<p><strong>ನವದೆಹಲಿ</strong>: ‘ಕೈಗೆಟಕುವ ದರದಲ್ಲಿ ಮನೆ ಒದಗಿಸಲು ಸರ್ಕಾರಗಳ ಬಳಿ ಹಣವಿಲ್ಲ, ಜನರಿಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ... ಹೀಗಿರುವಾಗ ನೀವು ಸೈಕಲ್ಗಳಿಗಾಗಿ ಪ್ರತ್ಯೇಕ ಪಥ ಹೊಂದುವ ಹಗಲುಗನಸು ಕಾಣುತ್ತಿದ್ದೀರಿ...’</p>.<p>ಸೈಕ್ಲಿಸ್ಟ್ ದೇವಿಂದರ್ ಸಿಂಗ್ ನಾಗಿ ಅವರು ಸಲ್ಲಿಸಿದ್ದ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಉಜ್ವಲ್ ಭೂಯಾನ್ ಅವರು ಇರುವ ವಿಭಾಗೀಯ ಪೀಠವು ಹೇಳಿದ ಮಾತು ಇದು.</p>.<p class="title">ದೇಶದಲ್ಲಿ ಸೈಕಲ್ಗಳಿಗೆ ಪ್ರತ್ಯೇಕವಾದ ಪಥ ಇರಬೇಕು ಎಂಬ ಕೋರಿಕೆ ಇರುವ ಅರ್ಜಿಯು ಪೀಠದ ಎದುರು ಬಂದಿತ್ತು. ಆದ್ಯತೆಗಳನ್ನು ಸರಿಯಾಗಿ ಪಟ್ಟಿ ಮಾಡಿಕೊಳ್ಳಬೇಕು, ಹೆಚ್ಚು ತುರ್ತಿನ ಇತರ ವಿಷಯಗಳಿಗೆ ಗಮನ ನೀಡಬೇಕಾದ ಅಗತ್ಯ ಇದೆ ಎಂದು ಪೀಠ ಹೇಳಿತು.</p>.<p class="title">‘ಕೊಳೆಗೇರಿಗಳಿಗೆ ಭೇಟಿ ಕೊಡಿ, ಅಲ್ಲಿ ಜನ ಯಾವ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ನೋಡಿ. ಜನರಿಗೆ ಕೈಗೆಟಕುವ ದರದಲ್ಲಿ ಸೂರು ಕೊಡಲು ಸರ್ಕಾರಗಳ ಬಳಿ ಹಣವಿಲ್ಲ, ನಾವಿಲ್ಲಿ ಹಗಲುಗನಸು ಕಾಣುತ್ತಿದ್ದೇವೆ...’ ಎಂದು ಪೀಠವು ಪ್ರತಿಕ್ರಿಯಿಸಿತು.</p>.<p class="title">‘ಸಂವಿಧಾನದ 21ನೆಯ ವಿಧಿಯ ಬಗ್ಗೆ ನಾವು ಹೆಚ್ಚು ಚಿಂತಿತರಾಗಬೇಕು. ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿವೆ, ನೀವು ಸೈಕಲ್ಗಳಿಗೆ ಪ್ರತ್ಯೇಕ ಪಥ ಬೇಕು ಎನ್ನುತ್ತಿದ್ದೀರಿ’ ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಕೈಗೆಟಕುವ ದರದಲ್ಲಿ ಮನೆ ಒದಗಿಸಲು ಸರ್ಕಾರಗಳ ಬಳಿ ಹಣವಿಲ್ಲ, ಜನರಿಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ... ಹೀಗಿರುವಾಗ ನೀವು ಸೈಕಲ್ಗಳಿಗಾಗಿ ಪ್ರತ್ಯೇಕ ಪಥ ಹೊಂದುವ ಹಗಲುಗನಸು ಕಾಣುತ್ತಿದ್ದೀರಿ...’</p>.<p>ಸೈಕ್ಲಿಸ್ಟ್ ದೇವಿಂದರ್ ಸಿಂಗ್ ನಾಗಿ ಅವರು ಸಲ್ಲಿಸಿದ್ದ ಅರ್ಜಿಯೊಂದನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರಾಕರಿಸುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಅಭಯ್ ಎಸ್. ಓಕ ಮತ್ತು ಉಜ್ವಲ್ ಭೂಯಾನ್ ಅವರು ಇರುವ ವಿಭಾಗೀಯ ಪೀಠವು ಹೇಳಿದ ಮಾತು ಇದು.</p>.<p class="title">ದೇಶದಲ್ಲಿ ಸೈಕಲ್ಗಳಿಗೆ ಪ್ರತ್ಯೇಕವಾದ ಪಥ ಇರಬೇಕು ಎಂಬ ಕೋರಿಕೆ ಇರುವ ಅರ್ಜಿಯು ಪೀಠದ ಎದುರು ಬಂದಿತ್ತು. ಆದ್ಯತೆಗಳನ್ನು ಸರಿಯಾಗಿ ಪಟ್ಟಿ ಮಾಡಿಕೊಳ್ಳಬೇಕು, ಹೆಚ್ಚು ತುರ್ತಿನ ಇತರ ವಿಷಯಗಳಿಗೆ ಗಮನ ನೀಡಬೇಕಾದ ಅಗತ್ಯ ಇದೆ ಎಂದು ಪೀಠ ಹೇಳಿತು.</p>.<p class="title">‘ಕೊಳೆಗೇರಿಗಳಿಗೆ ಭೇಟಿ ಕೊಡಿ, ಅಲ್ಲಿ ಜನ ಯಾವ ಪರಿಸ್ಥಿತಿಯಲ್ಲಿ ವಾಸಿಸುತ್ತಿದ್ದಾರೆ ಎಂಬುದನ್ನು ನೋಡಿ. ಜನರಿಗೆ ಕೈಗೆಟಕುವ ದರದಲ್ಲಿ ಸೂರು ಕೊಡಲು ಸರ್ಕಾರಗಳ ಬಳಿ ಹಣವಿಲ್ಲ, ನಾವಿಲ್ಲಿ ಹಗಲುಗನಸು ಕಾಣುತ್ತಿದ್ದೇವೆ...’ ಎಂದು ಪೀಠವು ಪ್ರತಿಕ್ರಿಯಿಸಿತು.</p>.<p class="title">‘ಸಂವಿಧಾನದ 21ನೆಯ ವಿಧಿಯ ಬಗ್ಗೆ ನಾವು ಹೆಚ್ಚು ಚಿಂತಿತರಾಗಬೇಕು. ಸರ್ಕಾರಿ ಶಾಲೆಗಳು ಮುಚ್ಚಿಹೋಗುತ್ತಿವೆ, ನೀವು ಸೈಕಲ್ಗಳಿಗೆ ಪ್ರತ್ಯೇಕ ಪಥ ಬೇಕು ಎನ್ನುತ್ತಿದ್ದೀರಿ’ ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>