ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಆರಂಭದಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿತ್ತು. ಆದರೆ ಶರದ್ ಅವರು ಸ್ಪರ್ಧಿಸಲು ನಿರಾಕರಿಸಿದ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗೋಪಾಲಕೃಷ್ಣ ಮತ್ತು ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.