<p><strong>ಚಂಡೀಗಢ</strong>: ನೂಹ್ನಲ್ಲಿ ಕಳೆದ ತಿಂಗಳು ನಡೆದಿದ್ದ ಹಿಂಸಾಚಾರದಲ್ಲಿ ಕಾಂಗ್ರೆಸ್ನ ಕೈವಾಡವಿರಬಹುದು ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.</p><p>ಜತೆಗೆ, ಪಾಕಿಸ್ತಾನದ ಸಂಚು ಇರಬಹುದಾ ಎಂಬ ಆಯಾಮದಲ್ಲಿ ತನಿಖೆ ನಡೆಸಲು ಪೊಲೀಸರು ಕೇಂದ್ರ ತನಿಖಾ ತಂಡಗಳ ನೆರವು ಪಡೆಯಲಿದ್ದಾರೆ ಎಂದು ಅವರು ವಿಧಾನಸಭೆಯ ಹೊರಗೆ ಹೇಳಿದರು.</p><p>ನೂಹ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ಗೆ ಹರಿಯಾಣ ಪೊಲೀಸರು ನೋಟಿಸ್ ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು.</p><p>ಸೈಬರ್ ಪೊಲೀಸ್ ಠಾಣೆಯ ಮೇಲಿನ ದಾಳಿಯಂಥ ಘಟನೆಗಳನ್ನು ಪರಿಶೀಲಿಸಲಾಗುತ್ತಿದೆ. ಪಾಕಿಸ್ತಾನದಿಂದ ಅನೇಕ ವಿಡಿಯೊಗಳು ಮತ್ತು ಫೋಟೋಗಳನ್ನು ಹಂಚಿಕೊಳ್ಳಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.</p><p>ಘರ್ಷಣೆಗೆ ಸಂಬಂಧಿಸಿದಂತೆ ಈ ವರೆಗೆ 510 ಮಂದಿಯನ್ನು ಬಂಧಿಸಲಾಗಿದ್ದು, 130 ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಜ್ ಹೇಳಿದ್ದಾರೆ.</p><p>ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ)ನ ಮೆರವಣಿಗೆಯ ಮೇಲೆ ಗುಂಪೊಂದು ದಾಳಿ ಮಾಡಿತ್ತು. ನಂತರ ನೂಹ್ ಮತ್ತು ಸುತ್ತಲ ಪ್ರದೇಶಗಳಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿದ್ದವು. ಇಬ್ಬರು ಗೃಹರಕ್ಷಕರು ಮತ್ತು ಧರ್ಮಗುರು ಸೇರಿದಂತೆ ಆರು ಜನ ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ನೂಹ್ನಲ್ಲಿ ಕಳೆದ ತಿಂಗಳು ನಡೆದಿದ್ದ ಹಿಂಸಾಚಾರದಲ್ಲಿ ಕಾಂಗ್ರೆಸ್ನ ಕೈವಾಡವಿರಬಹುದು ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.</p><p>ಜತೆಗೆ, ಪಾಕಿಸ್ತಾನದ ಸಂಚು ಇರಬಹುದಾ ಎಂಬ ಆಯಾಮದಲ್ಲಿ ತನಿಖೆ ನಡೆಸಲು ಪೊಲೀಸರು ಕೇಂದ್ರ ತನಿಖಾ ತಂಡಗಳ ನೆರವು ಪಡೆಯಲಿದ್ದಾರೆ ಎಂದು ಅವರು ವಿಧಾನಸಭೆಯ ಹೊರಗೆ ಹೇಳಿದರು.</p><p>ನೂಹ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ಗೆ ಹರಿಯಾಣ ಪೊಲೀಸರು ನೋಟಿಸ್ ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಅವರು ಈ ಉತ್ತರ ನೀಡಿದರು.</p><p>ಸೈಬರ್ ಪೊಲೀಸ್ ಠಾಣೆಯ ಮೇಲಿನ ದಾಳಿಯಂಥ ಘಟನೆಗಳನ್ನು ಪರಿಶೀಲಿಸಲಾಗುತ್ತಿದೆ. ಪಾಕಿಸ್ತಾನದಿಂದ ಅನೇಕ ವಿಡಿಯೊಗಳು ಮತ್ತು ಫೋಟೋಗಳನ್ನು ಹಂಚಿಕೊಳ್ಳಲಾಗಿತ್ತು ಎಂದು ಸಚಿವರು ತಿಳಿಸಿದ್ದಾರೆ.</p><p>ಘರ್ಷಣೆಗೆ ಸಂಬಂಧಿಸಿದಂತೆ ಈ ವರೆಗೆ 510 ಮಂದಿಯನ್ನು ಬಂಧಿಸಲಾಗಿದ್ದು, 130 ಎಫ್ಐಆರ್ ದಾಖಲಿಸಲಾಗಿದೆ ಎಂದು ವಿಜ್ ಹೇಳಿದ್ದಾರೆ.</p><p>ಜುಲೈ 31 ರಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ)ನ ಮೆರವಣಿಗೆಯ ಮೇಲೆ ಗುಂಪೊಂದು ದಾಳಿ ಮಾಡಿತ್ತು. ನಂತರ ನೂಹ್ ಮತ್ತು ಸುತ್ತಲ ಪ್ರದೇಶಗಳಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿದ್ದವು. ಇಬ್ಬರು ಗೃಹರಕ್ಷಕರು ಮತ್ತು ಧರ್ಮಗುರು ಸೇರಿದಂತೆ ಆರು ಜನ ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>