<p><strong>ಪಟ್ನಾ:</strong> ಪಿತೃಪಕ್ಷದ ಅಂಗವಾಗಿ ಸಾಮಾಜಿಕ ಕಾರ್ಯಕರ್ತ ಚಂದನ್ ಸಿಂಗ್ ಎಂಬುವರು ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ಗಯಾದಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ.</p>.<p>ಅಲ್ಲದೇ, 1965ರ ಯುದ್ಧದಲ್ಲಿ ಹುತಾತ್ಮರಾದ ಯೋಧ, ಮಾರ್ಷಲ್ ಅರ್ಜುನ್ ಸಿಂಗ್, ದೇಶದ ವಿವಿಧೆಡೆ ಸ್ವಚ್ಛತಾ ಕಾರ್ಯದ ಕರ್ತವ್ಯದಲ್ಲಿರುವಾಗ ಸಾವನ್ನಪ್ಪಿರುವ 1,700 ಕಾರ್ಮಿಕರಿಗೆ, ಸಾಮೂಹಿಕ ಹಲ್ಲೆಯಿಂದಾಗಿ ಪ್ರಾಣ ಕಳೆದುಕೊಂಡಿರುವವರ ಹೆಸರಿನಲ್ಲಿಯೂ ಅವರು ಇಲ್ಲಿ ಪಿಂಡ ಪ್ರದಾನ ಮಾಡಿ ಗಮನ ಸೆಳೆದಿದ್ದಾರೆ.</p>.<p>‘ನನ್ನ ತಂದೆ ಸುರೇಶ್ ನಾರಾಯಣ ಕೂಡ ಪತ್ರಕರ್ತರಾಗಿದ್ದರು. ಜಗತ್ತಿನಲ್ಲಿ ವಿವಿಧ ಕಾರಣಗಳಿಂದಾಗಿ ಪ್ರಾಣ ಕಳೆದುಕೊಳ್ಳುವವರ ಹೆಸರಿನಲ್ಲಿ ಅವರು 2001ರಿಂದ ಪಿಂಡ ಪ್ರದಾನಮಾಡುತ್ತಿದ್ದರು.ಈ ಧಾರ್ಮಿಕ ವಿಧಿಯನ್ನು ಮುಂದುವರಿಸುವಂತೆ ಅವರು ಕೊನೆಯುಸಿರೆಳೆಯುದಕ್ಕೂ ಮುನ್ನ ನನಗೆ ಹೇಳಿದ್ದರು ಎಂದು ಚಂದನ್ ಸಿಂಗ್ ಹೇಳಿದರು.</p>.<p>‘ನನ್ನ ತಂದೆಯಂತೆ ಗೌರಿ ಲಂಕೇಶ್ ಸಹ ಪತ್ರಕರ್ತರಾಗಿದ್ದರು. ಹೀಗಾಗಿ ಅವರ ಹೆಸರಿನಲ್ಲಿ ಪಿಂಡ ಪ್ರದಾನ ಮಾಡುವುದು ಸೂಕ್ತ ಎನಿಸಿದ್ದರಿಂದ ಈ ಧಾರ್ಮಿಕ ವಿಧಿಯನ್ನು ನೆರವೇರಿಸಿದೆ. ಇತ್ತೀಚೆಗೆ ಗೋರಖ್ಪುರದ ಆಸ್ಪತ್ರೆಯಲ್ಲಿ ಅಸುನೀಗಿದ 60 ಜನ ಮಕ್ಕಳ ಹೆಸರಿನಲ್ಲಿಯೂ ಪಿಂಡ ಪ್ರದಾನ ಮಾಡಿರುವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> ಪಿತೃಪಕ್ಷದ ಅಂಗವಾಗಿ ಸಾಮಾಜಿಕ ಕಾರ್ಯಕರ್ತ ಚಂದನ್ ಸಿಂಗ್ ಎಂಬುವರು ಪತ್ರಕರ್ತೆ ಗೌರಿ ಲಂಕೇಶ್ ಹೆಸರಿನಲ್ಲಿ ಗಯಾದಲ್ಲಿ ಪಿಂಡ ಪ್ರದಾನ ಮಾಡಿದ್ದಾರೆ.</p>.<p>ಅಲ್ಲದೇ, 1965ರ ಯುದ್ಧದಲ್ಲಿ ಹುತಾತ್ಮರಾದ ಯೋಧ, ಮಾರ್ಷಲ್ ಅರ್ಜುನ್ ಸಿಂಗ್, ದೇಶದ ವಿವಿಧೆಡೆ ಸ್ವಚ್ಛತಾ ಕಾರ್ಯದ ಕರ್ತವ್ಯದಲ್ಲಿರುವಾಗ ಸಾವನ್ನಪ್ಪಿರುವ 1,700 ಕಾರ್ಮಿಕರಿಗೆ, ಸಾಮೂಹಿಕ ಹಲ್ಲೆಯಿಂದಾಗಿ ಪ್ರಾಣ ಕಳೆದುಕೊಂಡಿರುವವರ ಹೆಸರಿನಲ್ಲಿಯೂ ಅವರು ಇಲ್ಲಿ ಪಿಂಡ ಪ್ರದಾನ ಮಾಡಿ ಗಮನ ಸೆಳೆದಿದ್ದಾರೆ.</p>.<p>‘ನನ್ನ ತಂದೆ ಸುರೇಶ್ ನಾರಾಯಣ ಕೂಡ ಪತ್ರಕರ್ತರಾಗಿದ್ದರು. ಜಗತ್ತಿನಲ್ಲಿ ವಿವಿಧ ಕಾರಣಗಳಿಂದಾಗಿ ಪ್ರಾಣ ಕಳೆದುಕೊಳ್ಳುವವರ ಹೆಸರಿನಲ್ಲಿ ಅವರು 2001ರಿಂದ ಪಿಂಡ ಪ್ರದಾನಮಾಡುತ್ತಿದ್ದರು.ಈ ಧಾರ್ಮಿಕ ವಿಧಿಯನ್ನು ಮುಂದುವರಿಸುವಂತೆ ಅವರು ಕೊನೆಯುಸಿರೆಳೆಯುದಕ್ಕೂ ಮುನ್ನ ನನಗೆ ಹೇಳಿದ್ದರು ಎಂದು ಚಂದನ್ ಸಿಂಗ್ ಹೇಳಿದರು.</p>.<p>‘ನನ್ನ ತಂದೆಯಂತೆ ಗೌರಿ ಲಂಕೇಶ್ ಸಹ ಪತ್ರಕರ್ತರಾಗಿದ್ದರು. ಹೀಗಾಗಿ ಅವರ ಹೆಸರಿನಲ್ಲಿ ಪಿಂಡ ಪ್ರದಾನ ಮಾಡುವುದು ಸೂಕ್ತ ಎನಿಸಿದ್ದರಿಂದ ಈ ಧಾರ್ಮಿಕ ವಿಧಿಯನ್ನು ನೆರವೇರಿಸಿದೆ. ಇತ್ತೀಚೆಗೆ ಗೋರಖ್ಪುರದ ಆಸ್ಪತ್ರೆಯಲ್ಲಿ ಅಸುನೀಗಿದ 60 ಜನ ಮಕ್ಕಳ ಹೆಸರಿನಲ್ಲಿಯೂ ಪಿಂಡ ಪ್ರದಾನ ಮಾಡಿರುವೆ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>