<p><strong>ಚೆನ್ನೈ:</strong> ಪಕ್ಷದ ಮುಂದಿನ ಗುರಿ ತಮಿಳುನಾಡು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಮರುದಿನವೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರನ್ನು ತಮಿಳುನಾಡಿನ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. </p><p>ಎಐಎಡಿಎಂಕೆ ಬಂಡಾಯ ನಾಯಕರಾದ ಒ.ಪನ್ನೀರಸೆಲ್ವಂ ಹಾಗೂ ಟಿಟಿವಿ ದಿನಕರನ್ ಅವರನ್ನು ಎನ್ಡಿಎ ಮೈತ್ರಿಕೂಟದ ಒಳಗಡೆ ಸೇರಿಸಲು ಬಿಜೆಪಿ ತನ್ನ ಕಾರ್ಯತಂತ್ರವನ್ನು ಬಿರುಸುಗೊಳಿಸಿದೆ.</p><p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚಿಗೆ ವಿಸ್ತೃತ ಸಭೆ ನಡೆಸಿದ್ದರು. ಇದಾದ ಬಳಿಕ ಪೀಯೂಷ್ ಗೋಯಲ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ. </p><p>ರಾಜ್ಯ ಸಚಿವರಾದ ಅರ್ಜುನ್ ಮೇಘವಾಲ್ ಮುರಳೀಧರ್ ಮಾಹೊಲ್ ಅವರನ್ನು ಸಹ ಉಸ್ತುವಾರಿಗಳಾಗಿ ನೇಮಿಸಲಾಗಿದೆ. </p><p>2019ರಲ್ಲಿಯೂ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವಲ್ಲಿ ಪೀಯೂಷ್ ಅವರು ಪ್ರಮುಖ ಪಾತ್ರ ವಹಿಸಿದ್ದು ಪಳನಿಸ್ವಾಮಿ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಬಂದಾಗ ಕಠಿಣ ಸಂಧಾನಕಾರರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಪಕ್ಷದ ಮುಂದಿನ ಗುರಿ ತಮಿಳುನಾಡು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಮರುದಿನವೇ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಅವರನ್ನು ತಮಿಳುನಾಡಿನ ಬಿಜೆಪಿ ಚುನಾವಣಾ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. </p><p>ಎಐಎಡಿಎಂಕೆ ಬಂಡಾಯ ನಾಯಕರಾದ ಒ.ಪನ್ನೀರಸೆಲ್ವಂ ಹಾಗೂ ಟಿಟಿವಿ ದಿನಕರನ್ ಅವರನ್ನು ಎನ್ಡಿಎ ಮೈತ್ರಿಕೂಟದ ಒಳಗಡೆ ಸೇರಿಸಲು ಬಿಜೆಪಿ ತನ್ನ ಕಾರ್ಯತಂತ್ರವನ್ನು ಬಿರುಸುಗೊಳಿಸಿದೆ.</p><p>ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚಿಗೆ ವಿಸ್ತೃತ ಸಭೆ ನಡೆಸಿದ್ದರು. ಇದಾದ ಬಳಿಕ ಪೀಯೂಷ್ ಗೋಯಲ್ ಅವರನ್ನು ಚುನಾವಣಾ ಉಸ್ತುವಾರಿಯಾಗಿ ನೇಮಿಸಲಾಗಿದೆ. </p><p>ರಾಜ್ಯ ಸಚಿವರಾದ ಅರ್ಜುನ್ ಮೇಘವಾಲ್ ಮುರಳೀಧರ್ ಮಾಹೊಲ್ ಅವರನ್ನು ಸಹ ಉಸ್ತುವಾರಿಗಳಾಗಿ ನೇಮಿಸಲಾಗಿದೆ. </p><p>2019ರಲ್ಲಿಯೂ ಎಐಎಡಿಎಂಕೆ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವಲ್ಲಿ ಪೀಯೂಷ್ ಅವರು ಪ್ರಮುಖ ಪಾತ್ರ ವಹಿಸಿದ್ದು ಪಳನಿಸ್ವಾಮಿ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ವಿಚಾರ ಬಂದಾಗ ಕಠಿಣ ಸಂಧಾನಕಾರರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>