<p><strong>ಹೈದರಾಬಾದ್ (ಪಿಟಿಐ):</strong> ತೆಲಂಗಾಣದ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ತೆಲಂಗಾಣ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಬಿಆರ್ಎಸ್ ಪಕ್ಷದ ಮುಖಂಡ, ರಾಜ್ಯಸಭೆಯ ಮಾಜಿ ಸದಸ್ಯ ಜೋಗಿನಪಲ್ಲಿ ಸಂತೋಷ್ ಕುಮಾರ್ ಮಂಗಳವಾರ ಹಾಜರಾದರು.</p>.<p>ಸಂತೋಷ್ ಅವರು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸಂಬಂಧಿ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಎಸ್ಐಟಿಯು ಸೋಮವಾರ ನೋಟಿಸ್ ಜಾರಿಗೊಳಿಸಿತ್ತು. ಈ ಕಾರಣದಿಂದ ತನಿಖಾಧಿಕಾರಿ ಮುಂದೆ ಮಂಗಳವಾರ ಹಾಜರಾದರು.</p>.<p class="bodytext">ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನವರಿ 20 ಹಾಗೂ 23ರಂದು ಬಿಆರ್ಎಸ್ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್, ಬಿಆರ್ಎಸ್ನ ಹಿರಿಯ ಶಾಸಕ ಟಿ. ಹರೀಶ್ ರಾವ್ ಕೂಡ ಎಸ್ಐಟಿ ಮುಂದೆ ಹಾಜರಾಗಿದ್ದರು. </p>.<p class="bodytext">ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ರಾಜಕಾರಣಿಗಳು, ಉದ್ಯಮಿಗಳು, ಪತ್ರಕರ್ತರು ಹಾಗೂ ಗಣ್ಯ ವ್ಯಕ್ತಿಗಳ ದೂರವಾಣಿ ಕದ್ದಾಲಿಕೆ ಮಾಡಿದ ಆರೋಪ ಕೇಳಿಬಂದಿತ್ತು. ಇದರಲ್ಲಿ ತೆಲಂಗಾಣ ಗುಪ್ತಚರ ಇಲಾಖೆಯ ಮಾಜಿ ಮುಖ್ಯಸ್ಥ ಟಿ. ಪ್ರಭಾಕರ್ ರಾವ್ ಅವರನ್ನು ಮುಖ್ಯ ಆರೋಪಿ ಎಂದು ಹೇಳಲಾಗಿದ್ದು, ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ):</strong> ತೆಲಂಗಾಣದ ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ದೂರವಾಣಿ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ತೆಲಂಗಾಣ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಂದೆ ಬಿಆರ್ಎಸ್ ಪಕ್ಷದ ಮುಖಂಡ, ರಾಜ್ಯಸಭೆಯ ಮಾಜಿ ಸದಸ್ಯ ಜೋಗಿನಪಲ್ಲಿ ಸಂತೋಷ್ ಕುಮಾರ್ ಮಂಗಳವಾರ ಹಾಜರಾದರು.</p>.<p>ಸಂತೋಷ್ ಅವರು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಸಂಬಂಧಿ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಎಸ್ಐಟಿಯು ಸೋಮವಾರ ನೋಟಿಸ್ ಜಾರಿಗೊಳಿಸಿತ್ತು. ಈ ಕಾರಣದಿಂದ ತನಿಖಾಧಿಕಾರಿ ಮುಂದೆ ಮಂಗಳವಾರ ಹಾಜರಾದರು.</p>.<p class="bodytext">ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನವರಿ 20 ಹಾಗೂ 23ರಂದು ಬಿಆರ್ಎಸ್ನ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್, ಬಿಆರ್ಎಸ್ನ ಹಿರಿಯ ಶಾಸಕ ಟಿ. ಹರೀಶ್ ರಾವ್ ಕೂಡ ಎಸ್ಐಟಿ ಮುಂದೆ ಹಾಜರಾಗಿದ್ದರು. </p>.<p class="bodytext">ಬಿಆರ್ಎಸ್ ಸರ್ಕಾರದ ಅವಧಿಯಲ್ಲಿ ರಾಜಕಾರಣಿಗಳು, ಉದ್ಯಮಿಗಳು, ಪತ್ರಕರ್ತರು ಹಾಗೂ ಗಣ್ಯ ವ್ಯಕ್ತಿಗಳ ದೂರವಾಣಿ ಕದ್ದಾಲಿಕೆ ಮಾಡಿದ ಆರೋಪ ಕೇಳಿಬಂದಿತ್ತು. ಇದರಲ್ಲಿ ತೆಲಂಗಾಣ ಗುಪ್ತಚರ ಇಲಾಖೆಯ ಮಾಜಿ ಮುಖ್ಯಸ್ಥ ಟಿ. ಪ್ರಭಾಕರ್ ರಾವ್ ಅವರನ್ನು ಮುಖ್ಯ ಆರೋಪಿ ಎಂದು ಹೇಳಲಾಗಿದ್ದು, ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>