<p><strong>ನವದೆಹಲಿ (ಪಿಟಿಐ):</strong> ಪಿಂಚಣಿ ಆಡಳಿತ ವ್ಯವಸ್ಥೆಗೆ ತುರ್ತಾಗಿ ಸಾಂಸ್ಥಿಕ ಸಂಯೋಜನೆ ಮತ್ತು ವ್ಯವಸ್ಥಿತ ಸುಧಾರಣೆಯ ಅಗತ್ಯವಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಪ್ರತಿಪಾದಿಸಿದರು.</p>.<p>ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಪಿಂಚಣಿ ವ್ಯಾಜ್ಯಗಳ ಕುರಿತು ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.</p>.<p>ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಒಟ್ಟು ಸಿಬ್ಬಂದಿಗೂ ಹೆಚ್ಚಿನ ಸಂಖ್ಯೆಯಲ್ಲಿ ಪಿಂಚಣಿದಾರರು ಇದ್ದಾರೆ. ಹೀಗಾಗಿ ಪಿಂಚಣಿ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆಗಳು ಆಗಬೇಕಿವೆ ಎಂದು ಅವರು ಹೇಳಿದರು.</p>.<p>ಪಿಂಚಣಿ ಸಂಬಂಧಿತ ಕಾನೂನು ವಿವಾದಗಳನ್ನು ಕಡಿಮೆಗೊಳಿಸುವ ಮತ್ತು ತ್ವರಿತವಾಗಿ ನ್ಯಾಯ ದೊರಕಿಸುವುದನ್ನು ಖಾತರಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಅಲ್ಲದೆ ಹಿರಿಯ ನಾಗರಿಕರಿಗೆ ಅನಗತ್ಯ ಕಿರಿಕಿರಿ ತಪ್ಪಿಸಿ, ಪರಿಣಾಮಕಾರಿಯಾಗಿ ಸೇವೆ ದೊರೆಯುವಂತೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. </p>.<p>60 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರದ ಪಿಂಚಣಿದಾರರು ಇದ್ದಾರೆ ಎಂದು ಮಾಹಿತಿ ನೀಡಿದ ಸಚಿವರು, ಕಾನೂನನ್ನು ತಪ್ಪಾಗಿ ಅರ್ಥೈಸುವುದರಿಂದ ಮತ್ತು ಕುಂದುಕೊರತೆಗಳನ್ನು ಪರಿಹರಿಸುವಲ್ಲಿನ ವಿಳಂಬದಿಂದಾಗಿ ಹಿರಿಯ ನಾಗರಿಕರಿಗೆ ಕಿರಿಕಿರಿ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. </p>.<p>ಪ್ರಸ್ತುತ ವಿವಿಧ ವೇದಿಕೆಗಳಲ್ಲಿ ಪಿಂಚಣಿ ಸಂಬಂಧ 300ಕ್ಕೂ ಹೆಚ್ಚು ಪ್ರಕರಣಗಳು ಬಾಕಿಯಿವೆ. ಇದರಲ್ಲಿ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ)ಯಲ್ಲಿಯೇ ಶೇ 70ರಷ್ಟು ಪ್ರಕರಣಗಳಿವೆ ಎಂದು ಅವರು ಅಂಕಿ ಅಂಶ ನೀಡಿದರು.</p>.<p>‘ವ್ಯಾಜ್ಯವು ಯಾವಾಗಲೂ ಕೊನೆಯ ಮಾರ್ಗವಾಗಬೇಕೇ ಹೊರತು, ಮೊದಲಿನದ್ದಲ್ಲ’ ಎಂದ ಸಚಿವರು, ಪಿಂಚಣಿದಾರರ ದೂರು, ಕುಂದುಕೊರತೆಗಳನ್ನು ಎಚ್ಚರದಿಂದ ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. </p>.<p>ಕಾರ್ಯಾಗಾರಕ್ಕೆ ವರ್ಚುವಲ್ ಆಗಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು, ‘2028ರ ವೇಳೆಗೆ ಪಿಂಚಣಿ ಸಂಬಂಧಿತ ಯಾವುದೇ ವ್ಯಾಜ್ಯ ಇಲ್ಲದಂತೆ ಆಡಳಿತಾತ್ಮಕ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪಿಂಚಣಿ ಆಡಳಿತ ವ್ಯವಸ್ಥೆಗೆ ತುರ್ತಾಗಿ ಸಾಂಸ್ಥಿಕ ಸಂಯೋಜನೆ ಮತ್ತು ವ್ಯವಸ್ಥಿತ ಸುಧಾರಣೆಯ ಅಗತ್ಯವಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಬುಧವಾರ ಪ್ರತಿಪಾದಿಸಿದರು.</p>.<p>ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಪಿಂಚಣಿ ವ್ಯಾಜ್ಯಗಳ ಕುರಿತು ವಿಜ್ಞಾನ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.</p>.<p>ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಒಟ್ಟು ಸಿಬ್ಬಂದಿಗೂ ಹೆಚ್ಚಿನ ಸಂಖ್ಯೆಯಲ್ಲಿ ಪಿಂಚಣಿದಾರರು ಇದ್ದಾರೆ. ಹೀಗಾಗಿ ಪಿಂಚಣಿ ಆಡಳಿತ ವ್ಯವಸ್ಥೆಯಲ್ಲಿ ಗಣನೀಯ ಸುಧಾರಣೆಗಳು ಆಗಬೇಕಿವೆ ಎಂದು ಅವರು ಹೇಳಿದರು.</p>.<p>ಪಿಂಚಣಿ ಸಂಬಂಧಿತ ಕಾನೂನು ವಿವಾದಗಳನ್ನು ಕಡಿಮೆಗೊಳಿಸುವ ಮತ್ತು ತ್ವರಿತವಾಗಿ ನ್ಯಾಯ ದೊರಕಿಸುವುದನ್ನು ಖಾತರಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಅಲ್ಲದೆ ಹಿರಿಯ ನಾಗರಿಕರಿಗೆ ಅನಗತ್ಯ ಕಿರಿಕಿರಿ ತಪ್ಪಿಸಿ, ಪರಿಣಾಮಕಾರಿಯಾಗಿ ಸೇವೆ ದೊರೆಯುವಂತೆ ಮಾಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. </p>.<p>60 ಲಕ್ಷಕ್ಕೂ ಹೆಚ್ಚು ಕೇಂದ್ರ ಸರ್ಕಾರದ ಪಿಂಚಣಿದಾರರು ಇದ್ದಾರೆ ಎಂದು ಮಾಹಿತಿ ನೀಡಿದ ಸಚಿವರು, ಕಾನೂನನ್ನು ತಪ್ಪಾಗಿ ಅರ್ಥೈಸುವುದರಿಂದ ಮತ್ತು ಕುಂದುಕೊರತೆಗಳನ್ನು ಪರಿಹರಿಸುವಲ್ಲಿನ ವಿಳಂಬದಿಂದಾಗಿ ಹಿರಿಯ ನಾಗರಿಕರಿಗೆ ಕಿರಿಕಿರಿ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. </p>.<p>ಪ್ರಸ್ತುತ ವಿವಿಧ ವೇದಿಕೆಗಳಲ್ಲಿ ಪಿಂಚಣಿ ಸಂಬಂಧ 300ಕ್ಕೂ ಹೆಚ್ಚು ಪ್ರಕರಣಗಳು ಬಾಕಿಯಿವೆ. ಇದರಲ್ಲಿ ಕೇಂದ್ರೀಯ ಆಡಳಿತ ನ್ಯಾಯಮಂಡಳಿ (ಸಿಎಟಿ)ಯಲ್ಲಿಯೇ ಶೇ 70ರಷ್ಟು ಪ್ರಕರಣಗಳಿವೆ ಎಂದು ಅವರು ಅಂಕಿ ಅಂಶ ನೀಡಿದರು.</p>.<p>‘ವ್ಯಾಜ್ಯವು ಯಾವಾಗಲೂ ಕೊನೆಯ ಮಾರ್ಗವಾಗಬೇಕೇ ಹೊರತು, ಮೊದಲಿನದ್ದಲ್ಲ’ ಎಂದ ಸಚಿವರು, ಪಿಂಚಣಿದಾರರ ದೂರು, ಕುಂದುಕೊರತೆಗಳನ್ನು ಎಚ್ಚರದಿಂದ ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಳ್ಳಬೇಕು ಎಂದು ಸೂಚಿಸಿದರು. </p>.<p>ಕಾರ್ಯಾಗಾರಕ್ಕೆ ವರ್ಚುವಲ್ ಆಗಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು, ‘2028ರ ವೇಳೆಗೆ ಪಿಂಚಣಿ ಸಂಬಂಧಿತ ಯಾವುದೇ ವ್ಯಾಜ್ಯ ಇಲ್ಲದಂತೆ ಆಡಳಿತಾತ್ಮಕ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>