<p><strong>ನವದೆಹಲಿ</strong>: ‘ಒಂದು ದೇಶ, ಒಂದು ಚುನಾವಣೆ’ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯು ಸಲ್ಲಿಸಿರುವ ವರದಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದಿಡಲು ಕೇಂದ್ರ ಕಾನೂನು ಸಚಿವಾಲಯ ತಯಾರಿ ನಡೆಸಿದೆ.</p>.<p>ಎನ್ಡಿಎ ಮತ್ತೆ ಅಧಿಕಾರಕ್ಕೇರಿದರೆ ಮೊದಲ 100 ದಿನಗಳಲ್ಲಿ ಮಾಡಬೇಕಾದ ಕೆಲಸದ ಬಗ್ಗೆ ಮಾರ್ಗಸೂಚಿ ಸಿದ್ಧಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೂ ಮುನ್ನ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಿದ್ದರು. ಅದರ ಭಾಗವಾಗಿ ಕಾನೂನು ಸಚಿವಾಲಯ ಈ ಹೆಜ್ಜೆಯಿಟ್ಟಿದೆ ಎಂದು ಮೂಲಗಳು ಶುಕ್ರವಾರ ಹೇಳಿವೆ. </p>.<p>‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯ ಸಾಧಕ–ಬಾಧಕಗಳನ್ನು ಪರಿಶೀಲಿಸಲು ಸರ್ಕಾರ ನೇಮಿಸಿದ್ದ ಉನ್ನತಾಧಿಕಾರ ಸಮಿತಿಯು ತನ್ನ ವರದಿಯನ್ನು ಮಾರ್ಚ್ 15ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.</p>.<p>ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಿ, ಬಳಿಕದ 100 ದಿನಗಳ ಒಳಗಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಶಿಫಾರಸನ್ನು ಸಮಿತಿಯು ಮಾಡಿತ್ತು.</p>.<p>ತನ್ನ ಶಿಫಾರಸುಗಳ ಅನುಷ್ಠಾನಕ್ಕೆ ಒಂದು ತಂಡವನ್ನು ರಚಿಸುವಂತೆಯೂ ಸಲಹೆ ನೀಡಿತ್ತು. ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಸಂಪನ್ಮೂಲಗಳನ್ನು ಉಳಿಸಲು ಸಾಧ್ಯವಾಗುತ್ತದೆ, ಅಭಿವೃದ್ಧಿ ಮತ್ತು ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುತ್ತದೆ ಹಾಗೂ ಪ್ರಜಾಪ್ರಭುತ್ವದ ಬುನಾದಿಯನ್ನು ಬಲಗೊಳಿಸುತ್ತದೆ ಎಂದು ಹೇಳಿತ್ತು.</p>.<p>ಸಂವಿಧಾನಕ್ಕೆ ಒಟ್ಟು 18 ತಿದ್ದುಪಡಿಗಳನ್ನು ತರುವ ಶಿಫಾರಸು ಮಾಡಿದ್ದ ಸಮಿತಿ, ಭಾರತೀಯ ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಒಂದೇ ಮತದಾರರ ಪಟ್ಟಿ ಮತ್ತು ಗುರುತಿನ ಚೀಟಿಗಳನ್ನು ಸಿದ್ಧಪಡಿಸಬೇಕು ಎಂದಿತ್ತು.</p>.<p>ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು 2029ರಿಂದ ಜಾರಿಗೊಳಿಸಬೇಕೆಂಬ ಶಿಫಾರಸನ್ನು ಕಾನೂನು ಸಚಿವಾಲಯ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.</p>.<blockquote>ಕೇಂದ್ರ ಕಾನೂನು ಸಚಿವಾಲಯದಿಂದ ಸಿದ್ಧತೆ ಮಾರ್ಚ್ 15ರಂದು ರಾಷ್ಟ್ರಪತಿಗೆ ವರದಿ ಸಲ್ಲಿಸಿದ್ದ ಉನ್ನತಾಧಿಕಾರ ಸಮಿತಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಒಂದು ದೇಶ, ಒಂದು ಚುನಾವಣೆ’ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿಯು ಸಲ್ಲಿಸಿರುವ ವರದಿಯನ್ನು ಶೀಘ್ರದಲ್ಲೇ ಸಚಿವ ಸಂಪುಟದ ಮುಂದಿಡಲು ಕೇಂದ್ರ ಕಾನೂನು ಸಚಿವಾಲಯ ತಯಾರಿ ನಡೆಸಿದೆ.</p>.<p>ಎನ್ಡಿಎ ಮತ್ತೆ ಅಧಿಕಾರಕ್ಕೇರಿದರೆ ಮೊದಲ 100 ದಿನಗಳಲ್ಲಿ ಮಾಡಬೇಕಾದ ಕೆಲಸದ ಬಗ್ಗೆ ಮಾರ್ಗಸೂಚಿ ಸಿದ್ಧಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣೆಗೂ ಮುನ್ನ ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಿದ್ದರು. ಅದರ ಭಾಗವಾಗಿ ಕಾನೂನು ಸಚಿವಾಲಯ ಈ ಹೆಜ್ಜೆಯಿಟ್ಟಿದೆ ಎಂದು ಮೂಲಗಳು ಶುಕ್ರವಾರ ಹೇಳಿವೆ. </p>.<p>‘ಒಂದು ದೇಶ, ಒಂದು ಚುನಾವಣೆ’ ಪರಿಕಲ್ಪನೆಯ ಸಾಧಕ–ಬಾಧಕಗಳನ್ನು ಪರಿಶೀಲಿಸಲು ಸರ್ಕಾರ ನೇಮಿಸಿದ್ದ ಉನ್ನತಾಧಿಕಾರ ಸಮಿತಿಯು ತನ್ನ ವರದಿಯನ್ನು ಮಾರ್ಚ್ 15ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.</p>.<p>ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸಿ, ಬಳಿಕದ 100 ದಿನಗಳ ಒಳಗಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಶಿಫಾರಸನ್ನು ಸಮಿತಿಯು ಮಾಡಿತ್ತು.</p>.<p>ತನ್ನ ಶಿಫಾರಸುಗಳ ಅನುಷ್ಠಾನಕ್ಕೆ ಒಂದು ತಂಡವನ್ನು ರಚಿಸುವಂತೆಯೂ ಸಲಹೆ ನೀಡಿತ್ತು. ಏಕಕಾಲದಲ್ಲಿ ಚುನಾವಣೆ ನಡೆಸುವುದರಿಂದ ಸಂಪನ್ಮೂಲಗಳನ್ನು ಉಳಿಸಲು ಸಾಧ್ಯವಾಗುತ್ತದೆ, ಅಭಿವೃದ್ಧಿ ಮತ್ತು ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುತ್ತದೆ ಹಾಗೂ ಪ್ರಜಾಪ್ರಭುತ್ವದ ಬುನಾದಿಯನ್ನು ಬಲಗೊಳಿಸುತ್ತದೆ ಎಂದು ಹೇಳಿತ್ತು.</p>.<p>ಸಂವಿಧಾನಕ್ಕೆ ಒಟ್ಟು 18 ತಿದ್ದುಪಡಿಗಳನ್ನು ತರುವ ಶಿಫಾರಸು ಮಾಡಿದ್ದ ಸಮಿತಿ, ಭಾರತೀಯ ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗದೊಂದಿಗೆ ಸಮಾಲೋಚಿಸಿ ಒಂದೇ ಮತದಾರರ ಪಟ್ಟಿ ಮತ್ತು ಗುರುತಿನ ಚೀಟಿಗಳನ್ನು ಸಿದ್ಧಪಡಿಸಬೇಕು ಎಂದಿತ್ತು.</p>.<p>ಲೋಕಸಭೆ, ರಾಜ್ಯ ವಿಧಾನಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಪ್ರಕ್ರಿಯೆಯನ್ನು 2029ರಿಂದ ಜಾರಿಗೊಳಿಸಬೇಕೆಂಬ ಶಿಫಾರಸನ್ನು ಕಾನೂನು ಸಚಿವಾಲಯ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.</p>.<blockquote>ಕೇಂದ್ರ ಕಾನೂನು ಸಚಿವಾಲಯದಿಂದ ಸಿದ್ಧತೆ ಮಾರ್ಚ್ 15ರಂದು ರಾಷ್ಟ್ರಪತಿಗೆ ವರದಿ ಸಲ್ಲಿಸಿದ್ದ ಉನ್ನತಾಧಿಕಾರ ಸಮಿತಿ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಸಮಿತಿ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>