಲಿಸಬೇಕು‘ ಎಂದೂ ಮೆಹ್ತಾ ಅವರು ಕೋರಿದರು.</p>.<p>’ಈ ವಿಷಯದ ಕುರಿತ ಎಲ್ಲ ಅಂಶಗಳನ್ನು ಪರಿಶೀಲಿಸಲುಕೇಂದ್ರ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಲಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದೆ. ಸಮಿತಿಯ ವರದಿಯನ್ನೂ ಕೋರ್ಟ್ಗೆ ಸಲ್ಲಿಸಲಾಗುತ್ತದೆ. ಇದರಲ್ಲಿ ಮರೆಮಾಚುವಂತಹದು ಏನೂ ಇಲ್ಲ. ಆದರೆ, ಇಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೂ ಇದೆ‘ ಎಂದು ತಿಳಿಸಿದರು.</p>.<p>‘ಇದು, ಸಾರ್ವಜನಿಕವಾಗಿ ಚರ್ಚೆಯಾಗಬೇಕಾದ ವಿಷಯವಲ್ಲ‘ ಎಂದು ಮೆಹ್ತಾ ಅಭಿಪ್ರಾಯಪಟ್ಟರು. ಪೆಗಾಸಸ್ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಭಾರತೀಯ ಸಂಪಾದಕರ ಒಕ್ಕೂಟವು ಸೇರಿ ಹಲವರು ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ‘ಪೆಗಾಸಸ್ ಗೂಢಚರ್ಯೆ ಪ್ರಕರಣ ಕುರಿತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನುಕೇಂದ್ರ ಸರ್ಕಾರವು ಬಹಿರಂಗಪಡಿಸಬೇಕು ಎಂದು ತಾನು ಬಯಸುವುದಿಲ್ಲ’ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಸ್ಪಷ್ಟಪಡಿಸಿತು.</p>.<p class="title">ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಕುರಿತಂತೆ ಸ್ವತಂತ್ರ ತನಿಖೆ ನಡೆಸಲು ಕೋರಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್ ಅನ್ನೂ ಜಾರಿ ಮಾಡಿತು.</p>.<p>ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠದ ಎದುರು, ‘ಮಾಹಿತಿಯು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ್ದಾಗಿದೆ‘ ಎಂದುಕೇಂದ್ರ ಸರ್ಕಾರ ತಿಳಿಸಿತು.</p>.<p>ಆಗ ಮೇಲಿನ ಮಾತು ಹೇಳಿದ ಪೀಠವು, ಈ ಕುರಿತ ಅರ್ಜಿಗಳ ವಿಚಾರಣೆಯನ್ನು 10 ದಿನದ ನಂತರ ತೆಗೆದುಕೊಳ್ಳಲಿದ್ದು, ಮುಂದೆ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿತು.</p>.<p>ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಅನಿರುದ್ಧ ಭೋಸ್ ಅವರೂ ಸದಸ್ಯರಾಗಿದ್ದ ಪೀಠವು, ಸರ್ಕಾರ ಈ ಕುರಿತು ಸಮಗ್ರ ಪ್ರಮಾಣಪತ್ರ ಸಲ್ಲಿಸಲಿದೆ ಎಂದು ಭಾವಿಸಿದ್ದೆವು ಎಂದೂ ಹೇಳಿತು. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಈಗಾಗಲೇ ಸಲ್ಲಿಸಿದ ಪ್ರಮಾಣಪತ್ರದಲ್ಲಿಯೇ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಿದೆ ಎಂದರು.</p>.<p>‘ಈಗಾಗಲೇ ಪ್ರಮಾಣಪತ್ರವನ್ನು ಸಲ್ಲಿಸಲಾಗಿದೆ.ಸರ್ವೋಚ್ಚ ನ್ಯಾಯಾಲಯದ ಎದುರು ಕೇಂದ್ರ ಸರ್ಕಾರ ನಿಂತಿದೆ. ನಮ್ಮ ದೃಷ್ಟಿಕೋನದಿಂದ ಈ ಅಂಶವನ್ನು ಪರಿಶೀಲಿಸಬೇಕು‘ ಎಂದೂ ಮೆಹ್ತಾ ಅವರು ಕೋರಿದರು.</p>.<p>’ಈ ವಿಷಯದ ಕುರಿತ ಎಲ್ಲ ಅಂಶಗಳನ್ನು ಪರಿಶೀಲಿಸಲುಕೇಂದ್ರ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಲಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದೆ. ಸಮಿತಿಯ ವರದಿಯನ್ನೂ ಕೋರ್ಟ್ಗೆ ಸಲ್ಲಿಸಲಾಗುತ್ತದೆ. ಇದರಲ್ಲಿ ಮರೆಮಾಚುವಂತಹದು ಏನೂ ಇಲ್ಲ. ಆದರೆ, ಇಲ್ಲಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೂ ಇದೆ‘ ಎಂದು ತಿಳಿಸಿದರು.</p>.<p>‘ಇದು, ಸಾರ್ವಜನಿಕವಾಗಿ ಚರ್ಚೆಯಾಗಬೇಕಾದ ವಿಷಯವಲ್ಲ‘ ಎಂದು ಮೆಹ್ತಾ ಅಭಿಪ್ರಾಯಪಟ್ಟರು. ಪೆಗಾಸಸ್ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಭಾರತೀಯ ಸಂಪಾದಕರ ಒಕ್ಕೂಟವು ಸೇರಿ ಹಲವರು ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>