<p><strong>ನವದೆಹಲಿ:</strong> ‘ವಿರೋಧ ಪಕ್ಷಗಳದ್ದು ಘಟಬಂಧನ್ ಅಲ್ಲ, ಲಟಬಂಧನ್ (ಅಪರಾಧಿಗಳ ಕೂಟ)’ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದರು.</p>.<p>ಘಟಬಂಧನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತೇಜಸ್ವಿ ಯಾದವ್ ಅವರನ್ನು ಘೋಷಿಸಿದ ಬೆನ್ನಿಗೆ, ಪ್ರತಿಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ‘ಮೈತ್ರಿಕೂಟದಲ್ಲಿರುವ ನವದೆಹಲಿ ಹಾಗೂ ಬಿಹಾರದ ಎಲ್ಲ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ’ ಎಂದು ಕಟಕಿಯಾಡಿದರು.</p>.<p>‘ಬಿಹಾರದಲ್ಲಿದ್ದ ಜಂಗಲ್ ರಾಜ್ ಆಡಳಿತವನ್ನು ಇನ್ನೂ ನೂರು ವರ್ಷ ಚರ್ಚಿಸಲಾಗುವುದು. ಪ್ರತಿಪಕ್ಷಗಳು ತಮ್ಮ ದುಷ್ಕೃತ್ಯಗಳನ್ನು ಮರೆಮಾಚಲು ಎಷ್ಟೇ ಪ್ರಯತ್ನಿಸಿದರೂ ಜನರು ಕ್ಷಮಿಸುವುದಿಲ್ಲ’ ಎಂದಿದ್ದಾರೆ.</p>.<p>‘ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಅವರ ಆಡಳಿತದ ಅವಧಿಯ ‘ಜಂಗಲ್ ರಾಜ್’ನಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ಹಿರಿಯರು, ಯುವಕರಿಗೆ ತಿಳಿಸುವುದನ್ನು ಖಚಿತಪಡಿಸಿಕೊಳ್ಳಿ’ ಎಂದು ಮೋದಿ ಅವರು ಬಿಜೆಪಿ ಕಾರ್ಯಕರ್ತರಿಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ವಿರೋಧ ಪಕ್ಷಗಳದ್ದು ಘಟಬಂಧನ್ ಅಲ್ಲ, ಲಟಬಂಧನ್ (ಅಪರಾಧಿಗಳ ಕೂಟ)’ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ವಾಗ್ದಾಳಿ ನಡೆಸಿದರು.</p>.<p>ಘಟಬಂಧನ್ನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ತೇಜಸ್ವಿ ಯಾದವ್ ಅವರನ್ನು ಘೋಷಿಸಿದ ಬೆನ್ನಿಗೆ, ಪ್ರತಿಪಕ್ಷಗಳ ಒಕ್ಕೂಟದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಅವರು, ‘ಮೈತ್ರಿಕೂಟದಲ್ಲಿರುವ ನವದೆಹಲಿ ಹಾಗೂ ಬಿಹಾರದ ಎಲ್ಲ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ’ ಎಂದು ಕಟಕಿಯಾಡಿದರು.</p>.<p>‘ಬಿಹಾರದಲ್ಲಿದ್ದ ಜಂಗಲ್ ರಾಜ್ ಆಡಳಿತವನ್ನು ಇನ್ನೂ ನೂರು ವರ್ಷ ಚರ್ಚಿಸಲಾಗುವುದು. ಪ್ರತಿಪಕ್ಷಗಳು ತಮ್ಮ ದುಷ್ಕೃತ್ಯಗಳನ್ನು ಮರೆಮಾಚಲು ಎಷ್ಟೇ ಪ್ರಯತ್ನಿಸಿದರೂ ಜನರು ಕ್ಷಮಿಸುವುದಿಲ್ಲ’ ಎಂದಿದ್ದಾರೆ.</p>.<p>‘ಆರ್ಜೆಡಿ ವರಿಷ್ಠ ಲಾಲೂ ಪ್ರಸಾದ್ ಅವರ ಆಡಳಿತದ ಅವಧಿಯ ‘ಜಂಗಲ್ ರಾಜ್’ನಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ಹಿರಿಯರು, ಯುವಕರಿಗೆ ತಿಳಿಸುವುದನ್ನು ಖಚಿತಪಡಿಸಿಕೊಳ್ಳಿ’ ಎಂದು ಮೋದಿ ಅವರು ಬಿಜೆಪಿ ಕಾರ್ಯಕರ್ತರಿಗೆ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>