<p><strong>ತಿರುವನಂತಪುರ:</strong> ‘ದಿತ್ವಾ’ ಚಂಡಮಾರುತದ ಕಾರಣದಿಂದ ಶ್ರೀಲಂಕಾದ ಕೊಲಂಬೊ ವಿಮಾನ ನಿಲ್ದಾಣದಲ್ಲಿ ಅತಂತ್ರರಾಗಿರುವ ಭಾರತೀಯರಿಗೆ ಅಗತ್ಯ ನೆರವು ನೀಡಬೇಕೆಂದು ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪತ್ರ ಬರೆದಿದ್ದಾರೆ.</p> <p>‘ಚಂಡಮಾರುತದ ಪರಿಣಾಮವಾಗಿ ಕೊಲಂಬೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೇರಳದವರೂ ಸೇರಿದಂತೆ ಸುಮಾರು 300 ಭಾರತೀಯ ಪ್ರಯಾಣಿಕರು ಅತಂತ್ರರಾಗಿದ್ದಾರೆ.</p>.Cyclone Ditwah | ದಿತ್ವಾ ಅಬ್ಬರ: ತಮಿಳುನಾಡಿನಲ್ಲಿ ಮೂವರು ಸಾವು. <p>ಕಳೆದ ಮೂರು ದಿನಗಳಿಂದ ಅವರಿಗೆ ಸರಿಯಾದ ಆಹಾರ ನೀರು ಮತ್ತು ಅಗತ್ಯ ಸೌಲಭ್ಯವಿಲ್ಲ’ ಎಂದು ತಿಳಿಸಿದ್ದಾರೆ. ‘ಅತಂತ್ರವಾಗಿರುವ ಪ್ರಯಾಣಿಕರ ಬಗ್ಗೆ ಕಳವಳ ಉಂಟಾಗಿದೆ. ಅವರಿಗೆ ನೆರವು ನೀಡಲು ಕೇರಳ ಸರ್ಕಾರ ಸಿದ್ಧವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಾರ್ಯೋನ್ಮುಖವಾಗಲಿ’ ಎಂದು ಹೇಳಿದ್ದಾರೆ.</p>.ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ದಿತ್ವಾ’ ಚಂಡಮಾರುತದ ಕಾರಣದಿಂದ ಶ್ರೀಲಂಕಾದ ಕೊಲಂಬೊ ವಿಮಾನ ನಿಲ್ದಾಣದಲ್ಲಿ ಅತಂತ್ರರಾಗಿರುವ ಭಾರತೀಯರಿಗೆ ಅಗತ್ಯ ನೆರವು ನೀಡಬೇಕೆಂದು ಕೋರಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪತ್ರ ಬರೆದಿದ್ದಾರೆ.</p> <p>‘ಚಂಡಮಾರುತದ ಪರಿಣಾಮವಾಗಿ ಕೊಲಂಬೊ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೇರಳದವರೂ ಸೇರಿದಂತೆ ಸುಮಾರು 300 ಭಾರತೀಯ ಪ್ರಯಾಣಿಕರು ಅತಂತ್ರರಾಗಿದ್ದಾರೆ.</p>.Cyclone Ditwah | ದಿತ್ವಾ ಅಬ್ಬರ: ತಮಿಳುನಾಡಿನಲ್ಲಿ ಮೂವರು ಸಾವು. <p>ಕಳೆದ ಮೂರು ದಿನಗಳಿಂದ ಅವರಿಗೆ ಸರಿಯಾದ ಆಹಾರ ನೀರು ಮತ್ತು ಅಗತ್ಯ ಸೌಲಭ್ಯವಿಲ್ಲ’ ಎಂದು ತಿಳಿಸಿದ್ದಾರೆ. ‘ಅತಂತ್ರವಾಗಿರುವ ಪ್ರಯಾಣಿಕರ ಬಗ್ಗೆ ಕಳವಳ ಉಂಟಾಗಿದೆ. ಅವರಿಗೆ ನೆರವು ನೀಡಲು ಕೇರಳ ಸರ್ಕಾರ ಸಿದ್ಧವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಕಾರ್ಯೋನ್ಮುಖವಾಗಲಿ’ ಎಂದು ಹೇಳಿದ್ದಾರೆ.</p>.ದಿತ್ವಾ ಅಬ್ಬರ: ಶ್ರೀಲಂಕಾದಲ್ಲಿ 334 ಮಂದಿ ಸಾವು; 20,000 ಮನೆಗಳಿಗೆ ಹಾನಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>