<p><strong>ಮುಜಾಫ್ಫರ್ನಗರ</strong>: ಮೂವರು ಮಹಿಳೆಯರಿಗೆ ಕೋವಿಡ್ ಲಸಿಕೆ ಬದಲಿಗೆ ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ಆರೋಪದ ಮೇಲೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ ಫಾರ್ಮಾಸಿಸ್ಟ್ ಅವರನ್ನು ವಜಾ ಮಾಡಿದ್ದು, ಮತ್ತೊಬ್ಬರನ್ನು ಅಮಾನತುಗೊಳಿಸಲಾಗಿದೆ.</p>.<p>ಈ ಕುರಿತು ಜಿಲ್ಲಾಧಿಕಾರಿ ಜಸ್ಜಿತ್ ಕೌರ್ ಅವರು ಬುಧವಾರ ಹೊರಡಿಸಿರುವ ಈ ಆದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮುದಾಯ ಆರೋಗ್ಯ ಕೇಂದ್ರದ ಉಸ್ತುವಾರಿ ರಮ್ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ.</p>.<p>ಉಪ ವಿಭಾಗಾಧಿಕಾರಿ ಉದವ್ ತ್ರಿಪಾಠಿ ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ಆರೋಪ ಹೊರಿಸಲಾಗಿದೆ.</p>.<p><a href="https://www.prajavani.net/india-news/indias-daily-covid-caseload-doubled-in-10-days-and-situation-getting-worse-822445.html" itemprop="url">ಕೋವಿಡ್: ದೇಶದಲ್ಲಿ 10 ದಿನಗಳಲ್ಲಿ ದುಪ್ಪಟ್ಟು ಪ್ರಕರಣ </a></p>.<p>ಕಳೆದ ವಾರ ಸರೋಜ್ (70), ಅನಾರ್ಕಲಿ (72) ಮತ್ತು ಸತ್ಯವತಿ (60) ಎಂಬ ಮೂವರು ಮಹಿಳೆಯರು ಕೋವಿಡ್ಗೆ ಲಸಿಕೆ ಪಡೆಯಲು ಕಾಂಧ್ಲಾದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು. ಆಗ ಕೋವಿಡ್ ಲಸಿಕೆ ಬದಲು ರೇಬಿಸ್ ತಡೆ ಲಸಿಕೆಯನ್ನು ಈ ಮಹಿಳೆಯರಿಗೆ ನೀಡಲಾಗಿತ್ತು.</p>.<p><a href="https://www.prajavani.net/district/belagavi/covid-19-vaccine-shortage-people-returned-to-home-822443.html" itemprop="url">ಬೆಳಗಾವಿಯಲ್ಲಿ ಕೋವಿಡ್ ಲಸಿಕೆ ಖಾಲಿ: ಡೋಸ್ ಸಿಗದೆ ಜನರು ವಾಪಸ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಜಾಫ್ಫರ್ನಗರ</strong>: ಮೂವರು ಮಹಿಳೆಯರಿಗೆ ಕೋವಿಡ್ ಲಸಿಕೆ ಬದಲಿಗೆ ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ಆರೋಪದ ಮೇಲೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರದ ಫಾರ್ಮಾಸಿಸ್ಟ್ ಅವರನ್ನು ವಜಾ ಮಾಡಿದ್ದು, ಮತ್ತೊಬ್ಬರನ್ನು ಅಮಾನತುಗೊಳಿಸಲಾಗಿದೆ.</p>.<p>ಈ ಕುರಿತು ಜಿಲ್ಲಾಧಿಕಾರಿ ಜಸ್ಜಿತ್ ಕೌರ್ ಅವರು ಬುಧವಾರ ಹೊರಡಿಸಿರುವ ಈ ಆದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮುದಾಯ ಆರೋಗ್ಯ ಕೇಂದ್ರದ ಉಸ್ತುವಾರಿ ರಮ್ಬೀರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿರುವುದಾಗಿ ಉಲ್ಲೇಖಿಸಲಾಗಿದೆ.</p>.<p>ಉಪ ವಿಭಾಗಾಧಿಕಾರಿ ಉದವ್ ತ್ರಿಪಾಠಿ ಸಲ್ಲಿಸಿದ ವಿಚಾರಣಾ ವರದಿಯ ಆಧಾರದ ಮೇಲೆ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ಆರೋಪ ಹೊರಿಸಲಾಗಿದೆ.</p>.<p><a href="https://www.prajavani.net/india-news/indias-daily-covid-caseload-doubled-in-10-days-and-situation-getting-worse-822445.html" itemprop="url">ಕೋವಿಡ್: ದೇಶದಲ್ಲಿ 10 ದಿನಗಳಲ್ಲಿ ದುಪ್ಪಟ್ಟು ಪ್ರಕರಣ </a></p>.<p>ಕಳೆದ ವಾರ ಸರೋಜ್ (70), ಅನಾರ್ಕಲಿ (72) ಮತ್ತು ಸತ್ಯವತಿ (60) ಎಂಬ ಮೂವರು ಮಹಿಳೆಯರು ಕೋವಿಡ್ಗೆ ಲಸಿಕೆ ಪಡೆಯಲು ಕಾಂಧ್ಲಾದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು. ಆಗ ಕೋವಿಡ್ ಲಸಿಕೆ ಬದಲು ರೇಬಿಸ್ ತಡೆ ಲಸಿಕೆಯನ್ನು ಈ ಮಹಿಳೆಯರಿಗೆ ನೀಡಲಾಗಿತ್ತು.</p>.<p><a href="https://www.prajavani.net/district/belagavi/covid-19-vaccine-shortage-people-returned-to-home-822443.html" itemprop="url">ಬೆಳಗಾವಿಯಲ್ಲಿ ಕೋವಿಡ್ ಲಸಿಕೆ ಖಾಲಿ: ಡೋಸ್ ಸಿಗದೆ ಜನರು ವಾಪಸ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>