ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಪಂಚಾಯತ್ ಸೇರಿದಂತೆ ಸ್ಥಳೀಯ ಆಡಳಿತಗಳ ಹಂತದಲ್ಲಿ ಸಮಿತಿಗಳು ರಚನೆ ಆಗಬೇಕು ಎಂದು ಅರ್ಜಿದಾರ ವಿನೀತ್ ಜಿಂದಾಲ್ ಕೋರಿದ್ದಾರೆ. ಶವಗಳನ್ನು ನದಿಗೆ ಎಸೆಯುವುದರಿಂದ ನದಿಪಾತ್ರದ ಗ್ರಾಮಗಳು, ನಗರಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮವಾಗಲಿದೆ ಎಂದಿದ್ದಾರೆ.