<p><strong>ನವದೆಹಲಿ:</strong> ದೆಹಲಿ ನೂತನ ಮುಖ್ಯಮಂತ್ರಿಯಾಗಿ ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿರುವ ರೇಖಾ ಗುಪ್ತಾ ಮತ್ತು ಸಚಿವರಿಗೆ ಅಭಿನಂದನೆ ಸಲ್ಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 'ರಾಷ್ಟ್ರ ರಾಜಧಾನಿಯಲ್ಲಿ ಮೋಸದ ಆಡಳಿತ ಅಂತ್ಯವಾಗಿದೆ' ಎಂದು ಹೇಳಿದ್ದಾರೆ. </p><p>'ದೆಹಲಿಯ ಬಿಜೆಪಿ ಸರ್ಕಾರವು ನಗರವನ್ನು ಸ್ವಚ್ಛ, ಸುಂದರ ಮತ್ತ ಸಮೃದ್ಧಗೊಳಿಸುವ ಮೂಲಕ ವಿಶ್ವದ ಅತ್ಯುತ್ತಮ ರಾಜಧಾನಿಯನ್ನಾಗಿ ಮಾಡಲಿದ್ದೇವೆ' ಎಂದು ಅವರು ಭರವಸೆ ನೀಡಿದ್ದಾರೆ. </p><p>ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಎದುರಾಗಿರುವ ಹೀನಾಯ ಸೋಲನ್ನು ಉಲ್ಲೇಖಿಸಿರುವ ಅಮಿತ್ ಶಾ, 'ಹಿಂದಿನ ಸರ್ಕಾರ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಮತ್ತೊಂದೆಡೆ ಸೇವೆ ಹಾಗೂ ಅರ್ಪಣೆಗೆ ಪರ್ಯಾಯವಾಗಿರುವ ಬಿಜೆಪಿಯನ್ನು ದೆಹಲಿಯ ಜನತೆ ಆಯ್ಕೆ ಮಾಡಿದ್ದಾರೆ' ಎಂದು ಹೇಳಿದ್ದಾರೆ. </p><p>'ದೆಹಲಿಯ ಶೋಷಿತರು, ಮಹಿಳೆಯರು, ಯುವಜನತೆ ಮತ್ತು ಬಡವರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ರೂಪಿಸಿರುವ ಅಭಿವೃದ್ಧಿ ಹೊಂದಿದ ದೃಷ್ಟಿಕೋನವು ನಿಮ್ಮೆಲ್ಲರ ಸಮರ್ಥ ನಾಯಕತ್ವದಲ್ಲಿ ಖಂಡಿತವಾಗಿಯೂ ನನಸಾಗಲಿದೆ' ಎಂದು ಅವರು ಹೇಳಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎಎಪಿ 22 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್ಗೆ ಒಂದೇ ಒಂದು ಸ್ಥಾನ ದೊರಕಿರಲಿಲ್ಲ.</p>.ದೆಹಲಿ ಅಭಿವೃದ್ಧಿಗಾಗಿ ರೇಖಾ ಗುಪ್ತಾ ಮತ್ತಷ್ಟು ಉತ್ಸಾಹದಿಂದ ಕೆಲಸ: ಪ್ರಧಾನಿ ಮೋದಿ.Rekha Sworn: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ನೂತನ ಮುಖ್ಯಮಂತ್ರಿಯಾಗಿ ಇಂದು (ಗುರುವಾರ) ಪ್ರಮಾಣವಚನ ಸ್ವೀಕರಿಸಿರುವ ರೇಖಾ ಗುಪ್ತಾ ಮತ್ತು ಸಚಿವರಿಗೆ ಅಭಿನಂದನೆ ಸಲ್ಲಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 'ರಾಷ್ಟ್ರ ರಾಜಧಾನಿಯಲ್ಲಿ ಮೋಸದ ಆಡಳಿತ ಅಂತ್ಯವಾಗಿದೆ' ಎಂದು ಹೇಳಿದ್ದಾರೆ. </p><p>'ದೆಹಲಿಯ ಬಿಜೆಪಿ ಸರ್ಕಾರವು ನಗರವನ್ನು ಸ್ವಚ್ಛ, ಸುಂದರ ಮತ್ತ ಸಮೃದ್ಧಗೊಳಿಸುವ ಮೂಲಕ ವಿಶ್ವದ ಅತ್ಯುತ್ತಮ ರಾಜಧಾನಿಯನ್ನಾಗಿ ಮಾಡಲಿದ್ದೇವೆ' ಎಂದು ಅವರು ಭರವಸೆ ನೀಡಿದ್ದಾರೆ. </p><p>ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಎದುರಾಗಿರುವ ಹೀನಾಯ ಸೋಲನ್ನು ಉಲ್ಲೇಖಿಸಿರುವ ಅಮಿತ್ ಶಾ, 'ಹಿಂದಿನ ಸರ್ಕಾರ ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿಲ್ಲ. ಮತ್ತೊಂದೆಡೆ ಸೇವೆ ಹಾಗೂ ಅರ್ಪಣೆಗೆ ಪರ್ಯಾಯವಾಗಿರುವ ಬಿಜೆಪಿಯನ್ನು ದೆಹಲಿಯ ಜನತೆ ಆಯ್ಕೆ ಮಾಡಿದ್ದಾರೆ' ಎಂದು ಹೇಳಿದ್ದಾರೆ. </p><p>'ದೆಹಲಿಯ ಶೋಷಿತರು, ಮಹಿಳೆಯರು, ಯುವಜನತೆ ಮತ್ತು ಬಡವರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ರೂಪಿಸಿರುವ ಅಭಿವೃದ್ಧಿ ಹೊಂದಿದ ದೃಷ್ಟಿಕೋನವು ನಿಮ್ಮೆಲ್ಲರ ಸಮರ್ಥ ನಾಯಕತ್ವದಲ್ಲಿ ಖಂಡಿತವಾಗಿಯೂ ನನಸಾಗಲಿದೆ' ಎಂದು ಅವರು ಹೇಳಿದ್ದಾರೆ. </p><p>70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ನಡೆದ ಚುನಾವಣೆಯಲ್ಲಿ 48 ಕ್ಷೇತ್ರಗಳನ್ನು ಗೆದ್ದು ಬಿಜೆಪಿ 26 ವರ್ಷಗಳ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿದಿತ್ತು. ಎಎಪಿ 22 ಸ್ಥಾನಗಳಲ್ಲಿ ಗೆದ್ದರೆ ಕಾಂಗ್ರೆಸ್ಗೆ ಒಂದೇ ಒಂದು ಸ್ಥಾನ ದೊರಕಿರಲಿಲ್ಲ.</p>.ದೆಹಲಿ ಅಭಿವೃದ್ಧಿಗಾಗಿ ರೇಖಾ ಗುಪ್ತಾ ಮತ್ತಷ್ಟು ಉತ್ಸಾಹದಿಂದ ಕೆಲಸ: ಪ್ರಧಾನಿ ಮೋದಿ.Rekha Sworn: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ರೇಖಾ ಗುಪ್ತಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>