<p><strong>ಬುಲಂದ್ಶಹರ, ಉತ್ತರಪ್ರದೇಶ</strong>: ಇಲ್ಲಿನ ಸಿಕಂದರಾಬಾದ್ನಲ್ಲಿ ಬಾಟಲಿಗೆ ಪೆಟ್ರೋಲ್ ತುಂಬಿಸುವ ವಿಚಾರದಲ್ಲಿ ನಡೆದ ಜಗಳವು ತಾರಕಕ್ಕೇರಿ, ಇಬ್ಬರು ಯುವಕರು ಬಂಕ್ನ ಮ್ಯಾನೇಜರ್ನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>‘ಇಬ್ಬರು ಯುವಕರು ಪೆಟ್ರೋಲ್ ತುಂಬಿಸಲು ತಮ್ಮ ಬೈಕ್ನಲ್ಲಿ ಬುಧವಾರ ಪೆಟ್ರೋಲ್ ಬಂಕ್ಗೆ ಬಂದಿದ್ದಾರೆ. ಈ ವೇಳೆ ಯುವಕರು ಬಾಟಲ್ಗೆ ಪೆಟ್ರೋಲ್ ತುಂಬಿಸುವಂತೆ ಮನವಿ ಮಾಡಿದ್ದು, ಅಲ್ಲಿನ ಸಿಬ್ಬಂದಿ ಬೇಡಿಕೆಯನ್ನು ನಿರಾಕರಿಸಿದ್ದಾರೆ. ನಂತರ, ಬಂಕ್ನ ಮ್ಯಾನೇಜರ್ ರಾಜು ಶರ್ಮಾ (30) ಬಳಿ ಈ ವಿಷಯ ಪ್ರಸ್ತಾಪಿಸಿ ಒತ್ತಾಯ ಮಾಡಿದ್ದಾರೆ. ಶರ್ಮಾ ಕೂಡ ಯುವಕರ ಬೇಡಿಕೆಯನ್ನು ನಿರಾಕರಿಸಿದ್ದಾರೆ.</p>.<p class="title">ಈ ವೇಳೆ ಯುವಕರು–ಮ್ಯಾನೇಜರ್ ನಡುವೆ ತೀವ್ರವಾಗಿ ಜಗಳ ನಡೆದಿದ್ದು, ಸಿಟ್ಟಿಗೆದ್ದ ಯುವಕರು ಶರ್ಮಾ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಶರ್ಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟು ಹೊತ್ತಿಗಾಗಲೇ ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p class="title">‘ಪ್ರಕರಣದ ಸಂಬಂಧ ಎಫ್ಐಆರ್ ದಾಖಲಾಗಿದೆ. ಸ್ಥಳದಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿ ಆಧರಿಸಿ, ಆರೋಪಿಗಳನ್ನು ಗುರುತಿಸಲಾಗಿದೆ. ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬುಲಂದ್ಶಹರ, ಉತ್ತರಪ್ರದೇಶ</strong>: ಇಲ್ಲಿನ ಸಿಕಂದರಾಬಾದ್ನಲ್ಲಿ ಬಾಟಲಿಗೆ ಪೆಟ್ರೋಲ್ ತುಂಬಿಸುವ ವಿಚಾರದಲ್ಲಿ ನಡೆದ ಜಗಳವು ತಾರಕಕ್ಕೇರಿ, ಇಬ್ಬರು ಯುವಕರು ಬಂಕ್ನ ಮ್ಯಾನೇಜರ್ನನ್ನೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.</p>.<p>‘ಇಬ್ಬರು ಯುವಕರು ಪೆಟ್ರೋಲ್ ತುಂಬಿಸಲು ತಮ್ಮ ಬೈಕ್ನಲ್ಲಿ ಬುಧವಾರ ಪೆಟ್ರೋಲ್ ಬಂಕ್ಗೆ ಬಂದಿದ್ದಾರೆ. ಈ ವೇಳೆ ಯುವಕರು ಬಾಟಲ್ಗೆ ಪೆಟ್ರೋಲ್ ತುಂಬಿಸುವಂತೆ ಮನವಿ ಮಾಡಿದ್ದು, ಅಲ್ಲಿನ ಸಿಬ್ಬಂದಿ ಬೇಡಿಕೆಯನ್ನು ನಿರಾಕರಿಸಿದ್ದಾರೆ. ನಂತರ, ಬಂಕ್ನ ಮ್ಯಾನೇಜರ್ ರಾಜು ಶರ್ಮಾ (30) ಬಳಿ ಈ ವಿಷಯ ಪ್ರಸ್ತಾಪಿಸಿ ಒತ್ತಾಯ ಮಾಡಿದ್ದಾರೆ. ಶರ್ಮಾ ಕೂಡ ಯುವಕರ ಬೇಡಿಕೆಯನ್ನು ನಿರಾಕರಿಸಿದ್ದಾರೆ.</p>.<p class="title">ಈ ವೇಳೆ ಯುವಕರು–ಮ್ಯಾನೇಜರ್ ನಡುವೆ ತೀವ್ರವಾಗಿ ಜಗಳ ನಡೆದಿದ್ದು, ಸಿಟ್ಟಿಗೆದ್ದ ಯುವಕರು ಶರ್ಮಾ ಅವರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಶರ್ಮಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟು ಹೊತ್ತಿಗಾಗಲೇ ಅವರು ಮೃತಪಟ್ಟಿದ್ದರು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. </p>.<p class="title">‘ಪ್ರಕರಣದ ಸಂಬಂಧ ಎಫ್ಐಆರ್ ದಾಖಲಾಗಿದೆ. ಸ್ಥಳದಲ್ಲಿ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿ ಆಧರಿಸಿ, ಆರೋಪಿಗಳನ್ನು ಗುರುತಿಸಲಾಗಿದೆ. ಶೀಘ್ರದಲ್ಲಿ ಅವರನ್ನು ಬಂಧಿಸಲಾಗುವುದು’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶ್ಲೋಕ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>