<p><strong>ಪಟ್ನಾ</strong>: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ ನಡೆಯಲಿದೆ. ‘ಇಂಡಿಯಾ’ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಹಾಲಿ ಉಪ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿಯ ಸಾಮ್ರಾಟ್ ಚೌಧರಿ ಅವರು ಈ ಹಂತದಲ್ಲಿ ಕಣದಲ್ಲಿರುವ ಪ್ರಮುಖರು. ಬಿಹಾರ ಸರ್ಕಾರದ ಪ್ರಮುಖವಾಗಿ ಬಿಜೆಪಿಯ ಅರ್ಧಕ್ಕೂ ಹೆಚ್ಚು ಸಚಿವರು ಮೊದಲ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಸ್ಪರ್ಧೆಯಲ್ಲಿದ್ದಾರೆ. </p>.<p><strong>ಗಮನ ಸೆಳೆದಿರುವ ಕ್ಷೇತ್ರಗಳು</strong></p>.<ul><li><p>ರಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್ಜೆಡಿ ಪಕ್ಷದ ತೇಜಸ್ವಿ ಯಾದವ್ ಅವರು ಸ್ಪರ್ಧಿಸುತ್ತಿದ್ದಾರೆ. ತಂದೆ ಲಾಲು ಪ್ರಸಾದ್ ಎರಡು ಬಾರಿ, ತಾಯಿ ರಾಬ್ಡಿ ದೇವಿ ಅವರು ಮೂರು ಬಾರಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ವಿಶೇಷವೆಂದರೆ, ಈ ಕ್ಷೇತ್ರದಿಂದ ಗೆದ್ದ ಬಳಿಕ ಈ ಇಬ್ಬರೂ ಮುಖ್ಯಮಂತ್ರಿಯಾಗಿದ್ದರು. ಈಗ ತೇಜಸ್ವಿ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ</p></li><li><p>ಮಹುವಾ ಕ್ಷೇತ್ರದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಮತ್ತೊಬ್ಬ ಮಗ ತೇಜ್ ಪ್ರತಾಪ್ ಅವರು ಸ್ಪರ್ಧಿಸುತ್ತಿದ್ದಾರೆ. ಕೌಂಟುಬಿಕ ಕಾರಣಗಳಿಂದ ಲಾಲು ಪ್ರಸಾದ್ ಅವರು ತೇಜ್ ಪ್ರತಾಪ್ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ಬಳಿಕ ಇವರು ‘ಜನಶಕ್ತಿ ಜನತಾದಳ’ ಪಕ್ಷ ಕಟ್ಟಿದರು</p></li><li><p>ಸಾಮ್ರಾಟ್ ಚೌಧರಿ ಅವರು ತಾರಾಪುರ ವಿಧಾನಸಭಾ ಕ್ಷೇತ್ರದಿಂದ ಕಣದಲ್ಲಿದ್ದಾರೆ. ಎರಡು ಬಾರಿ ಇವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಸುಮಾರು 10 ವರ್ಷಗಳ ಬಳಿಕ ಇವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ</p></li><li><p>ರಘುನಾಥಪುರ ಕ್ಷೇತ್ರದಿಂದ 31 ವರ್ಷದ ಒಸಾಮಾ ಶಹಬ್ ಅವರು ಆರ್ಜೆಡಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಗ್ಯಾಂಗ್ಸ್ಟರ್ ಆಗಿದ್ದು, ಬಳಿಕ ರಾಜಕಾರಣಿಯಾದ ಮೊಹಮ್ಮದ್ ಶಹಾಬುದ್ದೀನ್ ಅವರ ಮಗ. ಆರ್ಜೆಡಿ ಅಧಿಕಾರಕ್ಕೆ ಬಂದರೆ ‘ಜಂಗಲ್ ರಾಜ್’ ಮರಳುತ್ತದೆ ಎಂಬ ಆರೋಪಕ್ಕೆ ಈ ಕ್ಷೇತ್ರವನ್ನೇ ಕೇಂದ್ರವಾಗಿಸಿಕೊಂಡು ಪ್ರಚಾರ ನಡೆಸಿದ್ದರು</p></li><li><p>ಜನಪದ ಗಾಯಕಿ 25 ವರ್ಷ ಮಿಥಾಲಿ ಠಾಕೂರ್ ಅವರು ಅಲಿನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅಲಿನಗರಕ್ಕೆ ‘ಸೀತಾನಗರ’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಮಿಥಾಲಿ ಹೇಳಿದ್ದರು. ಸೀತಾ ಮಾತೆಗೆ ಗೌರವ ಸೂಚಿಸಲು ನಗರದ ಹೆಸರು ಬದಲಾಯಿಸಲಾಗುವುದ ಎಂದಿದ್ದರು</p></li><li><p>ಮೊಕಾಮ್ ಕ್ಷೇತ್ರವು ಈ ಬಾರಿ ಎಲ್ಲರ ಗಮನ ಸೆಳೆದಿದೆ. ಜೆಡಿಯು ಟಿಕೆಟ್ನಿಂದ ‘ಡಾನ್’ ಅನಂತ್ ಸಿಂಗ್ ಅವರು ಸ್ಪರ್ಧಿಸುತ್ತಿದ್ದಾರೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲರ್ಚಂದ್ ಯಾದವ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ಅನಂತ್ ಸಿಂಗ್ ಅವರನ್ನು ಭಾನುವಾರಷ್ಟೇ ಬಂಧಿಸಲಾಗಿದೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ</strong>: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ ನಡೆಯಲಿದೆ. ‘ಇಂಡಿಯಾ’ ಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್, ಹಾಲಿ ಉಪ ಮುಖ್ಯಮಂತ್ರಿಯೂ ಆಗಿರುವ ಬಿಜೆಪಿಯ ಸಾಮ್ರಾಟ್ ಚೌಧರಿ ಅವರು ಈ ಹಂತದಲ್ಲಿ ಕಣದಲ್ಲಿರುವ ಪ್ರಮುಖರು. ಬಿಹಾರ ಸರ್ಕಾರದ ಪ್ರಮುಖವಾಗಿ ಬಿಜೆಪಿಯ ಅರ್ಧಕ್ಕೂ ಹೆಚ್ಚು ಸಚಿವರು ಮೊದಲ ಹಂತದಲ್ಲಿ ಮತದಾನ ನಡೆಯುವ ಕ್ಷೇತ್ರಗಳಲ್ಲಿ ಸ್ಪರ್ಧೆಯಲ್ಲಿದ್ದಾರೆ. </p>.<p><strong>ಗಮನ ಸೆಳೆದಿರುವ ಕ್ಷೇತ್ರಗಳು</strong></p>.<ul><li><p>ರಘೋಪುರ ವಿಧಾನಸಭಾ ಕ್ಷೇತ್ರದಿಂದ ಆರ್ಜೆಡಿ ಪಕ್ಷದ ತೇಜಸ್ವಿ ಯಾದವ್ ಅವರು ಸ್ಪರ್ಧಿಸುತ್ತಿದ್ದಾರೆ. ತಂದೆ ಲಾಲು ಪ್ರಸಾದ್ ಎರಡು ಬಾರಿ, ತಾಯಿ ರಾಬ್ಡಿ ದೇವಿ ಅವರು ಮೂರು ಬಾರಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ವಿಶೇಷವೆಂದರೆ, ಈ ಕ್ಷೇತ್ರದಿಂದ ಗೆದ್ದ ಬಳಿಕ ಈ ಇಬ್ಬರೂ ಮುಖ್ಯಮಂತ್ರಿಯಾಗಿದ್ದರು. ಈಗ ತೇಜಸ್ವಿ ಅವರು ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದಾರೆ</p></li><li><p>ಮಹುವಾ ಕ್ಷೇತ್ರದಲ್ಲಿ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಮತ್ತೊಬ್ಬ ಮಗ ತೇಜ್ ಪ್ರತಾಪ್ ಅವರು ಸ್ಪರ್ಧಿಸುತ್ತಿದ್ದಾರೆ. ಕೌಂಟುಬಿಕ ಕಾರಣಗಳಿಂದ ಲಾಲು ಪ್ರಸಾದ್ ಅವರು ತೇಜ್ ಪ್ರತಾಪ್ ಅವರನ್ನು ಪಕ್ಷದಿಂದ ಹೊರಹಾಕಿದ್ದರು. ಬಳಿಕ ಇವರು ‘ಜನಶಕ್ತಿ ಜನತಾದಳ’ ಪಕ್ಷ ಕಟ್ಟಿದರು</p></li><li><p>ಸಾಮ್ರಾಟ್ ಚೌಧರಿ ಅವರು ತಾರಾಪುರ ವಿಧಾನಸಭಾ ಕ್ಷೇತ್ರದಿಂದ ಕಣದಲ್ಲಿದ್ದಾರೆ. ಎರಡು ಬಾರಿ ಇವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಸುಮಾರು 10 ವರ್ಷಗಳ ಬಳಿಕ ಇವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ</p></li><li><p>ರಘುನಾಥಪುರ ಕ್ಷೇತ್ರದಿಂದ 31 ವರ್ಷದ ಒಸಾಮಾ ಶಹಬ್ ಅವರು ಆರ್ಜೆಡಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಗ್ಯಾಂಗ್ಸ್ಟರ್ ಆಗಿದ್ದು, ಬಳಿಕ ರಾಜಕಾರಣಿಯಾದ ಮೊಹಮ್ಮದ್ ಶಹಾಬುದ್ದೀನ್ ಅವರ ಮಗ. ಆರ್ಜೆಡಿ ಅಧಿಕಾರಕ್ಕೆ ಬಂದರೆ ‘ಜಂಗಲ್ ರಾಜ್’ ಮರಳುತ್ತದೆ ಎಂಬ ಆರೋಪಕ್ಕೆ ಈ ಕ್ಷೇತ್ರವನ್ನೇ ಕೇಂದ್ರವಾಗಿಸಿಕೊಂಡು ಪ್ರಚಾರ ನಡೆಸಿದ್ದರು</p></li><li><p>ಜನಪದ ಗಾಯಕಿ 25 ವರ್ಷ ಮಿಥಾಲಿ ಠಾಕೂರ್ ಅವರು ಅಲಿನಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಅಲಿನಗರಕ್ಕೆ ‘ಸೀತಾನಗರ’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಮಿಥಾಲಿ ಹೇಳಿದ್ದರು. ಸೀತಾ ಮಾತೆಗೆ ಗೌರವ ಸೂಚಿಸಲು ನಗರದ ಹೆಸರು ಬದಲಾಯಿಸಲಾಗುವುದ ಎಂದಿದ್ದರು</p></li><li><p>ಮೊಕಾಮ್ ಕ್ಷೇತ್ರವು ಈ ಬಾರಿ ಎಲ್ಲರ ಗಮನ ಸೆಳೆದಿದೆ. ಜೆಡಿಯು ಟಿಕೆಟ್ನಿಂದ ‘ಡಾನ್’ ಅನಂತ್ ಸಿಂಗ್ ಅವರು ಸ್ಪರ್ಧಿಸುತ್ತಿದ್ದಾರೆ. ಜನ ಸುರಾಜ್ ಪಕ್ಷದ ಬೆಂಬಲಿಗ ದುಲರ್ಚಂದ್ ಯಾದವ್ ಅವರನ್ನು ಹತ್ಯೆ ಮಾಡಿದ್ದಕ್ಕಾಗಿ ಅನಂತ್ ಸಿಂಗ್ ಅವರನ್ನು ಭಾನುವಾರಷ್ಟೇ ಬಂಧಿಸಲಾಗಿದೆ</p></li></ul>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>