<p><strong>ನವದೆಹಲಿ:</strong> ‘ಮಕ್ಕಳ ಭವಿಷ್ಯಕ್ಕಾಗಿ ಹೆತ್ತವರು ಉಳಿತಾಯ ಮಾಡಿ ಪಿಂಚಣಿ ನೀಡುವ ‘ಎನ್ಪಿಎಸ್ ವಾತ್ಸಲ್ಯ’ ಯೋಜನೆಗೆ ಸೆ. 18ರಂದು ಕೇಂದ್ರ ಸರ್ಕಾರ ಚಾಲನೆ ನೀಡಲಿದೆ’ ಎಂದು ಹಣಕಾಸು ಸಚಿವಾಲಯವು ಸೋಮವಾರ ತಿಳಿಸಿದೆ. </p>.<p>‘ಎನ್ಪಿಸ್ ವಾತ್ಯಲ್ಸ’ವು ಎಲ್ಲರಿಗೂ ಅನುಕೂಲ ಮಾಡುವಂತಹ ಹೂಡಿಕೆಗೆ ಅವಕಾಶ ಕಲ್ಪಿಸಿದ್ದು, ತಮ್ಮ ಮಕ್ಕಳ ಹೆಸರಿನಲ್ಲಿ ವಾರ್ಷಿಕ ₹1 ಸಾವಿರ ಹೂಡಿಕೆಗೂ ಅವಕಾಶ ಕಲ್ಪಿಸಲಿದೆ. ಎಲ್ಲ ವರ್ಗದ ಆರ್ಥಿಕ ಹಿನ್ನೆಲೆ ಹೊಂದಿರುವವರಿಗೂ ಈ ಯೋಜನೆಯೂ ಲಭ್ಯವಾಗಲಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p> ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಸೇರ್ಪಡೆಗೊಳ್ಳುವವರಿಗೆ ಅವಕಾಶ ಮಾಡಿಕೊಡುವ ಆನ್ಲೈನ್ ವೇದಿಕೆಗೂ ಚಾಲನೆ ನೀಡಲಿದ್ದಾರೆ. ಜುಲೈನಲ್ಲಿ ಅವರು ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಿದ್ದರು.</p><p>ಪಿಂಚಣಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್ಡಿಎ) ಅಡಿಯಲ್ಲಿ ಈ ಯೋಜನೆ ಜಾರಿಗೆ ಬರಲಿದೆ.</p><p>ನವದೆಹಲಿ ಮಾತ್ರವಲ್ಲದೇ, ದೇಶದ 75 ಸ್ಥಳಗಳಲ್ಲಿ ಏಕಕಾಲಕ್ಕೆ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಇತರೆ ಪ್ರದೇಶದವರು ವಿಡಿಯೊ ಕಾನ್ಪರೆನ್ಸ್ ಮೂಲಕ ಭಾಗಿಯಾಗಲಿದ್ದು, ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿ ಮಾಡಿದವರಿಗೆ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ (ಪ್ರಾಣ್) ವಿತರಿಸಲಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಮಕ್ಕಳ ಭವಿಷ್ಯಕ್ಕಾಗಿ ಹೆತ್ತವರು ಉಳಿತಾಯ ಮಾಡಿ ಪಿಂಚಣಿ ನೀಡುವ ‘ಎನ್ಪಿಎಸ್ ವಾತ್ಸಲ್ಯ’ ಯೋಜನೆಗೆ ಸೆ. 18ರಂದು ಕೇಂದ್ರ ಸರ್ಕಾರ ಚಾಲನೆ ನೀಡಲಿದೆ’ ಎಂದು ಹಣಕಾಸು ಸಚಿವಾಲಯವು ಸೋಮವಾರ ತಿಳಿಸಿದೆ. </p>.<p>‘ಎನ್ಪಿಸ್ ವಾತ್ಯಲ್ಸ’ವು ಎಲ್ಲರಿಗೂ ಅನುಕೂಲ ಮಾಡುವಂತಹ ಹೂಡಿಕೆಗೆ ಅವಕಾಶ ಕಲ್ಪಿಸಿದ್ದು, ತಮ್ಮ ಮಕ್ಕಳ ಹೆಸರಿನಲ್ಲಿ ವಾರ್ಷಿಕ ₹1 ಸಾವಿರ ಹೂಡಿಕೆಗೂ ಅವಕಾಶ ಕಲ್ಪಿಸಲಿದೆ. ಎಲ್ಲ ವರ್ಗದ ಆರ್ಥಿಕ ಹಿನ್ನೆಲೆ ಹೊಂದಿರುವವರಿಗೂ ಈ ಯೋಜನೆಯೂ ಲಭ್ಯವಾಗಲಿದೆ’ ಎಂದು ಸಚಿವಾಲಯ ತಿಳಿಸಿದೆ.</p>.<p> ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಸೇರ್ಪಡೆಗೊಳ್ಳುವವರಿಗೆ ಅವಕಾಶ ಮಾಡಿಕೊಡುವ ಆನ್ಲೈನ್ ವೇದಿಕೆಗೂ ಚಾಲನೆ ನೀಡಲಿದ್ದಾರೆ. ಜುಲೈನಲ್ಲಿ ಅವರು ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಯನ್ನು ಘೋಷಿಸಿದ್ದರು.</p><p>ಪಿಂಚಣಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್ಡಿಎ) ಅಡಿಯಲ್ಲಿ ಈ ಯೋಜನೆ ಜಾರಿಗೆ ಬರಲಿದೆ.</p><p>ನವದೆಹಲಿ ಮಾತ್ರವಲ್ಲದೇ, ದೇಶದ 75 ಸ್ಥಳಗಳಲ್ಲಿ ಏಕಕಾಲಕ್ಕೆ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಇತರೆ ಪ್ರದೇಶದವರು ವಿಡಿಯೊ ಕಾನ್ಪರೆನ್ಸ್ ಮೂಲಕ ಭಾಗಿಯಾಗಲಿದ್ದು, ಕಾರ್ಯಕ್ರಮದಲ್ಲಿ ಹೊಸದಾಗಿ ನೋಂದಣಿ ಮಾಡಿದವರಿಗೆ ಶಾಶ್ವತ ನಿವೃತ್ತಿ ಖಾತೆ ಸಂಖ್ಯೆ (ಪ್ರಾಣ್) ವಿತರಿಸಲಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>