ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮಯದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ಅವರ ಧ್ವನಿಯು ಜನರಿಗೆ ತಲುಪುವುದಿಲ್ಲ ಎಂದುಕೊಂಡಿದ್ದೀರಾ?. ಆದರೆ ಜನರು ಬುದ್ಧಿವಂತರಾಗಿದ್ದಾರೆ. ನಿಮ್ಮ ಈ ನಡೆಗೆ ಜನರು ಮತದಾನದ ಮೂಲಕವೇ ಉತ್ತರಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಎಪಿ ಮುಖಂಡ ಸಂದೀಪ್ ಪಾಠಕ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಮುಸ್ಲಿಂ ಮೀಸಲಾತಿ ಸಂಬಂಧ ಮಾತನಾಡುತ್ತಾರೆ. ಆದರೆ ನೀವು (ಮೋದಿ) ಏಕೆ ಜನರ ಮುಂದೆ ನಿಮ್ಮ ಅಭಿವೃದ್ಧಿಯ ಕಾರ್ಯಗಳನ್ನು ಮುಂದಿಟ್ಟು ಮತ ಕೇಳುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.