<p><strong>ಮುಂಬೈ</strong>: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಕೇತನ್ ತಿರೋಡ್ಕರ್ ಎಂಬುವವರು ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.</p><p>ಅಜಿತ್ ಪವಾರ್ ‘ಆಕಸ್ಮಿಕ’ ಸಾವು ಪ್ರಕರಣದ ತನಿಖೆಯನ್ನು ನಡೆಸುವಂತೆ ಸಿಐಡಿಗೆ ನಿರ್ದೇಶನ ನೀಡಬೇಕು ಮತ್ತು ನಿವೃತ್ತ ಡಿಜಿಸಿಎ ನಿರ್ದೇಶಕರು, ವಾಣಿಜ್ಯ ವಿಮಾನಯಾನ ಸಂಸ್ಥೆಯ ಮುಖ್ಯ ನಿರ್ವಹಣಾ ಎಂಜಿನಿಯರ್, ನಿವೃತ್ತ ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಅವರು ಕೋರಿದ್ದಾರೆ.</p><p>ಜನವರಿ 28ರಂದು ವಿಎಸ್ಆರ್ ವೆಂಚರ್ಸ್ ಒಡೆತನದ ವಿಮಾನ ಪತನಗೊಂಡು ಅಜಿತ್ ಪವಾರ್ ಹಾಗೂ ಇತರ ನಾಲ್ವರು ಮೃತಪಟ್ಟಿದ್ದರು.</p>. <p><strong>ಅರ್ಜಿಯಲ್ಲಿ ಏನಿದೆ?</strong></p><p>ವಿಮಾನ ಅಪಘಾತದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಕೋರಿ ಫೆ.20ರಂದು ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರಿಗೆ ಪತ್ರ ಬರೆದಿದ್ದಾಗಿ ತಿರೋಡ್ಕರ್ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.</p><p>ವಿಮಾನದ ಬುಕ್ಕಿಂಗ್, ಕಪ್ಪು ಪೆಟ್ಟಿಗೆ ವಿಶ್ಲೇಷಣೆ ಸೇರಿ ಹಲವು ವಿಷಯಗಳ ಬಗ್ಗೆ ವಿವರಗಳನ್ನು ಕೋರಿ ಡಿಜಿಸಿಎ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ), ಮುಖ್ಯಮಂತ್ರಿ ಕಚೇರಿ ಮತ್ತು ಬಾರಾಮತಿ ಪೊಲೀಸರಿಗೆ ಆರ್ಟಿಐ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.</p><p>ಇದ್ಯಾವುದಕ್ಕೂ ಪ್ರತಿಕ್ರಿಯೆ ಬರದ ಕಾರಣ ನ್ಯಾಯಾಲಯದ ಮೆಟ್ಟಿಲು ಹತ್ತಬೇಕಾಯಿತು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.</p><p>ಕೊನೆಯ ಕ್ಷಣದಲ್ಲಿ ರಸ್ತೆ ಪ್ರಯಾಣದಿಂದ ವಿಮಾನ ಪ್ರಯಾಣಕ್ಕೆ ಬದಲಾಯಿಸಿಲಾಗಿದೆ ಎಂಬ ಆರೋಪ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪಿಐಎಲ್ನಲ್ಲಿ ಅವರು ಎತ್ತಿದ್ದಾರೆ. ಪೈಲಟ್ಗಳ ಬದಲಾವಣೆಯನ್ನು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವಿನ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಕೇತನ್ ತಿರೋಡ್ಕರ್ ಎಂಬುವವರು ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಸಿದ್ದಾರೆ.</p><p>ಅಜಿತ್ ಪವಾರ್ ‘ಆಕಸ್ಮಿಕ’ ಸಾವು ಪ್ರಕರಣದ ತನಿಖೆಯನ್ನು ನಡೆಸುವಂತೆ ಸಿಐಡಿಗೆ ನಿರ್ದೇಶನ ನೀಡಬೇಕು ಮತ್ತು ನಿವೃತ್ತ ಡಿಜಿಸಿಎ ನಿರ್ದೇಶಕರು, ವಾಣಿಜ್ಯ ವಿಮಾನಯಾನ ಸಂಸ್ಥೆಯ ಮುಖ್ಯ ನಿರ್ವಹಣಾ ಎಂಜಿನಿಯರ್, ನಿವೃತ್ತ ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಅವರು ಕೋರಿದ್ದಾರೆ.</p><p>ಜನವರಿ 28ರಂದು ವಿಎಸ್ಆರ್ ವೆಂಚರ್ಸ್ ಒಡೆತನದ ವಿಮಾನ ಪತನಗೊಂಡು ಅಜಿತ್ ಪವಾರ್ ಹಾಗೂ ಇತರ ನಾಲ್ವರು ಮೃತಪಟ್ಟಿದ್ದರು.</p>. <p><strong>ಅರ್ಜಿಯಲ್ಲಿ ಏನಿದೆ?</strong></p><p>ವಿಮಾನ ಅಪಘಾತದ ಬಗ್ಗೆ ಸಿಐಡಿ ತನಿಖೆ ನಡೆಸುವಂತೆ ಕೋರಿ ಫೆ.20ರಂದು ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರಿಗೆ ಪತ್ರ ಬರೆದಿದ್ದಾಗಿ ತಿರೋಡ್ಕರ್ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.</p><p>ವಿಮಾನದ ಬುಕ್ಕಿಂಗ್, ಕಪ್ಪು ಪೆಟ್ಟಿಗೆ ವಿಶ್ಲೇಷಣೆ ಸೇರಿ ಹಲವು ವಿಷಯಗಳ ಬಗ್ಗೆ ವಿವರಗಳನ್ನು ಕೋರಿ ಡಿಜಿಸಿಎ, ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ), ಮುಖ್ಯಮಂತ್ರಿ ಕಚೇರಿ ಮತ್ತು ಬಾರಾಮತಿ ಪೊಲೀಸರಿಗೆ ಆರ್ಟಿಐ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದಾರೆ.</p><p>ಇದ್ಯಾವುದಕ್ಕೂ ಪ್ರತಿಕ್ರಿಯೆ ಬರದ ಕಾರಣ ನ್ಯಾಯಾಲಯದ ಮೆಟ್ಟಿಲು ಹತ್ತಬೇಕಾಯಿತು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.</p><p>ಕೊನೆಯ ಕ್ಷಣದಲ್ಲಿ ರಸ್ತೆ ಪ್ರಯಾಣದಿಂದ ವಿಮಾನ ಪ್ರಯಾಣಕ್ಕೆ ಬದಲಾಯಿಸಿಲಾಗಿದೆ ಎಂಬ ಆರೋಪ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪಿಐಎಲ್ನಲ್ಲಿ ಅವರು ಎತ್ತಿದ್ದಾರೆ. ಪೈಲಟ್ಗಳ ಬದಲಾವಣೆಯನ್ನು ಅವರು ಪ್ರಶ್ನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>