<p><strong>ನವದೆಹಲಿ</strong>: ಚುನಾವಣಾ ಪ್ರಚಾರದ ವೇಳೆ ತಮ್ಮ ವಾಹನದ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು, ತಮ್ಮ ಜೀವವು ದೇಶಕ್ಕಾಗಿ ಮುಡಿಪಾಗಿದೆ. ಆದರೆ, ಚುನಾವಣಾ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿಯೊಬ್ಬರ ಕೊಲೆಗೆ ಯತ್ನಿಸಿದ ಸನ್ನಿವೇಶವನ್ನು ದೆಹಲಿ ಜನರು ಈ ಹಿಂದೆ ಕಂಡಿರಲಿಲ್ಲ ಎಂದು ಭಾನುವಾರ ಹೇಳಿದ್ದಾರೆ.</p><p>ನವದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪರ್ವೇಶ್ ವರ್ಮಾ ಅವರ ಗೂಂಡಾಗಳು, ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಎಎಪಿ ನಾಯಕರು ಶನಿವಾರ ದೂರಿದ್ದರು.</p><p>ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಎಎಪಿ ಮುಖ್ಯಸ್ಥ ಕೇಜ್ರಿವಾಲ್, 'ಮಾಜಿ ಮುಖ್ಯಮಂತ್ರಿಯೊಬ್ಬರ ಹತ್ಯೆಗೆ ದಾಳಿ ನಡೆಸಿದಂತಹ ಈ ರೀತಿಯ ಪ್ರಚಾರ ಸಮಾವೇಶ ಮತ್ತು ಗಲಭೆಗೆ ದೆಹಲಿಯ ಜನರು ಎಂದೂ ಸಾಕ್ಷಿಯಾಗಿರಲಿಲ್ಲ. ಅವರು ಹೀನಾಯವಾಗಿ ಸೋಲುತ್ತಿದ್ದಾರೆ. ಹಾಗಾಗಿಯೇ ಈ ರೀತಿ ಪ್ರಚಾರ ನಡೆಸುತ್ತಿದ್ದಾರೆ' ಎಂದು ಬಿಜೆಪಿಯನ್ನು ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಕೇಜ್ರಿವಾಲ್ 20,000 ಮತಗಳ ಅಂತರದಿಂದ ಸೋಲು ಕಾಣಲಿದ್ದಾರೆ ಎಂದು ವರ್ಮಾ ಹೇಳಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, 'ಕೆಲವು ದಿನಗಳವರೆಗೆ ಅವರು ಕನಸು ಕಾಣುತ್ತಿರಲಿ ಬಿಡಿ' ಎಂದು ತಿವಿದಿದ್ದಾರೆ.</p><p>ಸರ್ಕಾರಿ ನೌಕರರಿಗೆ ವಸತಿ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದ ಕೇಜ್ರಿವಾಲ್, 'ಕೇಂದ್ರ ಸರ್ಕಾರ ಭೂಮಿ ನೀಡಿದರೆ, ದೆಹಲಿ ಸರ್ಕಾರ ಮನೆಗಳನ್ನು ನಿರ್ಮಿಸಲಿದೆ. ಆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ' ಎಂದು ತಿಳಿಸಿದ್ದಾರೆ.</p>.ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ: ಸಿಎಂ ಅತಿಶಿ ಆರೋಪ.ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಬೆಂಬಲಿಗರಿಂದ ಕೇಜ್ರಿವಾಲ್ ಮೇಲೆ ದಾಳಿ: ಎಎಪಿ.<p>'ಪೌರಕಾರ್ಮಿಕರನ್ನು ಮೊದಲ ಫಲಾನುಭವಿಗಳನ್ನಾಗಿಸಿ ಯೋಜನೆಯನ್ನು ಆರಂಭಿಸಲಾಗುವುದು. ನಂತರ ಇತರ ಸರ್ಕಾರಿ ನೌಕರರಿಗೆ ಕೆಲವು ಸರಳ ಷರತ್ತುಗಳೊಂದಿಗೆ ಮನೆಗಳನ್ನು ಒದಗಿಸಲಾಗುವುದು' ಎಂದಿದ್ದಾರೆ.</p><p><strong>ನವದೆಹಲಿಯಲ್ಲಿ ಜಿದ್ದಾಜಿದ್ದಿ</strong><br>ಎಎಪಿಯಿಂದ ಕೇಜ್ರಿವಾಲ್, ಬಿಜೆಪಿಯಿಂದ ಪರ್ವೇಶ್ ವರ್ಮಾ ಕಣಕ್ಕಿಳಿದಿರುವ ನವದೆಹಲಿ ಕ್ಷೇತ್ರದಲ್ಲಿ, ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಪುತ್ರ, ಮಾಜಿ ಸಂಸದ ಸಂದೀಪ್ ದೀಕ್ಷಿತ್ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ, ಈ ಕ್ಷೇತ್ರವು ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗಲಿದೆ.</p><p>ಕೇಜ್ರಿವಾಲ್ ಅವರು ಇದೇ ಕ್ಷೇತ್ರದಲ್ಲಿ 2013ರಲ್ಲಿ ಶೀಲಾ ದೀಕ್ಷಿತ್ ಅವರನ್ನು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರಿದಿಂದ ಸೋಲಿಸಿದ್ದರು. 2015ರ ವೇಳೆಗೆ ಜಯದ ಅಂತರವನ್ನು 31 ಸಾವಿರಕ್ಕೆ ಹೆಚ್ಚಿಸಿಕೊಂಡಿದ್ದ ಅವರಿಗೆ, 2020ರಲ್ಲಿ ಅಲ್ಪ ಹಿನ್ನಡೆಯಾಗಿತ್ತು. ಗೆಲುವಿನ ಅಂತರ 21 ಸಾವಿರಕ್ಕೆ ಕುಸಿದಿತ್ತು.</p><p>ಕಳೆದ ಎರಡೂ ಚುನಾವಣೆಗಳಲ್ಲಿ 25 ಸಾವಿರಕ್ಕಿಂತ ಹೆಚ್ಚು ಮತ ಗಳಿಸಿರುವ ಬಿಜೆಪಿ, ರಣತಂತ್ರಗಳನ್ನು ಹೆಣೆಯುತ್ತಿದೆ. ಆದರೆ, 2020ರಲ್ಲಿ ಕೇವಲ 3,220 ಮತ ಪಡೆದಿರುವ ಕಾಂಗ್ರೆಸ್ ಏನೆಲ್ಲ ಮ್ಯಾಜಿಕ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದೆ. 841 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರದ (ಜ.20) ವರೆಗೆ ಸಮಯವಿದೆ. ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ.</p>.ಜೀವಕ್ಕೆ ಆಪತ್ತು ಇದೆ ಎಂದು ಗುಪ್ತಚರ ಇಲಾಖೆ: ದೇವರಿದ್ದಾನೆ ಎಂದ ಕೇಜ್ರಿವಾಲ್.ಅನ್ಬ್ರೇಕೆಬಲ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಪೊಲೀಸರ ಅಡ್ಡಿ: ಕೇಜ್ರಿವಾಲ್ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಚುನಾವಣಾ ಪ್ರಚಾರದ ವೇಳೆ ತಮ್ಮ ವಾಹನದ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು, ತಮ್ಮ ಜೀವವು ದೇಶಕ್ಕಾಗಿ ಮುಡಿಪಾಗಿದೆ. ಆದರೆ, ಚುನಾವಣಾ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿಯೊಬ್ಬರ ಕೊಲೆಗೆ ಯತ್ನಿಸಿದ ಸನ್ನಿವೇಶವನ್ನು ದೆಹಲಿ ಜನರು ಈ ಹಿಂದೆ ಕಂಡಿರಲಿಲ್ಲ ಎಂದು ಭಾನುವಾರ ಹೇಳಿದ್ದಾರೆ.</p><p>ನವದೆಹಲಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪರ್ವೇಶ್ ವರ್ಮಾ ಅವರ ಗೂಂಡಾಗಳು, ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿದ್ದ ಕೇಜ್ರಿವಾಲ್ ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಎಎಪಿ ನಾಯಕರು ಶನಿವಾರ ದೂರಿದ್ದರು.</p><p>ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಎಎಪಿ ಮುಖ್ಯಸ್ಥ ಕೇಜ್ರಿವಾಲ್, 'ಮಾಜಿ ಮುಖ್ಯಮಂತ್ರಿಯೊಬ್ಬರ ಹತ್ಯೆಗೆ ದಾಳಿ ನಡೆಸಿದಂತಹ ಈ ರೀತಿಯ ಪ್ರಚಾರ ಸಮಾವೇಶ ಮತ್ತು ಗಲಭೆಗೆ ದೆಹಲಿಯ ಜನರು ಎಂದೂ ಸಾಕ್ಷಿಯಾಗಿರಲಿಲ್ಲ. ಅವರು ಹೀನಾಯವಾಗಿ ಸೋಲುತ್ತಿದ್ದಾರೆ. ಹಾಗಾಗಿಯೇ ಈ ರೀತಿ ಪ್ರಚಾರ ನಡೆಸುತ್ತಿದ್ದಾರೆ' ಎಂದು ಬಿಜೆಪಿಯನ್ನು ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ಕೇಜ್ರಿವಾಲ್ 20,000 ಮತಗಳ ಅಂತರದಿಂದ ಸೋಲು ಕಾಣಲಿದ್ದಾರೆ ಎಂದು ವರ್ಮಾ ಹೇಳಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, 'ಕೆಲವು ದಿನಗಳವರೆಗೆ ಅವರು ಕನಸು ಕಾಣುತ್ತಿರಲಿ ಬಿಡಿ' ಎಂದು ತಿವಿದಿದ್ದಾರೆ.</p><p>ಸರ್ಕಾರಿ ನೌಕರರಿಗೆ ವಸತಿ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ಹೇಳಿದ ಕೇಜ್ರಿವಾಲ್, 'ಕೇಂದ್ರ ಸರ್ಕಾರ ಭೂಮಿ ನೀಡಿದರೆ, ದೆಹಲಿ ಸರ್ಕಾರ ಮನೆಗಳನ್ನು ನಿರ್ಮಿಸಲಿದೆ. ಆ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ' ಎಂದು ತಿಳಿಸಿದ್ದಾರೆ.</p>.ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಯತ್ನ: ಸಿಎಂ ಅತಿಶಿ ಆರೋಪ.ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಬೆಂಬಲಿಗರಿಂದ ಕೇಜ್ರಿವಾಲ್ ಮೇಲೆ ದಾಳಿ: ಎಎಪಿ.<p>'ಪೌರಕಾರ್ಮಿಕರನ್ನು ಮೊದಲ ಫಲಾನುಭವಿಗಳನ್ನಾಗಿಸಿ ಯೋಜನೆಯನ್ನು ಆರಂಭಿಸಲಾಗುವುದು. ನಂತರ ಇತರ ಸರ್ಕಾರಿ ನೌಕರರಿಗೆ ಕೆಲವು ಸರಳ ಷರತ್ತುಗಳೊಂದಿಗೆ ಮನೆಗಳನ್ನು ಒದಗಿಸಲಾಗುವುದು' ಎಂದಿದ್ದಾರೆ.</p><p><strong>ನವದೆಹಲಿಯಲ್ಲಿ ಜಿದ್ದಾಜಿದ್ದಿ</strong><br>ಎಎಪಿಯಿಂದ ಕೇಜ್ರಿವಾಲ್, ಬಿಜೆಪಿಯಿಂದ ಪರ್ವೇಶ್ ವರ್ಮಾ ಕಣಕ್ಕಿಳಿದಿರುವ ನವದೆಹಲಿ ಕ್ಷೇತ್ರದಲ್ಲಿ, ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರ ಪುತ್ರ, ಮಾಜಿ ಸಂಸದ ಸಂದೀಪ್ ದೀಕ್ಷಿತ್ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ, ಈ ಕ್ಷೇತ್ರವು ಜಿದ್ದಾಜಿದ್ದಿನ ಹಣಾಹಣಿಗೆ ಸಾಕ್ಷಿಯಾಗಲಿದೆ.</p><p>ಕೇಜ್ರಿವಾಲ್ ಅವರು ಇದೇ ಕ್ಷೇತ್ರದಲ್ಲಿ 2013ರಲ್ಲಿ ಶೀಲಾ ದೀಕ್ಷಿತ್ ಅವರನ್ನು 25 ಸಾವಿರಕ್ಕೂ ಹೆಚ್ಚು ಮತಗಳ ಅಂತರಿದಿಂದ ಸೋಲಿಸಿದ್ದರು. 2015ರ ವೇಳೆಗೆ ಜಯದ ಅಂತರವನ್ನು 31 ಸಾವಿರಕ್ಕೆ ಹೆಚ್ಚಿಸಿಕೊಂಡಿದ್ದ ಅವರಿಗೆ, 2020ರಲ್ಲಿ ಅಲ್ಪ ಹಿನ್ನಡೆಯಾಗಿತ್ತು. ಗೆಲುವಿನ ಅಂತರ 21 ಸಾವಿರಕ್ಕೆ ಕುಸಿದಿತ್ತು.</p><p>ಕಳೆದ ಎರಡೂ ಚುನಾವಣೆಗಳಲ್ಲಿ 25 ಸಾವಿರಕ್ಕಿಂತ ಹೆಚ್ಚು ಮತ ಗಳಿಸಿರುವ ಬಿಜೆಪಿ, ರಣತಂತ್ರಗಳನ್ನು ಹೆಣೆಯುತ್ತಿದೆ. ಆದರೆ, 2020ರಲ್ಲಿ ಕೇವಲ 3,220 ಮತ ಪಡೆದಿರುವ ಕಾಂಗ್ರೆಸ್ ಏನೆಲ್ಲ ಮ್ಯಾಜಿಕ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.</p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಮತದಾನ ನಡೆಯಲಿದೆ. 841 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು ಸೋಮವಾರದ (ಜ.20) ವರೆಗೆ ಸಮಯವಿದೆ. ಫೆಬ್ರುವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ.</p>.ಜೀವಕ್ಕೆ ಆಪತ್ತು ಇದೆ ಎಂದು ಗುಪ್ತಚರ ಇಲಾಖೆ: ದೇವರಿದ್ದಾನೆ ಎಂದ ಕೇಜ್ರಿವಾಲ್.ಅನ್ಬ್ರೇಕೆಬಲ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಪೊಲೀಸರ ಅಡ್ಡಿ: ಕೇಜ್ರಿವಾಲ್ ಆರೋಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>