<p><strong>ಮದುರೈ:</strong> ‘ಕೆಲ ಸ್ಥಳಗಳಲ್ಲಿ, ಅದರಲ್ಲೂ ವಿಶೇಷವಾಗಿ ದೇವಸ್ಥಾನಗಳಲ್ಲಿನ ‘ವಿಐಪಿ ಸಂಸ್ಕೃತಿ’ಯಿಂದ ಜನರು ಹತಾಶರಾಗಿದ್ದಾರೆ’ ಎಂದು ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ಬುಧವಾರ ಹೇಳಿದೆ.</p>.<p>‘ಗಣ್ಯ ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಮಾತ್ರ ದೇವಸ್ಥಾನಗಳಲ್ಲಿ ವಿಐಪಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ಗಣ್ಯರ ಸಂಬಂಧಿಕರಿಗೆ ಈ ಸೌಲಭ್ಯ ನೀಡಬಾರದು’ ಎಂದು ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣಿಯಮ್ ಹೇಳಿದರು.</p>.<p><a href="https://www.prajavani.net/world-news/pak-responsible-nuclear-power-but-will-respond-with-full-force-if-attacked-president-alvi-921987.html" itemprop="url">ದಾಳಿ ನಡೆದರೆ ಅಣ್ವಸ್ತ್ರ ಮೂಲಕ ಪ್ರತ್ಯುತ್ತರ: ಪಾಕ್ ಅಧ್ಯಕ್ಷ ಆರಿಫ್ ಅಲ್ವಿ </a></p>.<p>ತೂತ್ತುಕುಡಿ ಜಿಲ್ಲೆಯ ತಿರುಚೆಂಡೂರ್ನಲ್ಲಿರುವ ಪ್ರಸಿದ್ಧ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿರುವ ವಿಶೇಷ ದರ್ಶನ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು.</p>.<p>‘ಕೆಲ ದೇವಸ್ಥಾನಗಳಲ್ಲಿ ವಿಶೇಷ ದರ್ಶನ ವ್ಯವಸ್ಥೆ ಇರಬೇಕು ಎಂಬ ವಾದ ಸರಿ. ಆದರೆ, ಎಲ್ಲ ನಾಗರಿಕರು ಸಮಾನ ಎಂಬ ಆಶಯಕ್ಕೆ ಈ ವ್ಯವಸ್ಥೆ ಧಕ್ಕೆ ತರಬಾರದು. ಅದರಲ್ಲೂ, ದೇವಸ್ಥಾನಗಳಂತಹ ಸ್ಥಳಗಳಲ್ಲಿ ಈ ವಿಐಪಿ ಸಂಸ್ಕೃತಿಯಿಂದ ಜನರು ರೋಸಿ ಹೋಗಿದ್ದಾರೆ. ಅವರು ಶಾಪ ಹಾಕುತ್ತಿದ್ದಾರೆ’ ಎಂದು ನ್ಯಾಯಮೂರ್ತಿಸುಬ್ರಮಣಿಯಮ್ ಹೇಳಿದರು.</p>.<p><a href="https://www.prajavani.net/district/udupi/karnataka-hindu-originations-kaapu-absence-of-muslim-traders-921991.html" itemprop="url">ಮುಸ್ಲಿಂ ವ್ಯಾಪಾರಿಗಳ ಅನುಪಸ್ಥಿತಿಯಲ್ಲಿ ಕಾಪು ಜಾತ್ರೆ ಮುಕ್ತಾಯ </a></p>.<p>ಸಾರ್ವಜನಿಕ ದರ್ಶನಕ್ಕೆ ತೊಂದರೆಯಾಗದ ರೀತಿಯಲ್ಲಿ ವಿಶೇಷ ದರ್ಶನ ವ್ಯವಸ್ಥೆ ಮಾಡುವುದು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಗಳ ಕರ್ತವ್ಯ ಎಂದೂ ಅವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದುರೈ:</strong> ‘ಕೆಲ ಸ್ಥಳಗಳಲ್ಲಿ, ಅದರಲ್ಲೂ ವಿಶೇಷವಾಗಿ ದೇವಸ್ಥಾನಗಳಲ್ಲಿನ ‘ವಿಐಪಿ ಸಂಸ್ಕೃತಿ’ಯಿಂದ ಜನರು ಹತಾಶರಾಗಿದ್ದಾರೆ’ ಎಂದು ಮದ್ರಾಸ್ ಹೈಕೋರ್ಟ್ನ ಮದುರೈ ಪೀಠ ಬುಧವಾರ ಹೇಳಿದೆ.</p>.<p>‘ಗಣ್ಯ ವ್ಯಕ್ತಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ಮಾತ್ರ ದೇವಸ್ಥಾನಗಳಲ್ಲಿ ವಿಐಪಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು. ಗಣ್ಯರ ಸಂಬಂಧಿಕರಿಗೆ ಈ ಸೌಲಭ್ಯ ನೀಡಬಾರದು’ ಎಂದು ನ್ಯಾಯಮೂರ್ತಿ ಎಸ್.ಎಂ.ಸುಬ್ರಮಣಿಯಮ್ ಹೇಳಿದರು.</p>.<p><a href="https://www.prajavani.net/world-news/pak-responsible-nuclear-power-but-will-respond-with-full-force-if-attacked-president-alvi-921987.html" itemprop="url">ದಾಳಿ ನಡೆದರೆ ಅಣ್ವಸ್ತ್ರ ಮೂಲಕ ಪ್ರತ್ಯುತ್ತರ: ಪಾಕ್ ಅಧ್ಯಕ್ಷ ಆರಿಫ್ ಅಲ್ವಿ </a></p>.<p>ತೂತ್ತುಕುಡಿ ಜಿಲ್ಲೆಯ ತಿರುಚೆಂಡೂರ್ನಲ್ಲಿರುವ ಪ್ರಸಿದ್ಧ ಅರುಳ್ಮಿಗು ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿರುವ ವಿಶೇಷ ದರ್ಶನ ವ್ಯವಸ್ಥೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು.</p>.<p>‘ಕೆಲ ದೇವಸ್ಥಾನಗಳಲ್ಲಿ ವಿಶೇಷ ದರ್ಶನ ವ್ಯವಸ್ಥೆ ಇರಬೇಕು ಎಂಬ ವಾದ ಸರಿ. ಆದರೆ, ಎಲ್ಲ ನಾಗರಿಕರು ಸಮಾನ ಎಂಬ ಆಶಯಕ್ಕೆ ಈ ವ್ಯವಸ್ಥೆ ಧಕ್ಕೆ ತರಬಾರದು. ಅದರಲ್ಲೂ, ದೇವಸ್ಥಾನಗಳಂತಹ ಸ್ಥಳಗಳಲ್ಲಿ ಈ ವಿಐಪಿ ಸಂಸ್ಕೃತಿಯಿಂದ ಜನರು ರೋಸಿ ಹೋಗಿದ್ದಾರೆ. ಅವರು ಶಾಪ ಹಾಕುತ್ತಿದ್ದಾರೆ’ ಎಂದು ನ್ಯಾಯಮೂರ್ತಿಸುಬ್ರಮಣಿಯಮ್ ಹೇಳಿದರು.</p>.<p><a href="https://www.prajavani.net/district/udupi/karnataka-hindu-originations-kaapu-absence-of-muslim-traders-921991.html" itemprop="url">ಮುಸ್ಲಿಂ ವ್ಯಾಪಾರಿಗಳ ಅನುಪಸ್ಥಿತಿಯಲ್ಲಿ ಕಾಪು ಜಾತ್ರೆ ಮುಕ್ತಾಯ </a></p>.<p>ಸಾರ್ವಜನಿಕ ದರ್ಶನಕ್ಕೆ ತೊಂದರೆಯಾಗದ ರೀತಿಯಲ್ಲಿ ವಿಶೇಷ ದರ್ಶನ ವ್ಯವಸ್ಥೆ ಮಾಡುವುದು ಆಯಾ ದೇವಸ್ಥಾನಗಳ ಆಡಳಿತ ಮಂಡಳಿಗಳ ಕರ್ತವ್ಯ ಎಂದೂ ಅವರು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>