<p><strong>ತಿರುವನಂತಪುರ:</strong> ಕೇರಳದಲ್ಲಿ ವಿರೋಧ ಪಕ್ಷಗಳ ವ್ಯಾಪಕ ಟೀಕೆಯ ಹೊರತಾಗಿಯೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವೈಯಕ್ತಿಕ, ರಾಜಕೀಯ ಪಯಣ ಹಾಗೂ ಆಡಳಿತಾತ್ಮಕ ಸಾಧನೆಗಳನ್ನು ತೋರಿಸುವ ಸಾಕ್ಷ್ಯಚಿತ್ರವನ್ನು ಬುಧವಾರ ಪ್ರದರ್ಶಿಸಲಾಯಿತು.</p>.<p>‘ಪಿಣರಾಯಿ ದಿ ಲೆಜೆಂಡ್’ ಎಂಬ 30 ನಿಮಿಷಗಳ ಸಾಕ್ಷ್ಯಚಿತ್ರವನ್ನು ಹಿರಿಯ ನಟ ಕಮಲ್ ಹಾಸನ್ ಅವರು ಬಿಡುಗಡೆ ಮಾಡಿದರು. ಪಿಣರಾಯಿ ಅವರ ಸಂಪುಟ ಸಚಿವರಾದ ವಿ. ಶಿವನ್ಕುಟ್ಟಿ, ರಾಜ್ಯಸಭಾ ಸದಸ್ಯ ಎ.ಎ.ರಹೀಂ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಇದನ್ನು ಬಿಡುಗಡೆ ಮಾಡಲಾಯಿತು.</p>.<p>ವಿಜಯನ್ ಸರ್ಕಾರದ ಎರಡನೇ ಅವಧಿಯ 4ನೇ ವಾರ್ಷಿಕೋತ್ಸವ ಸ್ಮರಣಾರ್ಥ ಕೇರಳ ಸಚಿವಾಲಯದ ನೌಕರರ ಸಂಘ ಇಲ್ಲಿನ ಕೇಂದ್ರ ಕ್ರೀಡಾಂಗಣದಲ್ಲಿ ಸಮಾರಂಭ ಹಮ್ಮಿಕೊಂಡಿತ್ತು. ಮುಖ್ಯಮಂತ್ರಿ ಪಿಣರಾಯಿ ಅವರು ಈ ವೇಳೆ ಕೇಕ್ ಕತ್ತರಿಸಿದರು.</p>.<p>‘ಪಿಣರಾಯಿ ವಿಜಯನ್ ಅವರು ಸಚಿವಾಲಯದ ನೌಕರರನ್ನು ಅತ್ಯಂತ ಗೌರವಯುತವಾಗಿ ನೋಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯವನ್ನಾಳಿದ ಹಿಂದಿನ ಮುಖ್ಯಮಂತ್ರಿಗಳಿಗಿಂತ ಮುಂದಿದ್ದಾರೆ’ ಎಂದು ನೌಕರರ ಸಂಘದ ಅಧ್ಯಕ್ಷ ಪಿ. ಹನಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ವಿರೋಧ ಪಕ್ಷಗಳ ವ್ಯಾಪಕ ಟೀಕೆಯ ಹೊರತಾಗಿಯೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ವೈಯಕ್ತಿಕ, ರಾಜಕೀಯ ಪಯಣ ಹಾಗೂ ಆಡಳಿತಾತ್ಮಕ ಸಾಧನೆಗಳನ್ನು ತೋರಿಸುವ ಸಾಕ್ಷ್ಯಚಿತ್ರವನ್ನು ಬುಧವಾರ ಪ್ರದರ್ಶಿಸಲಾಯಿತು.</p>.<p>‘ಪಿಣರಾಯಿ ದಿ ಲೆಜೆಂಡ್’ ಎಂಬ 30 ನಿಮಿಷಗಳ ಸಾಕ್ಷ್ಯಚಿತ್ರವನ್ನು ಹಿರಿಯ ನಟ ಕಮಲ್ ಹಾಸನ್ ಅವರು ಬಿಡುಗಡೆ ಮಾಡಿದರು. ಪಿಣರಾಯಿ ಅವರ ಸಂಪುಟ ಸಚಿವರಾದ ವಿ. ಶಿವನ್ಕುಟ್ಟಿ, ರಾಜ್ಯಸಭಾ ಸದಸ್ಯ ಎ.ಎ.ರಹೀಂ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಇದನ್ನು ಬಿಡುಗಡೆ ಮಾಡಲಾಯಿತು.</p>.<p>ವಿಜಯನ್ ಸರ್ಕಾರದ ಎರಡನೇ ಅವಧಿಯ 4ನೇ ವಾರ್ಷಿಕೋತ್ಸವ ಸ್ಮರಣಾರ್ಥ ಕೇರಳ ಸಚಿವಾಲಯದ ನೌಕರರ ಸಂಘ ಇಲ್ಲಿನ ಕೇಂದ್ರ ಕ್ರೀಡಾಂಗಣದಲ್ಲಿ ಸಮಾರಂಭ ಹಮ್ಮಿಕೊಂಡಿತ್ತು. ಮುಖ್ಯಮಂತ್ರಿ ಪಿಣರಾಯಿ ಅವರು ಈ ವೇಳೆ ಕೇಕ್ ಕತ್ತರಿಸಿದರು.</p>.<p>‘ಪಿಣರಾಯಿ ವಿಜಯನ್ ಅವರು ಸಚಿವಾಲಯದ ನೌಕರರನ್ನು ಅತ್ಯಂತ ಗೌರವಯುತವಾಗಿ ನೋಡಿಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯವನ್ನಾಳಿದ ಹಿಂದಿನ ಮುಖ್ಯಮಂತ್ರಿಗಳಿಗಿಂತ ಮುಂದಿದ್ದಾರೆ’ ಎಂದು ನೌಕರರ ಸಂಘದ ಅಧ್ಯಕ್ಷ ಪಿ. ಹನಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>