<p><strong>ಮದುರೈ (ತಮಿಳುನಾಡು)</strong>: ಎಐಎಡಿಎಂಕೆಯ ಉಚ್ಚಾಟಿತ ನಾಯಕ ಒ.ಪನ್ನೀರ್ಸೆಲ್ವಂ ಅವರು ಡಿಎಂಕೆ ಸೇರ್ಪಡೆಯಾಗಿದ್ದನ್ನು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಆಗಿರುವ ಕೇಂದ್ರ ಸಚಿವ ಪೀಯೂಷ್ ಗೋಯಲ್ ಶನಿವಾರ ಟೀಕಿಸಿದ್ದಾರೆ.</p>.<p>‘ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪನ್ನೀರ್ಸೆಲ್ವಂ ಅವರಿಗೆ ಅಪಾರ ಗೌರವ, ಪ್ರೀತಿ ನೀಡಿದ್ದರು. ಮುಖ್ಯಮಂತ್ರಿ ಆಗುವ ಅವಕಾಶವನ್ನೂ ಕಲ್ಪಿಸಿದ್ದರು. ಆದರೆ, ಅವರು ಜಯಲಲಿತಾ ಅವರ ಆದರ್ಶಗಳಿಗೆ ದ್ರೋಹ ಬಗೆದಿದ್ದಾರೆ. ತಮಿಳುನಾಡಿನ ಸ್ವಾಭಿಮಾನಿ ಜನರು ಪನ್ನೀರ್ಸೆಲ್ವಂ ಅವರನ್ನು ಕ್ಷಮಿಸುವುದಿಲ್ಲ’ ಎಂದು ಪೀಯೂಷ್ ಹೇಳಿದ್ದಾರೆ.</p>.<p>ಮಾರ್ಚ್ 1ರಂದು ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನ ನಗರಕ್ಕೆ ಭೇಟಿ ನೀಡಿರುವ ಪೀಯೂಷ್ ಅವರು, ಪನ್ನೀರ್ಸೆಲ್ವಂ ಡಿಎಂಕೆಗೆ ಸೇರಿರುವುದು ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.</p>.<p>ಹಿಂದೆ ಬಿಜೆಪಿ ಮೈತ್ರಿಕೂಟದಲ್ಲಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಪನ್ನೀರ್ಸೆಲ್ವಂ ಅವರು, ಫೆಬ್ರವರಿ 27ರಂದು ಡಿಎಂಕೆ ಮುಖ್ಯಸ್ಥ, ಹಾಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಸಮ್ಮುಖದಲ್ಲಿ ತಮ್ಮ ಮಗ ಒ.ಪಿ.ರವೀಂದ್ರನಾಥ್ ಮತ್ತು ಕೆಲವು ಬೆಂಬಲಿಗರೊಂದಿಗೆ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದುರೈ (ತಮಿಳುನಾಡು)</strong>: ಎಐಎಡಿಎಂಕೆಯ ಉಚ್ಚಾಟಿತ ನಾಯಕ ಒ.ಪನ್ನೀರ್ಸೆಲ್ವಂ ಅವರು ಡಿಎಂಕೆ ಸೇರ್ಪಡೆಯಾಗಿದ್ದನ್ನು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಆಗಿರುವ ಕೇಂದ್ರ ಸಚಿವ ಪೀಯೂಷ್ ಗೋಯಲ್ ಶನಿವಾರ ಟೀಕಿಸಿದ್ದಾರೆ.</p>.<p>‘ದಿವಂಗತ ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಪನ್ನೀರ್ಸೆಲ್ವಂ ಅವರಿಗೆ ಅಪಾರ ಗೌರವ, ಪ್ರೀತಿ ನೀಡಿದ್ದರು. ಮುಖ್ಯಮಂತ್ರಿ ಆಗುವ ಅವಕಾಶವನ್ನೂ ಕಲ್ಪಿಸಿದ್ದರು. ಆದರೆ, ಅವರು ಜಯಲಲಿತಾ ಅವರ ಆದರ್ಶಗಳಿಗೆ ದ್ರೋಹ ಬಗೆದಿದ್ದಾರೆ. ತಮಿಳುನಾಡಿನ ಸ್ವಾಭಿಮಾನಿ ಜನರು ಪನ್ನೀರ್ಸೆಲ್ವಂ ಅವರನ್ನು ಕ್ಷಮಿಸುವುದಿಲ್ಲ’ ಎಂದು ಪೀಯೂಷ್ ಹೇಳಿದ್ದಾರೆ.</p>.<p>ಮಾರ್ಚ್ 1ರಂದು ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿಗೆ ಭೇಟಿ ನೀಡಲಿದ್ದು, ಅದಕ್ಕೂ ಮುನ್ನ ನಗರಕ್ಕೆ ಭೇಟಿ ನೀಡಿರುವ ಪೀಯೂಷ್ ಅವರು, ಪನ್ನೀರ್ಸೆಲ್ವಂ ಡಿಎಂಕೆಗೆ ಸೇರಿರುವುದು ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.</p>.<p>ಹಿಂದೆ ಬಿಜೆಪಿ ಮೈತ್ರಿಕೂಟದಲ್ಲಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿಯೂ ಆಗಿರುವ ಪನ್ನೀರ್ಸೆಲ್ವಂ ಅವರು, ಫೆಬ್ರವರಿ 27ರಂದು ಡಿಎಂಕೆ ಮುಖ್ಯಸ್ಥ, ಹಾಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಸಮ್ಮುಖದಲ್ಲಿ ತಮ್ಮ ಮಗ ಒ.ಪಿ.ರವೀಂದ್ರನಾಥ್ ಮತ್ತು ಕೆಲವು ಬೆಂಬಲಿಗರೊಂದಿಗೆ ಡಿಎಂಕೆಗೆ ಸೇರ್ಪಡೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>