<p><strong>ನವದೆಹಲಿ</strong>: ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಗೆ ₹10 ಸಾವಿರದಿಂದ ₹15 ಸಾವಿರದಷ್ಟು ಅತ್ಯಲ್ಪ ನಿವೃತ್ತಿ ವೇತನ ನೀಡಲಾಗುತ್ತಿದೆ. ಇದು ಶೋಚನೀಯ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>‘ನಿವೃತ್ತಿ ವೇತನ ನೀಡುವುದಕ್ಕೆ ಸಂಬಂಧಿಸಿ ಮಾನವೀಯತೆ ದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೇ ಹೊರತು ಕಾನೂನಾತ್ಮಕ ವಿಧಾನಕ್ಕೆ ಜೋತು ಬೀಳಬಾರದು’ ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದೆ.</p>.<p>ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಗೆ ನೀಡಲಾಗುತ್ತಿರುವ ಪಿಂಚಣಿಯಲ್ಲಿ ವ್ಯತ್ಯಾಸವಿದೆ ಎಂಬ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಕೆ.ವಿ.ವಿಶ್ವನಾಥನ್ ಅವರು ಇದ್ದ ನ್ಯಾಯಪೀಠ ನಡೆಸಿತು.</p>.<p>‘ಜಿಲ್ಲಾ ನ್ಯಾಯಾಲಯಗಳಿಂದ ಪದೋನ್ನತಿ ಹೊಂದಿ ಹೈಕೋರ್ಟ್ ನ್ಯಾಯಮೂರ್ತಿಗಳಾದವರನ್ನು ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಿಸಿರುವುದೇ ಈ ಅತ್ಯಲ್ಪ ಪಿಂಚಣಿಗೆ ಕಾರಣಗಳಲ್ಲೊಂದು.</p>.<p>ಇನ್ನೊಂದೆಡೆ, ಹೈಕೋರ್ಟ್ಗೆ ನೇಮಕಗೊಂಡಿರುವ ಹಿರಿಯ ವಕೀಲರಿಗೆ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನ ಸಿಗುತ್ತಿದೆ. ಇದು ಪಿಂಚಣಿಯಲ್ಲಿನ ವ್ಯತ್ಯಾಸಕ್ಕೆ ಮತ್ತೊಂದು ಕಾರಣ.</p>.<p>ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ‘ಈ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಯತ್ನಿಸಲಿದೆ. ಈ ಕುರಿತ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಬೇಕು’ ಎಂದು ಪೀಠಕ್ಕೆ ಮನವಿ ಮಾಡಿದರು.</p>.<p>‘ಈ ವಿಷಯ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಿ. ಇದರಿಂದ ನಾವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದು ತಪ್ಪಲಿದೆ’ ಎಂದ ಪೀಠ, ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಗೆ ₹10 ಸಾವಿರದಿಂದ ₹15 ಸಾವಿರದಷ್ಟು ಅತ್ಯಲ್ಪ ನಿವೃತ್ತಿ ವೇತನ ನೀಡಲಾಗುತ್ತಿದೆ. ಇದು ಶೋಚನೀಯ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>‘ನಿವೃತ್ತಿ ವೇತನ ನೀಡುವುದಕ್ಕೆ ಸಂಬಂಧಿಸಿ ಮಾನವೀಯತೆ ದೃಷ್ಟಿಯಿಂದ ಕ್ರಮ ಕೈಗೊಳ್ಳಬೇಕೇ ಹೊರತು ಕಾನೂನಾತ್ಮಕ ವಿಧಾನಕ್ಕೆ ಜೋತು ಬೀಳಬಾರದು’ ಎಂದು ಸಂಬಂಧಪಟ್ಟ ಅಧಿಕಾರಿಗಳನ್ನು ಉದ್ದೇಶಿಸಿ ಹೇಳಿದೆ.</p>.<p>ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳಿಗೆ ನೀಡಲಾಗುತ್ತಿರುವ ಪಿಂಚಣಿಯಲ್ಲಿ ವ್ಯತ್ಯಾಸವಿದೆ ಎಂಬ ಕುರಿತು ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಕೆ.ವಿ.ವಿಶ್ವನಾಥನ್ ಅವರು ಇದ್ದ ನ್ಯಾಯಪೀಠ ನಡೆಸಿತು.</p>.<p>‘ಜಿಲ್ಲಾ ನ್ಯಾಯಾಲಯಗಳಿಂದ ಪದೋನ್ನತಿ ಹೊಂದಿ ಹೈಕೋರ್ಟ್ ನ್ಯಾಯಮೂರ್ತಿಗಳಾದವರನ್ನು ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಿಸಿರುವುದೇ ಈ ಅತ್ಯಲ್ಪ ಪಿಂಚಣಿಗೆ ಕಾರಣಗಳಲ್ಲೊಂದು.</p>.<p>ಇನ್ನೊಂದೆಡೆ, ಹೈಕೋರ್ಟ್ಗೆ ನೇಮಕಗೊಂಡಿರುವ ಹಿರಿಯ ವಕೀಲರಿಗೆ ಹಳೆಯ ಪಿಂಚಣಿ ಯೋಜನೆಯ ಪ್ರಯೋಜನ ಸಿಗುತ್ತಿದೆ. ಇದು ಪಿಂಚಣಿಯಲ್ಲಿನ ವ್ಯತ್ಯಾಸಕ್ಕೆ ಮತ್ತೊಂದು ಕಾರಣ.</p>.<p>ಕೇಂದ್ರದ ಪರ ಹಾಜರಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ‘ಈ ಸಮಸ್ಯೆ ಬಗೆಹರಿಸಲು ಕೇಂದ್ರ ಸರ್ಕಾರ ಯತ್ನಿಸಲಿದೆ. ಈ ಕುರಿತ ಅರ್ಜಿಗಳ ವಿಚಾರಣೆಯನ್ನು ಜನವರಿಗೆ ಮುಂದೂಡಬೇಕು’ ಎಂದು ಪೀಠಕ್ಕೆ ಮನವಿ ಮಾಡಿದರು.</p>.<p>‘ಈ ವಿಷಯ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡಿ. ಇದರಿಂದ ನಾವು ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದು ತಪ್ಪಲಿದೆ’ ಎಂದ ಪೀಠ, ವಿಚಾರಣೆಯನ್ನು ಜನವರಿ 8ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>