<p><strong>ನವದೆಹಲಿ</strong>: ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ‘ಕುಟುಂಬಕ್ಕೆ’ ಸೇರಿದವರು, ಅವರು ತಮ್ಮ ಅಂತರಾತ್ಮದ ಕರೆಗೆ ಓಗೊಟ್ಟು ಭಾರತದ ಮುಖ್ಯವಾಹಿನಿಗೆ ಮರಳುವ ದಿನ ದೂರವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಗುರುವಾರ ಹೇಳಿದ್ದಾರೆ.</p>.<p>ಭಯೋತ್ಪಾದನೆಗೆ ನೀಡುವ ಪ್ರತಿಕ್ರಿಯೆ ಹಾಗೂ ಅದನ್ನು ನಿರ್ವಹಿಸುವ ಕಾರ್ಯತಂತ್ರವನ್ನು ಭಾರತವು ಮರುರೂಪಿಸಿದೆ, ಪಾಕಿಸ್ತಾನದ ಜೊತೆ ಮಾತುಕತೆ ನಡೆಯಬಹುದು ಎಂದಾದರೆ ಅದು ಭಯೋತ್ಪಾದನೆ ಮತ್ತು ಪಿಒಕೆ ಕುರಿತಾಗಿ ಮಾತ್ರ ಎಂದು ಸಿಂಗ್ ಹೇಳಿದ್ದಾರೆ.</p>.<p>‘ಸಿಐಐ ವಾಣಿಜ್ಯ ಶೃಂಗ’ದಲ್ಲಿ ಮಾತನಾಡಿದ ಅವರು, ‘ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದಲ್ಲೇ ತಯಾರಿಸಿ ಅಭಿಯಾನವು ದೇಶದ ರಾಷ್ಟ್ರೀಯ ಭದ್ರತೆಯಲ್ಲಿ ಮಹತ್ವದ ಅಂಶ, ಇದು ಸಿಂಧೂರ ಕಾರ್ಯಾಚರಣೆ ಸಂದರ್ಭದಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತವು ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಭಾರತದ ‘ಕುಟುಂಬಕ್ಕೆ’ ಸೇರಿದವರು, ಅವರು ತಮ್ಮ ಅಂತರಾತ್ಮದ ಕರೆಗೆ ಓಗೊಟ್ಟು ಭಾರತದ ಮುಖ್ಯವಾಹಿನಿಗೆ ಮರಳುವ ದಿನ ದೂರವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಗುರುವಾರ ಹೇಳಿದ್ದಾರೆ.</p>.<p>ಭಯೋತ್ಪಾದನೆಗೆ ನೀಡುವ ಪ್ರತಿಕ್ರಿಯೆ ಹಾಗೂ ಅದನ್ನು ನಿರ್ವಹಿಸುವ ಕಾರ್ಯತಂತ್ರವನ್ನು ಭಾರತವು ಮರುರೂಪಿಸಿದೆ, ಪಾಕಿಸ್ತಾನದ ಜೊತೆ ಮಾತುಕತೆ ನಡೆಯಬಹುದು ಎಂದಾದರೆ ಅದು ಭಯೋತ್ಪಾದನೆ ಮತ್ತು ಪಿಒಕೆ ಕುರಿತಾಗಿ ಮಾತ್ರ ಎಂದು ಸಿಂಗ್ ಹೇಳಿದ್ದಾರೆ.</p>.<p>‘ಸಿಐಐ ವಾಣಿಜ್ಯ ಶೃಂಗ’ದಲ್ಲಿ ಮಾತನಾಡಿದ ಅವರು, ‘ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಭಾರತದಲ್ಲೇ ತಯಾರಿಸಿ ಅಭಿಯಾನವು ದೇಶದ ರಾಷ್ಟ್ರೀಯ ಭದ್ರತೆಯಲ್ಲಿ ಮಹತ್ವದ ಅಂಶ, ಇದು ಸಿಂಧೂರ ಕಾರ್ಯಾಚರಣೆ ಸಂದರ್ಭದಲ್ಲಿ ಭಯೋತ್ಪಾದನೆಯ ವಿರುದ್ಧ ಭಾರತವು ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>