<p><strong>ತಿರುವನಂತಪುರ</strong>: ‘ಪಿಣರಾಯಿ ವಿಜಯನ್ ಅವರು ಮತ್ತೊಮ್ಮೆ ಕೇರಳ ಮುಖ್ಯಮಂತ್ರಿಯಾಗುವುದು ಖಚಿತ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. </p>.<p>ಕೇರಳ ರಾಜ್ಯ ಯೋಜನಾ ಮಂಡಳಿಯು ಭಾನುವಾರ ಆಯೋಜಿಸಿದ್ದ ‘ವಿಷನ್ 2031: ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ‘ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನದಲ್ಲಿ ಕೇರಳ ರಾಜ್ಯ ಮುಂಚೂಣಿಯಲ್ಲಿದೆ’ ಎಂದು ಬಣ್ಣಿಸಿದ್ದಾರೆ.</p>.<p>‘ಕರ್ನಾಟಕವು ಪಂಚಾಯತ್ ರಾಜ್ಗೆ ಸಂಬಂಧಿಸಿದಂತೆ ಅತ್ಯುತ್ತಮ ಕಾನೂನುಗಳನ್ನು ಹೊಂದಿದೆ. ಕೇರಳವು ಕೂಡ ಕಾನೂನುಗಳಿಗೆ ತಿದ್ದುಪಡಿ ತರಬೇಕು’ ಎಂದರು.</p>.<p>‘ವೈಯಕ್ತಿಕ ಹೇಳಿಕೆ’: ಪಿಣರಾಯಿ ವಿಜಯನ್ ಕುರಿತು ಮಣಿಶಂಕರ್ ಅಯ್ಯರ್ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. ‘ಇದು ಅಯ್ಯರ್ ಅವರ ವೈಯಕ್ತಿಕ ಹೇಳಿಕೆ’ ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ‘ಪಿಣರಾಯಿ ವಿಜಯನ್ ಅವರು ಮತ್ತೊಮ್ಮೆ ಕೇರಳ ಮುಖ್ಯಮಂತ್ರಿಯಾಗುವುದು ಖಚಿತ’ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಹೇಳಿದ್ದಾರೆ. </p>.<p>ಕೇರಳ ರಾಜ್ಯ ಯೋಜನಾ ಮಂಡಳಿಯು ಭಾನುವಾರ ಆಯೋಜಿಸಿದ್ದ ‘ವಿಷನ್ 2031: ಅಭಿವೃದ್ಧಿ ಮತ್ತು ಪ್ರಜಾಪ್ರಭುತ್ವದ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ‘ಪಂಚಾಯತ್ ರಾಜ್ ವ್ಯವಸ್ಥೆ ಅನುಷ್ಠಾನದಲ್ಲಿ ಕೇರಳ ರಾಜ್ಯ ಮುಂಚೂಣಿಯಲ್ಲಿದೆ’ ಎಂದು ಬಣ್ಣಿಸಿದ್ದಾರೆ.</p>.<p>‘ಕರ್ನಾಟಕವು ಪಂಚಾಯತ್ ರಾಜ್ಗೆ ಸಂಬಂಧಿಸಿದಂತೆ ಅತ್ಯುತ್ತಮ ಕಾನೂನುಗಳನ್ನು ಹೊಂದಿದೆ. ಕೇರಳವು ಕೂಡ ಕಾನೂನುಗಳಿಗೆ ತಿದ್ದುಪಡಿ ತರಬೇಕು’ ಎಂದರು.</p>.<p>‘ವೈಯಕ್ತಿಕ ಹೇಳಿಕೆ’: ಪಿಣರಾಯಿ ವಿಜಯನ್ ಕುರಿತು ಮಣಿಶಂಕರ್ ಅಯ್ಯರ್ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. ‘ಇದು ಅಯ್ಯರ್ ಅವರ ವೈಯಕ್ತಿಕ ಹೇಳಿಕೆ’ ಎಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>