<p><strong>ತಿರುವನಂತಪುರ</strong>: ‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ. ‘ಸಿನಿಮಾದ ಮೊದಲ ಭಾಗವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಹಾಗೂ ಜಾತ್ಯತೀತ ಸಂಪ್ರದಾಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಮಾಡಲಾಗಿತ್ತು’ ಎಂದಿದ್ದಾರೆ. </p>.ಕೇರಳ ಹಿಂದಿಕ್ಕಿ ಸಂಪೂರ್ಣ ಸಾಕ್ಷರತೆ ಸಾಧಿಸಿದ ಮೀಜೊರಾಂ ಸಾಧನೆಯ ಹಾದಿ ಹೀಗಿತ್ತು...<p>ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರ ಕಚೇರಿ, ‘ಸಮಾಜದಲ್ಲಿ ಭಿನ್ನತೆ ಹಾಗೂ ದ್ವೇಷ ಹರಡಲು ಸೃಷ್ಟಿ ಮಾಡಿದ ವಿಷಪೂರಿತ ರಚನೆಗಳನ್ನು ಪ್ರದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ‘ಬೀಫ್’ ನಂತಹ ಸಿನಿಮಾಗಳಿಗೆ ಚಲನಚಿತ್ರೋತ್ಸವದಲ್ಲಿ ಅವಕಾಶ ನಿರಾಕರಿಸಲಾಗುತ್ತದೆ’ ಎಂದು ಟೀಕಿಸಿದ್ದಾರೆ.</p><p>‘ದಿ ಕೇರಳ ಸ್ಟೋರಿ' ಸಿನಿಮಾ ಬಿತ್ತರಿಸಿದ ಸುಳ್ಳು ನಿರೂಪಣೆಯನ್ನು ಸಂಘ ಪರಿವಾರ ಪಸರಿಸಿವೆ ಎಂದು ಅವರು ಹೇಳಿದ್ದಾರೆ.</p>.ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಬಳ್ಳಾರಿಯಲ್ಲಿ ಮತ್ತೆ ಕೇರಳ ಎಸ್ಐಟಿ ಶೋಧ .<p>ಪರಸ್ಪರ ಒಪ್ಪಿಗೆಯಿಂದಾದ ಮದುವೆಗಳನ್ನೂ ಕೋಮುವಾದ ಹಾಗೂ ಬಲವಂತದ ಧರ್ಮ ಪರಿವರ್ತನೆ ಎಂದು ಬಿಂಬಿಸಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.</p><p>ಯಾವುದೇ ಕೋಮು ಗಲಭೆಗಳಿಲ್ಲದ ಮತ್ತು ಸಮುದಾಯಗಳ ನಡುವೆ ಪರಸ್ಪರ ಗೌರವದ ಸಂಪ್ರದಾಯವಿರುವ ಕೇರಳವನ್ನು ಅಂತಹ ಶಕ್ತಿಗಳು ಹಗೆತನದಿಂದ ನೋಡುತ್ತವೆ ಎಂದ ಅವರು, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ನಾಶಪಡಿಸಲು ಯತ್ನಿಸುತ್ತಿರುವ ಅವರು 'ನಾಡಿನ ಶತ್ರುಗಳು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಲೈಂಗಿಕ ದೌರ್ಜನ್ಯ: ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ಗೆ ನಿರೀಕ್ಷಣಾ ಜಾಮೀನು.<p>‘ಸುಸ್ಥಿರ ಅಭಿವೃದ್ಧಿಯಲ್ಲಿ ಅಗ್ರಸ್ಥಾನದಲ್ಲಿರುವ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮಾದರಿಯಾಗಿರುವ ಧಾರ್ಮಿಕ ಸಾಮರಸ್ಯದ ಕೇರಳವನ್ನು ಭಯೋತ್ಪಾದನೆಯ ಕೇಂದ್ರ ಎಂದು ಚಿತ್ರೀಕರಣ ಮಾಡುವ ಪ್ರಯತ್ನವನ್ನು ತಿರಸ್ಕರಿಸಬೇಕು’ ಎಂದು ಕರೆ ನೀಡಿದ್ದಾರೆ.</p><p>‘ಕೇರಳದ ಜಾತ್ಯತೀತ ಬುನಾದಿಯು ಸುಳ್ಳು ಪ್ರಚಾರದಿಂದ ಕುಸಿಯದಂತೆ ನೋಡಿಕೊಳ್ಳುವುದು ಮತ್ತು ಜಾತ್ಯತೀತತೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಅದನ್ನು ತಿರಸ್ಕರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.</p>.ಕೇರಳ: ಆನೆ ದಾಳಿಗೆ ಮಾವುತ ಬಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ‘ದಿ ಕೇರಳ ಸ್ಟೋರಿ’ ಸಿನಿಮಾದ ಎರಡನೇ ಅಧ್ಯಾಯದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದಾರೆ. ‘ಸಿನಿಮಾದ ಮೊದಲ ಭಾಗವನ್ನು ರಾಜ್ಯದ ವಿರುದ್ಧ ದ್ವೇಷ ಹರಡುವ ಹಾಗೂ ಜಾತ್ಯತೀತ ಸಂಪ್ರದಾಯವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಮಾಡಲಾಗಿತ್ತು’ ಎಂದಿದ್ದಾರೆ. </p>.ಕೇರಳ ಹಿಂದಿಕ್ಕಿ ಸಂಪೂರ್ಣ ಸಾಕ್ಷರತೆ ಸಾಧಿಸಿದ ಮೀಜೊರಾಂ ಸಾಧನೆಯ ಹಾದಿ ಹೀಗಿತ್ತು...<p>ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರ ಕಚೇರಿ, ‘ಸಮಾಜದಲ್ಲಿ ಭಿನ್ನತೆ ಹಾಗೂ ದ್ವೇಷ ಹರಡಲು ಸೃಷ್ಟಿ ಮಾಡಿದ ವಿಷಪೂರಿತ ರಚನೆಗಳನ್ನು ಪ್ರದರ್ಶನ ಮಾಡಲು ಅವಕಾಶ ನೀಡಲಾಗುತ್ತದೆ. ಆದರೆ ‘ಬೀಫ್’ ನಂತಹ ಸಿನಿಮಾಗಳಿಗೆ ಚಲನಚಿತ್ರೋತ್ಸವದಲ್ಲಿ ಅವಕಾಶ ನಿರಾಕರಿಸಲಾಗುತ್ತದೆ’ ಎಂದು ಟೀಕಿಸಿದ್ದಾರೆ.</p><p>‘ದಿ ಕೇರಳ ಸ್ಟೋರಿ' ಸಿನಿಮಾ ಬಿತ್ತರಿಸಿದ ಸುಳ್ಳು ನಿರೂಪಣೆಯನ್ನು ಸಂಘ ಪರಿವಾರ ಪಸರಿಸಿವೆ ಎಂದು ಅವರು ಹೇಳಿದ್ದಾರೆ.</p>.ಶಬರಿಮಲೆ ಚಿನ್ನ ಕಳ್ಳತನ ಪ್ರಕರಣ: ಬಳ್ಳಾರಿಯಲ್ಲಿ ಮತ್ತೆ ಕೇರಳ ಎಸ್ಐಟಿ ಶೋಧ .<p>ಪರಸ್ಪರ ಒಪ್ಪಿಗೆಯಿಂದಾದ ಮದುವೆಗಳನ್ನೂ ಕೋಮುವಾದ ಹಾಗೂ ಬಲವಂತದ ಧರ್ಮ ಪರಿವರ್ತನೆ ಎಂದು ಬಿಂಬಿಸಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.</p><p>ಯಾವುದೇ ಕೋಮು ಗಲಭೆಗಳಿಲ್ಲದ ಮತ್ತು ಸಮುದಾಯಗಳ ನಡುವೆ ಪರಸ್ಪರ ಗೌರವದ ಸಂಪ್ರದಾಯವಿರುವ ಕೇರಳವನ್ನು ಅಂತಹ ಶಕ್ತಿಗಳು ಹಗೆತನದಿಂದ ನೋಡುತ್ತವೆ ಎಂದ ಅವರು, ರಾಜ್ಯದ ಶಾಂತಿ ಮತ್ತು ನೆಮ್ಮದಿಯನ್ನು ನಾಶಪಡಿಸಲು ಯತ್ನಿಸುತ್ತಿರುವ ಅವರು 'ನಾಡಿನ ಶತ್ರುಗಳು' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಲೈಂಗಿಕ ದೌರ್ಜನ್ಯ: ಕೇರಳ ಶಾಸಕ ರಾಹುಲ್ ಮಾಂಕೂಟತ್ತಿಲ್ಗೆ ನಿರೀಕ್ಷಣಾ ಜಾಮೀನು.<p>‘ಸುಸ್ಥಿರ ಅಭಿವೃದ್ಧಿಯಲ್ಲಿ ಅಗ್ರಸ್ಥಾನದಲ್ಲಿರುವ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮಾದರಿಯಾಗಿರುವ ಧಾರ್ಮಿಕ ಸಾಮರಸ್ಯದ ಕೇರಳವನ್ನು ಭಯೋತ್ಪಾದನೆಯ ಕೇಂದ್ರ ಎಂದು ಚಿತ್ರೀಕರಣ ಮಾಡುವ ಪ್ರಯತ್ನವನ್ನು ತಿರಸ್ಕರಿಸಬೇಕು’ ಎಂದು ಕರೆ ನೀಡಿದ್ದಾರೆ.</p><p>‘ಕೇರಳದ ಜಾತ್ಯತೀತ ಬುನಾದಿಯು ಸುಳ್ಳು ಪ್ರಚಾರದಿಂದ ಕುಸಿಯದಂತೆ ನೋಡಿಕೊಳ್ಳುವುದು ಮತ್ತು ಜಾತ್ಯತೀತತೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ಅದನ್ನು ತಿರಸ್ಕರಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.</p>.ಕೇರಳ: ಆನೆ ದಾಳಿಗೆ ಮಾವುತ ಬಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>