ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಶೀಲ್ಡ್ ಲಸಿಕೆ ಪಡೆದವರು ಬಿಜೆಪಿ ವಿರುದ್ಧ ಮತ ಹಾಕಲಿದ್ದಾರೆ: ಅಖಿಲೇಶ್‌

Published 2 ಮೇ 2024, 16:17 IST
Last Updated 2 ಮೇ 2024, 16:17 IST
ಅಕ್ಷರ ಗಾತ್ರ

ಬದಾಂಯೂ (ಉತ್ತರ ಪ್ರದೇಶ): ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮದ ವಿಚಾರವಾಗಿ ಬಿಜೆಪಿ ವಿರುದ್ಧ ಹರಿಹಾಯ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, ಈ ಲಸಿಕೆಯನ್ನು ಪಡೆದುಕೊಂಡ ಜನರು ಬಿಜೆಪಿಯ ವಿರುದ್ಧ ಮತಹಾಕಲಿದ್ದಾರೆ ಎಂದು ಗುರುವಾರ ಹೇಳಿದರು.

ಪಕ್ಷದ ಅಭ್ಯರ್ಥಿ ಆದಿತ್ಯ ಯಾದವ್‌ ಪರವಾಗಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಲಸಿಕೆ ತಯಾರಿಸಿರುವ ಕಂಪನಿಗಳಿಂದ ಬಿಜೆಪಿ ದೇಣಿಗೆ ಪಡೆದಿದೆ ಎಂದು ಆರೋಪಿಸಿದರು.

ಬಿಜೆಪಿಯ ನಿರ್ಧಾರಗಳಿಂದ ಕೇವಲ ಸಂವಿಧಾನಕ್ಕೆ ಮಾತ್ರ ಅಪಾಯವಲ್ಲ, ಜನರ ಜೀವಕ್ಕೂ ಅಪಾಯವಿದೆ ಎಂದು ಹೇಳಿದರು.

ಕೋವಿಡ್‌ ನಿಯಂತ್ರಣಕ್ಕಾಗಿ ತಾನು ಅಭಿವೃದ್ಧಿಪಡಿಸಿದ್ದ ‘ಕೋವಿಶೀಲ್ಡ್‌’ ಲಸಿಕೆಯಿಂದ ಗಂಭೀರ ಅಡ್ಡಪರಿಣಾಮ ಉಂಟಾಗುತ್ತದೆ ಎಂದು ಆಸ್ಟ್ರಾಜೆನೆಕಾ ಕಂಪನಿ ಈಚೆಗೆ ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT