<p><strong>ನವದೆಹಲಿ:</strong> 12ನೇ ತರಗತಿಯ ಬಾಕಿ ವಿಷಯಗಳಿಗೆ ಪರೀಕ್ಷೆ ನಡೆಸುವ ಸಂಬಂಧ ಸಿಬಿಎಸ್ಇ ಹೊರಡಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಲಾಗಿದೆ.</p>.<p>ಕರ್ನಲ್ ಅಮಿತ್ ಬಾತ್ಲಾ ನೇತೃತ್ವದಲ್ಲಿ ಪಾಲಕರ ಗುಂಪೊಂದು ಪಿಐಎಲ್ ಸಲ್ಲಿಸಿದೆ.</p>.<p>‘ದೇಶದ ವಿವಿಧೆಡೆ 15 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕೋವಿಡ್–19 ಹಿನ್ನೆಲೆಯಲ್ಲಿ ಈ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುವುದು, ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತೆ’ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>‘ಕೋವಿಡ್–19 ಕಾರಣದಿಂದ ದೆಹಲಿ ವಿಶ್ವವಿದ್ಯಾಲಯ, ಕೆಲವು ಐಐಟಿಗಳು, ಹಲವಾರು ರಾಜ್ಯ ಸರ್ಕಾರಗಳು ಅಂತಿಮ ವರ್ಷದ ಪರೀಕ್ಷೆಗಳನ್ನೇ ರದ್ದುಪಡಿಸಿವೆ. ವಿದೇಶಗಳಲ್ಲಿರುವ 250 ಶಾಲೆಗಳಲ್ಲಿ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಸ್ವತಃ ಸಿಬಿಎಸ್ಇಯೇ ರದ್ದುಪಡಿಸಿದೆ’ ಎಂದೂ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 12ನೇ ತರಗತಿಯ ಬಾಕಿ ವಿಷಯಗಳಿಗೆ ಪರೀಕ್ಷೆ ನಡೆಸುವ ಸಂಬಂಧ ಸಿಬಿಎಸ್ಇ ಹೊರಡಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಲಾಗಿದೆ.</p>.<p>ಕರ್ನಲ್ ಅಮಿತ್ ಬಾತ್ಲಾ ನೇತೃತ್ವದಲ್ಲಿ ಪಾಲಕರ ಗುಂಪೊಂದು ಪಿಐಎಲ್ ಸಲ್ಲಿಸಿದೆ.</p>.<p>‘ದೇಶದ ವಿವಿಧೆಡೆ 15 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕೋವಿಡ್–19 ಹಿನ್ನೆಲೆಯಲ್ಲಿ ಈ ಪರೀಕ್ಷಾ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡುವುದು, ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸುವುದು ಕಷ್ಟ. ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಆರೋಗ್ಯದೊಂದಿಗೆ ಚೆಲ್ಲಾಟವಾಡಿದಂತೆ’ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>‘ಕೋವಿಡ್–19 ಕಾರಣದಿಂದ ದೆಹಲಿ ವಿಶ್ವವಿದ್ಯಾಲಯ, ಕೆಲವು ಐಐಟಿಗಳು, ಹಲವಾರು ರಾಜ್ಯ ಸರ್ಕಾರಗಳು ಅಂತಿಮ ವರ್ಷದ ಪರೀಕ್ಷೆಗಳನ್ನೇ ರದ್ದುಪಡಿಸಿವೆ. ವಿದೇಶಗಳಲ್ಲಿರುವ 250 ಶಾಲೆಗಳಲ್ಲಿ 10 ಮತ್ತು 12ನೇ ತರಗತಿಯ ಪರೀಕ್ಷೆಗಳನ್ನು ಸ್ವತಃ ಸಿಬಿಎಸ್ಇಯೇ ರದ್ದುಪಡಿಸಿದೆ’ ಎಂದೂ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>