<p><strong>ಪಣಜಿ:</strong> ಕಳಸಾ–ಬಂಡೂರಿ ನಾಲೆ ಮೂಲಕ ಮಹದಾಯಿ ನದಿ ನೀರು ಪಡೆಯುವ ಕರ್ನಾಟಕದ ಯತ್ನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಗೋವಾ, ಕರ್ನಾಟಕಕ್ಕೆ ಯಾವುದೇ ರೀತಿಯ ಅನುಮತಿ ನೀಡುವುದಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದೆ.</p>.<p>‘ನಾಲ್ಕು ದಿನಗಳ ಒಳಗೆ ಸರ್ಕಾರ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಲಿದೆ’ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.</p>.<p>ನ್ಯಾಯ ಮಂಡಳಿಯು ಅಧಿಸೂಚನೆ ಹೊರಡಿಸುವುದರಿಂದ ನದಿ ನೀರಿನ ವಿವಾದ ಕೊನೆಗೊಂಡಂತಾಗುವುದಿಲ್ಲ ಎಂದು ಗೋವಾ ಬಿಜೆಪಿ ಪ್ರತಿಪಾದಿಸಿದೆ.</p>.<p>‘ಅಧಿಸೂಚನೆಯ ನಂತರ ಇತರ ಕಾರ್ಯ ವಿಧಾನಗಳಿವೆ. ಪರಿಸರದ ಮೇಲಾಗುವ ಪರಿಣಾಮಗಳ ಅಧ್ಯಯನವೂ ಆಗಬೇಕಿದೆ’ ಎಂದು ಬಿಜೆಪಿ ಗೋವಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಸಾವೈಕರ್ ತಿಳಿಸಿದ್ದಾರೆ.</p>.<p class="Briefhead"><strong>3 ಸಾವಿರ ಟನ್ ಚಿನ್ನದ ನಿಕ್ಷೇಪ ಪತ್ತೆ<br />ನವದೆಹಲಿ:</strong> ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನದ ನಿಕ್ಷೇಪವನ್ನು ಭೂವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.</p>.<p>ಇದು ದೇಶದಲ್ಲೇ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಸೋನ್ಭದ್ರಾ ಜಿಲ್ಲೆಯಲ್ಲಿ ಈ ನಿಕ್ಷೇಪ ಪತ್ತೆಯಾಗಿದೆ ಎಂದು ಗಣಿ ಇಲಾಖೆ ಅಧಿಕಾರಿ ಕೆ.ಕೆ. ರಾಜ್ ತಿಳಿಸಿದ್ದಾರೆ.</p>.<p class="Briefhead"><strong>ಜಮ್ಮುವಿನಲ್ಲಿ ಹೆಚ್ಚಿದ ಕಣ್ಗಾವಲು</strong><br />ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಯು ಶ್ರೀನಗರ– ಜಮ್ಮು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಕಣ್ಗಾವಲು ಹೆಚ್ಚಿಸಿದೆ.</p>.<p><strong>ಅಯೋಧ್ಯೆ: ನಿವೇಶನ ಸ್ವೀಕರಿಸಿದವಕ್ಫ್ ಮಂಡಳಿ<br />ಲಖನೌ (ಪಿಟಿಐ): </strong>ಅಯೋಧ್ಯೆಯ ವಿವಾದಾತ್ಮಕ ನಿವೇಶನಕ್ಕೆ ಪರ್ಯಾಯವಾಗಿ ನೀಡುವ ಜಮೀನನ್ನು ತಿರಸ್ಕರಿಸುವ ಆಯ್ಕೆಯೇ ತನಗೆ ಇಲ್ಲ. ಆದರೆ, ಈ ನಿವೇಶನವನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಸೋಮವಾರ ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿ ಶುಕ್ರವಾರ ಹೇಳಿದೆ.</p>.<p>ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದದ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ನವೆಂಬರ್ನಲ್ಲಿ ನೀಡಿತ್ತು. ಮಂದಿರ ನಿರ್ಮಾಣಕ್ಕಾಗಿ ನಿವೇಶನವನ್ನು ನೀಡಿತ್ತು. ಜತೆಗೆ, ಮಸೀದಿ ನಿರ್ಮಾಣಕ್ಕಾಗಿ ಐದು ಎಕರೆ ಪರ್ಯಾಯ ನಿವೇಶನ ನೀಡುವಂತೆಯೂ ಆದೇಶಿಸಿತ್ತು.</p>.<p>ಉತ್ತರ ಪ್ರದೇಶ ಸರ್ಕಾರವು ಐದು ಎಕರೆ ನಿವೇಶನವನ್ನು ಮಂಡಳಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಈ ಜಮೀನನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ಮಂಡಳಿಗೆ ಇದೆ. ಆದರೆ, ನಿವೇಶನವನ್ನು ತಿರಸ್ಕರಿಸುವ ಸ್ವಾತಂತ್ರ್ಯ ಮಂಡಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿಲ್ಲ ಎಂದು ಫರೂಕಿ ಹೇಳಿದ್ದಾರೆ.ನಿವೇಶನ ನೀಡುವ ಆದೇಶ ಪತ್ರವನ್ನುಉತ್ತರ ಪ್ರದೇಶ ಸರ್ಕಾರವು ಈ ತಿಂಗಳ ಆರಂಭದಲ್ಲಿ ಮಂಡಳಿಗೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ:</strong> ಕಳಸಾ–ಬಂಡೂರಿ ನಾಲೆ ಮೂಲಕ ಮಹದಾಯಿ ನದಿ ನೀರು ಪಡೆಯುವ ಕರ್ನಾಟಕದ ಯತ್ನಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಗೋವಾ, ಕರ್ನಾಟಕಕ್ಕೆ ಯಾವುದೇ ರೀತಿಯ ಅನುಮತಿ ನೀಡುವುದಕ್ಕೆ ತಡೆಯಾಜ್ಞೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದೆ.</p>.<p>‘ನಾಲ್ಕು ದಿನಗಳ ಒಳಗೆ ಸರ್ಕಾರ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಲಿದೆ’ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.</p>.<p>ನ್ಯಾಯ ಮಂಡಳಿಯು ಅಧಿಸೂಚನೆ ಹೊರಡಿಸುವುದರಿಂದ ನದಿ ನೀರಿನ ವಿವಾದ ಕೊನೆಗೊಂಡಂತಾಗುವುದಿಲ್ಲ ಎಂದು ಗೋವಾ ಬಿಜೆಪಿ ಪ್ರತಿಪಾದಿಸಿದೆ.</p>.<p>‘ಅಧಿಸೂಚನೆಯ ನಂತರ ಇತರ ಕಾರ್ಯ ವಿಧಾನಗಳಿವೆ. ಪರಿಸರದ ಮೇಲಾಗುವ ಪರಿಣಾಮಗಳ ಅಧ್ಯಯನವೂ ಆಗಬೇಕಿದೆ’ ಎಂದು ಬಿಜೆಪಿ ಗೋವಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಸಾವೈಕರ್ ತಿಳಿಸಿದ್ದಾರೆ.</p>.<p class="Briefhead"><strong>3 ಸಾವಿರ ಟನ್ ಚಿನ್ನದ ನಿಕ್ಷೇಪ ಪತ್ತೆ<br />ನವದೆಹಲಿ:</strong> ಉತ್ತರ ಪ್ರದೇಶದಲ್ಲಿ 3,000 ಟನ್ ಚಿನ್ನದ ನಿಕ್ಷೇಪವನ್ನು ಭೂವಿಜ್ಞಾನಿಗಳು ಪತ್ತೆ ಮಾಡಿದ್ದಾರೆ.</p>.<p>ಇದು ದೇಶದಲ್ಲೇ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಸೋನ್ಭದ್ರಾ ಜಿಲ್ಲೆಯಲ್ಲಿ ಈ ನಿಕ್ಷೇಪ ಪತ್ತೆಯಾಗಿದೆ ಎಂದು ಗಣಿ ಇಲಾಖೆ ಅಧಿಕಾರಿ ಕೆ.ಕೆ. ರಾಜ್ ತಿಳಿಸಿದ್ದಾರೆ.</p>.<p class="Briefhead"><strong>ಜಮ್ಮುವಿನಲ್ಲಿ ಹೆಚ್ಚಿದ ಕಣ್ಗಾವಲು</strong><br />ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳ ಮೇಲೆ ನಿಗಾ ಇಡಲು ಭದ್ರತಾ ಪಡೆಯು ಶ್ರೀನಗರ– ಜಮ್ಮು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಕಣ್ಗಾವಲು ಹೆಚ್ಚಿಸಿದೆ.</p>.<p><strong>ಅಯೋಧ್ಯೆ: ನಿವೇಶನ ಸ್ವೀಕರಿಸಿದವಕ್ಫ್ ಮಂಡಳಿ<br />ಲಖನೌ (ಪಿಟಿಐ): </strong>ಅಯೋಧ್ಯೆಯ ವಿವಾದಾತ್ಮಕ ನಿವೇಶನಕ್ಕೆ ಪರ್ಯಾಯವಾಗಿ ನೀಡುವ ಜಮೀನನ್ನು ತಿರಸ್ಕರಿಸುವ ಆಯ್ಕೆಯೇ ತನಗೆ ಇಲ್ಲ. ಆದರೆ, ಈ ನಿವೇಶನವನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದನ್ನು ಸೋಮವಾರ ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿ ಶುಕ್ರವಾರ ಹೇಳಿದೆ.</p>.<p>ರಾಮಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದದ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ನವೆಂಬರ್ನಲ್ಲಿ ನೀಡಿತ್ತು. ಮಂದಿರ ನಿರ್ಮಾಣಕ್ಕಾಗಿ ನಿವೇಶನವನ್ನು ನೀಡಿತ್ತು. ಜತೆಗೆ, ಮಸೀದಿ ನಿರ್ಮಾಣಕ್ಕಾಗಿ ಐದು ಎಕರೆ ಪರ್ಯಾಯ ನಿವೇಶನ ನೀಡುವಂತೆಯೂ ಆದೇಶಿಸಿತ್ತು.</p>.<p>ಉತ್ತರ ಪ್ರದೇಶ ಸರ್ಕಾರವು ಐದು ಎಕರೆ ನಿವೇಶನವನ್ನು ಮಂಡಳಿಗೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಈ ಜಮೀನನ್ನು ಯಾವ ರೀತಿ ಬಳಸಿಕೊಳ್ಳಬೇಕು ಎಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯ ಮಂಡಳಿಗೆ ಇದೆ. ಆದರೆ, ನಿವೇಶನವನ್ನು ತಿರಸ್ಕರಿಸುವ ಸ್ವಾತಂತ್ರ್ಯ ಮಂಡಳಿಗೆ ಇದೆ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿಲ್ಲ ಎಂದು ಫರೂಕಿ ಹೇಳಿದ್ದಾರೆ.ನಿವೇಶನ ನೀಡುವ ಆದೇಶ ಪತ್ರವನ್ನುಉತ್ತರ ಪ್ರದೇಶ ಸರ್ಕಾರವು ಈ ತಿಂಗಳ ಆರಂಭದಲ್ಲಿ ಮಂಡಳಿಗೆ ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>