ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟದ ಶೇ 37ರಷ್ಟು ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್ಎ) ಎಂದು ಶಿಫಾರಸು ಮಾಡಿದೆ. ಪರಿಸರಕ್ಕೆ ಹಾನಿ ಮಾಡುವಂಥ ಕೈಗಾರಿಕೆಗಳು, ಗಣಿಗಾರಿಕೆ, ಕಲ್ಲು ಗಣಿಗಾರಿಕೆಗಳನ್ನು ಈ ಪ್ರದೇಶಗಳಲ್ಲಿ ಸಂಪೂರ್ಣ ನಿಷೇಧಿಸುವಂತೆಯೂ ಸಮಿತಿ ಶಿಫಾರಸು ಮಾಡಿದೆ.