<p><strong>ನವದೆಹಲಿ</strong>: ‘ಭಾರತದ ಬಗ್ಗೆ ಕೆಟ್ಟದ್ದಾಗಿ ಮತ್ತು ನಕಾರಾತ್ಮಕವಾಗಿ ಬಿಂಬಿಸುವ ದೇಶದ್ರೋಹಿಗಳನ್ನು ಎದುರಿಸಲು ಸಂಶೋಧನಾ ವಿದ್ವಾಂಸರು ಮುಂಚೂಣಿಯಲ್ಲಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಬುಧವಾರ ಇಲ್ಲಿ ಹೇಳಿದರು.</p>.<p>‘ವಿನಾಶಕಾರಿ ಕಾರ್ಯಸೂಚಿ ಹೊಂದಿರುವವರಿಗೆ ಇಲ್ಲಿ ಕೆಲಸ ಮಾಡಲು ಆಗದಿದ್ದರೆ, ಯುರೋಪ್ಗೆ ಹೋಗಬಹುದು. ಯಾವಾಗಲೂ ಇಂತಹ ಅವಕಾಶಗಳನ್ನು ಪಡೆಯುವವರು ಇರುತ್ತಾರೆ’ ಎಂದು ಯುರೋಪ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಪ್ರಸ್ತಾಪಿಸದೆ, ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.</p>.<p>‘ಭಾರತದ ಅಭಿವೃದ್ಧಿಯನ್ನು ನೋಡಿದಾಗ ಕೆಲವರು ಅಜೀರ್ಣರಾದವರಂತೆ ನಡೆದುಕೊಳ್ಳುತ್ತಾರೆ’ ಎಂದು ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ನ (ಐಸಿಡಬ್ಲ್ಯುಎ) ನವೀಕೃತ ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.</p>.<p>ಐಸಿಡಬ್ಲ್ಯುಎಯ ಸಂಶೋಧನಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಯವರು, ‘ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ 20 ಶೃಂಗದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇದು ಜಾಗತಿಕ ಒಮ್ಮತಕ್ಕೆ ಕಾರಣವಾಗಿದೆ. ಪುನರುತ್ಥಾನವಾದ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿತು. ಇದಕ್ಕೆ ಕಾನೂನು ಮಾನ್ಯತೆಯೂ ಸಿಕ್ಕಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಭಾರತದ ಬಗ್ಗೆ ಕೆಟ್ಟದ್ದಾಗಿ ಮತ್ತು ನಕಾರಾತ್ಮಕವಾಗಿ ಬಿಂಬಿಸುವ ದೇಶದ್ರೋಹಿಗಳನ್ನು ಎದುರಿಸಲು ಸಂಶೋಧನಾ ವಿದ್ವಾಂಸರು ಮುಂಚೂಣಿಯಲ್ಲಿರಬೇಕು’ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಬುಧವಾರ ಇಲ್ಲಿ ಹೇಳಿದರು.</p>.<p>‘ವಿನಾಶಕಾರಿ ಕಾರ್ಯಸೂಚಿ ಹೊಂದಿರುವವರಿಗೆ ಇಲ್ಲಿ ಕೆಲಸ ಮಾಡಲು ಆಗದಿದ್ದರೆ, ಯುರೋಪ್ಗೆ ಹೋಗಬಹುದು. ಯಾವಾಗಲೂ ಇಂತಹ ಅವಕಾಶಗಳನ್ನು ಪಡೆಯುವವರು ಇರುತ್ತಾರೆ’ ಎಂದು ಯುರೋಪ್ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಪ್ರಸ್ತಾಪಿಸದೆ, ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.</p>.<p>‘ಭಾರತದ ಅಭಿವೃದ್ಧಿಯನ್ನು ನೋಡಿದಾಗ ಕೆಲವರು ಅಜೀರ್ಣರಾದವರಂತೆ ನಡೆದುಕೊಳ್ಳುತ್ತಾರೆ’ ಎಂದು ಇಂಡಿಯನ್ ಕೌನ್ಸಿಲ್ ಆಫ್ ವರ್ಲ್ಡ್ ಅಫೇರ್ಸ್ನ (ಐಸಿಡಬ್ಲ್ಯುಎ) ನವೀಕೃತ ಗ್ರಂಥಾಲಯದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.</p>.<p>ಐಸಿಡಬ್ಲ್ಯುಎಯ ಸಂಶೋಧನಾ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಉಪರಾಷ್ಟ್ರಪತಿಯವರು, ‘ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ 20 ಶೃಂಗದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಇದು ಜಾಗತಿಕ ಒಮ್ಮತಕ್ಕೆ ಕಾರಣವಾಗಿದೆ. ಪುನರುತ್ಥಾನವಾದ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿತು. ಇದಕ್ಕೆ ಕಾನೂನು ಮಾನ್ಯತೆಯೂ ಸಿಕ್ಕಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>