ತಮ್ಮ ಭಾಷಣದಲ್ಲಿ ಪ್ರಾಚೀನ ಗ್ರಂಥಗಳ ವಿವಿಧ ದೃಷ್ಟಾಂತಗಳನ್ನು ಉಲ್ಲೇಖಿಸಿದ ಅವರು, ‘ಈ ಸಾರವನ್ನೇ ಭಿನ್ನ ಧರ್ಮೀಯರು, ಭಿನ್ನ ಸ್ವರೂಪದಲ್ಲಿ ಗ್ರಹಿಸಿಕೊಳ್ಳುತ್ತಿದ್ದಾರೆ. ನಮ್ಮೆಲ್ಲರನ್ನು ಭಿನ್ನ ಹೆಸರಿನಲ್ಲಿ ಒಬ್ಬರೇ ಮುನ್ನಡೆಸುತ್ತಿದ್ದಾರೆ. ಸರ್ವಧರ್ಮ ಸಾಮರಸ್ಯ ಎಂಬುದು ಈಗಿನ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.