<p>ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ..</p>.<p>ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ₹3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರಲಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹94.77 ನಿಂದ ₹97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹87.67 ನಿಂದ ₹90.67ಕ್ಕೆ ಏರಿಕೆಯಾಗಿದೆ.</p>.ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ.<p>ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(ಸಿಎನ್ಜಿ) ಬೆಲೆಯೂ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್ಜಿ ದರ ₹2 ಹೆಚ್ಚಳವಾಗಿದೆ. </p>.ಪೆಟ್ರೋಲ್, ಡಿಸೇಲ್ ಬೆನ್ನಲ್ಲೇ ಸಿಎನ್ಜಿ ದರವೂ ಏರಿಕೆ .<p>'ಇರಾನ್ ಸರ್ವನಾಶವಾಗಿದ್ದು, ಈಗ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಂದ ಮಾಡಿಕೊಳ್ಳಬೇಕು ಅಥವಾ ಮತ್ತಷ್ಟು ವಿನಾಶವನ್ನು ಎದುರಿಸಬೇಕು' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p><p>ಈ ಕುರಿತು ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಜೊತೆಗಿನ ಮಾತುಕತೆಯ ಬಳಿಕ 'ಫಾಕ್ಸ್ ನ್ಯೂಸ್'ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.</p>.ಇರಾನ್ ನಾಶವಾಗಿದೆ, ಯುದ್ಧ ಕೊನೆಗೊಳಿಸಲು ಒಪ್ಪಂದ ಮಾಡಿಕೊಳ್ಳಬೇಕು: ಟ್ರಂಪ್.<p>ಕೆಲಸ ಮುಗಿಸಿ ನಡೆಯುತ್ತಾ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರನ್ನು ಎಳೆದುಕೊಂಡು, ಚಲಿಸುತ್ತಿದ್ದ ಬಸ್ನಲ್ಲಿಯೇ ಸರತಿಯಲ್ಲಿ ಚಾಲಕ ಹಾಗೂ ನಿರ್ವಾಹಕ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ. ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.ದೆಹಲಿ ಸಾಮೂಹಿಕ ಅತ್ಯಾಚಾರ: ಸಮಯ ಎಷ್ಟು ಎಂದು ಕೇಳಿದ ಮಹಿಳೆ ಮೇಲೆ ಎರಗಿದರು...<p>ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಡುವಿನ ಭಿನ್ನಾಭಿಪ್ರಾಯಗಳು ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯ ಮೊದಲ ದಿನದಂದೇ ಬಹಿರಂಗಗೊಂಡಿದೆ.</p>.ಬ್ರಿಕ್ಸ್ ಸಭೆಯ ಮೊದಲ ದಿನವೇ ಇರಾನ್-ಯುಎಇ ನಡುವಿನ ಭಿನ್ನಾಭಿಪ್ರಾಯ ಸ್ಪೋಟ.<p>ಅಮೆರಿಕವು ಅವನತಿಯ ಕಡೆ ಸಾಗುತ್ತಿರುವ ದೇಶವಾಗಿದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಹೇಳಿರುವುದು ಶೇಕಡಾ ನೂರರಷ್ಟು ಸತ್ಯ. ಆದರೆ, ಅದು ಜೋ ಬೈಡನ್ ಆಡಳಿತದ ನಾಲ್ಕು ವರ್ಷಗಳಲ್ಲಿ ಮಾತ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p>.ಬೈಡನ್ ಅವಧಿಯಲ್ಲಿ ಅಮೆರಿಕ ಅವನತಿಯತ್ತ ಸಾಗಿತ್ತು: ಡೊನಾಲ್ಡ್ ಟ್ರಂಪ್.<p>ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಪಣ ತೊಟ್ಟಿರುವ ಬೆಂಗಳೂರು ನಗರ ಪೊಲೀಸರು, ಬರೀ ಡ್ರಗ್ ಪೆಡ್ಲರ್ಗಳು ಹಾಗೂ ಖರೀದಿದಾರರ ಮೇಲಷ್ಟೇ ಪ್ರಕರಣ ದಾಖಲಿಸುತ್ತಿಲ್ಲ. ಅವರೊಂದಿಗೆ ‘ಡ್ರಗ್ಸ್ ಬಳಕೆದಾರರ’(ಗ್ರಾಹಕರು) ಮೇಲೂ ಹದ್ದಿನ ಕಣ್ಣಿಟ್ಟು, ಪ್ರಕರಣ ದಾಖಲಿಸುತ್ತಿದ್ದಾರೆ.</p>.ಡ್ರಗ್ಸ್: ಬಳಕೆದಾರರ ಮೇಲೂ ಬೀಳುತ್ತೆ ‘ಕೇಸ್’.<p>ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 15,16, 17 ಮತ್ತು 18 ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮೇ 18ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.ರಾಜ್ಯದ ಹಲವೆಡೆ 4 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ.<p>ಮಹದಾಯಿ ಬಂಡೂರಾ ನಾಲಾ ತಿರುವು ಯೋಜನೆಗೆ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಎತ್ತಿದ್ದ ಆಕ್ಷೇಪಗಳಿಗೆ ಕರ್ನಾಟಕ ಸರ್ಕಾರ ನಾಲ್ಕು ತಿಂಗಳು ಕಳೆದರೂ ಉತ್ತರಿಸಿಲ್ಲ. ಹೀಗಾಗಿ ಪ್ರಸ್ತಾವವನ್ನು ಕೇಂದ್ರ ಅರಣ್ಯ ಸಚಿವಾಲಯವು ಡಿ–ಲಿಸ್ಟ್ (ಪಟ್ಟಿಯಿಂದ ತೆಗೆದು ಹಾಕುವುದು) ಮಾಡಿದೆ.</p>.ಮಹದಾಯಿ: ಪ್ರಸ್ತಾವ ತೆಗೆದು ಹಾಕಿದ ಕೇಂದ್ರ ಸರ್ಕಾರ.<p>ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಅಂತರದ ರೋಚಕ ಜಯ ಗಳಿಸಿತು. </p>.IPL 2026: PBKS vs MI- ತಿಲಕ್ ಮಿಂಚಿನಾಟಕ್ಕೆ ಒಲಿದ ಗೆಲುವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯ, ರಾಷ್ಟ್ರೀಯ, ವಿದೇಶ ಸೇರಿ ಈ ದಿನದ ಪ್ರಮುಖ ಸುದ್ದಿಗಳು ಇಲ್ಲಿವೆ..</p>.<p>ದೇಶದಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ ₹3 ಹೆಚ್ಚಿಸಲಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಶುಕ್ರವಾರ) ಜಾರಿಗೆ ಬರಲಿದೆ. ತೈಲ ಮಾರಾಟ ಕಂಪನಿಗಳು ಜಾಗತಿಕ ಮಾರುಕಟ್ಟೆಯ ಇಂಧನ ದರ ಏರಿಕೆಗೆ ಅನುಗುಣವಾಗಿ ದರವನ್ನು ಏರಿಕೆ ಮಾಡಿವೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ₹94.77 ನಿಂದ ₹97.77ಕ್ಕೆ ಏರಿಕೆಯಾಗಿದೆ. ಡೀಸೆಲ್ ಬೆಲೆ ₹87.67 ನಿಂದ ₹90.67ಕ್ಕೆ ಏರಿಕೆಯಾಗಿದೆ.</p>.ಪೆಟ್ರೋಲ್, ಡೀಸೆಲ್ ಬೆಲೆ ತಲಾ ₹3 ಹೆಚ್ಚಳ: ಪರಿಷ್ಕೃತ ದರ ಇಂದಿನಿಂದಲೇ ಜಾರಿ.<p>ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನಲ್ಲೇ ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್(ಸಿಎನ್ಜಿ) ಬೆಲೆಯೂ ಏರಿಕೆಯಾಗಿದೆ. ಪ್ರತಿ ಕೆಜಿ ಸಿಎನ್ಜಿ ದರ ₹2 ಹೆಚ್ಚಳವಾಗಿದೆ. </p>.ಪೆಟ್ರೋಲ್, ಡಿಸೇಲ್ ಬೆನ್ನಲ್ಲೇ ಸಿಎನ್ಜಿ ದರವೂ ಏರಿಕೆ .<p>'ಇರಾನ್ ಸರ್ವನಾಶವಾಗಿದ್ದು, ಈಗ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಒಪ್ಪಂದ ಮಾಡಿಕೊಳ್ಳಬೇಕು ಅಥವಾ ಮತ್ತಷ್ಟು ವಿನಾಶವನ್ನು ಎದುರಿಸಬೇಕು' ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p><p>ಈ ಕುರಿತು ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್ ಜೊತೆಗಿನ ಮಾತುಕತೆಯ ಬಳಿಕ 'ಫಾಕ್ಸ್ ನ್ಯೂಸ್'ಗೆ ನೀಡಿದ ಸಂದರ್ಶನದಲ್ಲಿ ಟ್ರಂಪ್ ಪ್ರತಿಕ್ರಿಯಿಸಿದ್ದಾರೆ.</p>.ಇರಾನ್ ನಾಶವಾಗಿದೆ, ಯುದ್ಧ ಕೊನೆಗೊಳಿಸಲು ಒಪ್ಪಂದ ಮಾಡಿಕೊಳ್ಳಬೇಕು: ಟ್ರಂಪ್.<p>ಕೆಲಸ ಮುಗಿಸಿ ನಡೆಯುತ್ತಾ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರನ್ನು ಎಳೆದುಕೊಂಡು, ಚಲಿಸುತ್ತಿದ್ದ ಬಸ್ನಲ್ಲಿಯೇ ಸರತಿಯಲ್ಲಿ ಚಾಲಕ ಹಾಗೂ ನಿರ್ವಾಹಕ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ. ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.</p>.ದೆಹಲಿ ಸಾಮೂಹಿಕ ಅತ್ಯಾಚಾರ: ಸಮಯ ಎಷ್ಟು ಎಂದು ಕೇಳಿದ ಮಹಿಳೆ ಮೇಲೆ ಎರಗಿದರು...<p>ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಪಟ್ಟಂತೆ ಇರಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಡುವಿನ ಭಿನ್ನಾಭಿಪ್ರಾಯಗಳು ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯ ಮೊದಲ ದಿನದಂದೇ ಬಹಿರಂಗಗೊಂಡಿದೆ.</p>.ಬ್ರಿಕ್ಸ್ ಸಭೆಯ ಮೊದಲ ದಿನವೇ ಇರಾನ್-ಯುಎಇ ನಡುವಿನ ಭಿನ್ನಾಭಿಪ್ರಾಯ ಸ್ಪೋಟ.<p>ಅಮೆರಿಕವು ಅವನತಿಯ ಕಡೆ ಸಾಗುತ್ತಿರುವ ದೇಶವಾಗಿದೆ ಎಂದು ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಹೇಳಿರುವುದು ಶೇಕಡಾ ನೂರರಷ್ಟು ಸತ್ಯ. ಆದರೆ, ಅದು ಜೋ ಬೈಡನ್ ಆಡಳಿತದ ನಾಲ್ಕು ವರ್ಷಗಳಲ್ಲಿ ಮಾತ್ರ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.</p>.ಬೈಡನ್ ಅವಧಿಯಲ್ಲಿ ಅಮೆರಿಕ ಅವನತಿಯತ್ತ ಸಾಗಿತ್ತು: ಡೊನಾಲ್ಡ್ ಟ್ರಂಪ್.<p>ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಲು ಪಣ ತೊಟ್ಟಿರುವ ಬೆಂಗಳೂರು ನಗರ ಪೊಲೀಸರು, ಬರೀ ಡ್ರಗ್ ಪೆಡ್ಲರ್ಗಳು ಹಾಗೂ ಖರೀದಿದಾರರ ಮೇಲಷ್ಟೇ ಪ್ರಕರಣ ದಾಖಲಿಸುತ್ತಿಲ್ಲ. ಅವರೊಂದಿಗೆ ‘ಡ್ರಗ್ಸ್ ಬಳಕೆದಾರರ’(ಗ್ರಾಹಕರು) ಮೇಲೂ ಹದ್ದಿನ ಕಣ್ಣಿಟ್ಟು, ಪ್ರಕರಣ ದಾಖಲಿಸುತ್ತಿದ್ದಾರೆ.</p>.ಡ್ರಗ್ಸ್: ಬಳಕೆದಾರರ ಮೇಲೂ ಬೀಳುತ್ತೆ ‘ಕೇಸ್’.<p>ರಾಜ್ಯದ ಹಲವೆಡೆ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 15,16, 17 ಮತ್ತು 18 ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮೇ 18ರಂದು ದಕ್ಷಿಣ ಒಳನಾಡಿನ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.</p>.ರಾಜ್ಯದ ಹಲವೆಡೆ 4 ದಿನ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ.<p>ಮಹದಾಯಿ ಬಂಡೂರಾ ನಾಲಾ ತಿರುವು ಯೋಜನೆಗೆ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್ಇಸಿ) ಎತ್ತಿದ್ದ ಆಕ್ಷೇಪಗಳಿಗೆ ಕರ್ನಾಟಕ ಸರ್ಕಾರ ನಾಲ್ಕು ತಿಂಗಳು ಕಳೆದರೂ ಉತ್ತರಿಸಿಲ್ಲ. ಹೀಗಾಗಿ ಪ್ರಸ್ತಾವವನ್ನು ಕೇಂದ್ರ ಅರಣ್ಯ ಸಚಿವಾಲಯವು ಡಿ–ಲಿಸ್ಟ್ (ಪಟ್ಟಿಯಿಂದ ತೆಗೆದು ಹಾಕುವುದು) ಮಾಡಿದೆ.</p>.ಮಹದಾಯಿ: ಪ್ರಸ್ತಾವ ತೆಗೆದು ಹಾಕಿದ ಕೇಂದ್ರ ಸರ್ಕಾರ.<p>ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಆರು ವಿಕೆಟ್ ಅಂತರದ ರೋಚಕ ಜಯ ಗಳಿಸಿತು. </p>.IPL 2026: PBKS vs MI- ತಿಲಕ್ ಮಿಂಚಿನಾಟಕ್ಕೆ ಒಲಿದ ಗೆಲುವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>