<p><strong>ಅಮರಾವತಿ:</strong> ಧರ್ಮದ ಹೆಸರಿನಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯ ಘಟನೆಗಳು ನಡೆಯುತ್ತಿರುವುದಕ್ಕೆ ಧರ್ಮದ ಬಗ್ಗೆ ತಪ್ಪು ತಿಳಿವಳಿಕೆ ಮತ್ತು ಅರಿವಿನ ಕೊರತೆಯೇ ಕಾರಣ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಅಮರಾವತಿಯಲ್ಲಿರುವ ‘ಮಹಾನುಭವ ಆಶ್ರಮ’ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಧರ್ಮವು ಮುಖ್ಯವಾಗಿದ್ದು, ಅದನ್ನು ಸರಿಯಾಗಿ ಕಲಿಸಬೇಕಿದೆ’ ಎಂದಿದ್ದಾರೆ.</p><p>‘ಏಕೆಂದರೆ, ಧರ್ಮದ ಬಗ್ಗೆ ಅರೆಬರೆ ಮತ್ತು ಅಪೂರ್ಣ ಜ್ಞಾನವು ಅಧರ್ಮಕ್ಕೆ ಕಾರಣವಾಗುತ್ತದೆ. ಇದರಿಂದಾಗಿಯೇ ಇಂದು ಧರ್ಮದ ಹೆಸರಿನಲ್ಲಿ ಜಗತ್ತಿನಾದ್ಯಂತ ಶೋಷಣೆ, ದೌರ್ಜನ್ಯ ನಡೆಯುತ್ತಿದೆ’ ಎಂದರು. </p><p>ಧರ್ಮವು ಯಾವಾಗಲೂ ಅಸ್ತಿತ್ವದಲ್ಲಿರುತ್ತದೆ ಹಾಗೂ ಎಲ್ಲವೂ ಅದರ ಪ್ರಕಾರವೇ ಕಾರ್ಯನಿರ್ವಹಿಸುತ್ತದೆ. ಅದಕ್ಕಾಗಿಯೇ ಧರ್ಮವನ್ನು ‘ಸನಾತನ’ ಎಂದು ಕರೆಯಲಾಗುತ್ತದೆ ಎಂದು ಪ್ರತಿಪಾದಿಸಿದ ಅವರು, ‘ಧರ್ಮದಲ್ಲಿ ಹೇಳಿದಂತೆ ನಡೆದುಕೊಳ್ಳುವುದೇ ಧರ್ಮದ ರಕ್ಷಣೆ’ ಎಂದು ತಿಳಿಸಿದರು.</p><p>ಈಚೆಗೆ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಾಗವತ್, ‘ದೇಶದಲ್ಲಿ ಹೊಸದಾಗಿ ಮಂದಿರ – ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿದೆ’ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದರು.</p><p>‘ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದೂಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, ಅದು ಸ್ವೀಕಾರಾರ್ಹವಲ್ಲ’ ಎಂದೂ ಅವರು ಹರಿಹಾಯ್ದಿದ್ದರು.</p><p>‘ಭಾರತ – ವಿಶ್ವಗುರು’ ವಿಷಯದ ಬಗ್ಗೆ ಉಪನ್ಯಾಸ ನೀಡಿದ್ದ ಅವರು, ಎಲ್ಲರನ್ನೂ ಒಳಗೊಳ್ಳುವ ಸಮಾಜದ ಅಗತ್ಯವಿದೆ. ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ಜಗತ್ತಿಗೆ ತೋರಿಸ ಬೇಕಾಗಿದೆ ಎಂದಿದ್ದರು.</p><p>ಭಾರತೀಯ ಸಮಾಜದ ಬಹುತ್ವವನ್ನು ಎತ್ತಿ ತೋರಿಸಿದ ಅವರು, ‘ರಾಮಕೃಷ್ಣ ಮಿಷನ್ನಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತದೆ. ನಾವು ಹಿಂದೂಗಳಾಗಿರುವುದರಿಂದ ಮಾತ್ರ ಇದನ್ನೆಲ್ಲ ವನ್ನು ಮಾಡುತ್ತಿದ್ದೇವೆ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ:</strong> ಧರ್ಮದ ಹೆಸರಿನಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯ ಘಟನೆಗಳು ನಡೆಯುತ್ತಿರುವುದಕ್ಕೆ ಧರ್ಮದ ಬಗ್ಗೆ ತಪ್ಪು ತಿಳಿವಳಿಕೆ ಮತ್ತು ಅರಿವಿನ ಕೊರತೆಯೇ ಕಾರಣ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಹೇಳಿದ್ದಾರೆ.</p><p>ಮಹಾರಾಷ್ಟ್ರದ ಅಮರಾವತಿಯಲ್ಲಿರುವ ‘ಮಹಾನುಭವ ಆಶ್ರಮ’ದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಧರ್ಮವು ಮುಖ್ಯವಾಗಿದ್ದು, ಅದನ್ನು ಸರಿಯಾಗಿ ಕಲಿಸಬೇಕಿದೆ’ ಎಂದಿದ್ದಾರೆ.</p><p>‘ಏಕೆಂದರೆ, ಧರ್ಮದ ಬಗ್ಗೆ ಅರೆಬರೆ ಮತ್ತು ಅಪೂರ್ಣ ಜ್ಞಾನವು ಅಧರ್ಮಕ್ಕೆ ಕಾರಣವಾಗುತ್ತದೆ. ಇದರಿಂದಾಗಿಯೇ ಇಂದು ಧರ್ಮದ ಹೆಸರಿನಲ್ಲಿ ಜಗತ್ತಿನಾದ್ಯಂತ ಶೋಷಣೆ, ದೌರ್ಜನ್ಯ ನಡೆಯುತ್ತಿದೆ’ ಎಂದರು. </p><p>ಧರ್ಮವು ಯಾವಾಗಲೂ ಅಸ್ತಿತ್ವದಲ್ಲಿರುತ್ತದೆ ಹಾಗೂ ಎಲ್ಲವೂ ಅದರ ಪ್ರಕಾರವೇ ಕಾರ್ಯನಿರ್ವಹಿಸುತ್ತದೆ. ಅದಕ್ಕಾಗಿಯೇ ಧರ್ಮವನ್ನು ‘ಸನಾತನ’ ಎಂದು ಕರೆಯಲಾಗುತ್ತದೆ ಎಂದು ಪ್ರತಿಪಾದಿಸಿದ ಅವರು, ‘ಧರ್ಮದಲ್ಲಿ ಹೇಳಿದಂತೆ ನಡೆದುಕೊಳ್ಳುವುದೇ ಧರ್ಮದ ರಕ್ಷಣೆ’ ಎಂದು ತಿಳಿಸಿದರು.</p><p>ಈಚೆಗೆ ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಭಾಗವತ್, ‘ದೇಶದಲ್ಲಿ ಹೊಸದಾಗಿ ಮಂದಿರ – ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿದೆ’ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದರು.</p><p>‘ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದೂಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, ಅದು ಸ್ವೀಕಾರಾರ್ಹವಲ್ಲ’ ಎಂದೂ ಅವರು ಹರಿಹಾಯ್ದಿದ್ದರು.</p><p>‘ಭಾರತ – ವಿಶ್ವಗುರು’ ವಿಷಯದ ಬಗ್ಗೆ ಉಪನ್ಯಾಸ ನೀಡಿದ್ದ ಅವರು, ಎಲ್ಲರನ್ನೂ ಒಳಗೊಳ್ಳುವ ಸಮಾಜದ ಅಗತ್ಯವಿದೆ. ದೇಶವು ಸಾಮರಸ್ಯದಿಂದ ಬದುಕಬಹುದು ಎಂಬುದನ್ನು ಜಗತ್ತಿಗೆ ತೋರಿಸ ಬೇಕಾಗಿದೆ ಎಂದಿದ್ದರು.</p><p>ಭಾರತೀಯ ಸಮಾಜದ ಬಹುತ್ವವನ್ನು ಎತ್ತಿ ತೋರಿಸಿದ ಅವರು, ‘ರಾಮಕೃಷ್ಣ ಮಿಷನ್ನಲ್ಲಿ ಕ್ರಿಸ್ಮಸ್ ಆಚರಿಸಲಾಗುತ್ತದೆ. ನಾವು ಹಿಂದೂಗಳಾಗಿರುವುದರಿಂದ ಮಾತ್ರ ಇದನ್ನೆಲ್ಲ ವನ್ನು ಮಾಡುತ್ತಿದ್ದೇವೆ’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>