ಏತನ್ಮಧ್ಯೆ ಹೈದರ್ಪೋರಾ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ. ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಮೃತಪಟ್ಟಿದ್ದರು. ಅವರು ಭಯೋತ್ಪಾದಕರ ಸಂಪರ್ಕ ಹೊಂದಿದ್ದರು ಎಂದು ಭದ್ರತಾ ಪಡೆ ವಾದಿಸಿದರೆ, ಅಮಾಯಕ ನಾಗರಿಕರು ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ.