<p><strong>ಮುಂಬೈ:</strong> ಬುಧವಾರದಿಂದ ಆಜಾನ್ (ಇಸ್ಲಾಮಿಕ್ ಪ್ರಾರ್ಥನೆ ಕರೆ) ಎಲ್ಲೆಲ್ಲಿ ಕೇಳುತ್ತದೆಯೋ ಅಲ್ಲೆಲ್ಲ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾವನ್ನು ಮೊಳಗಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಮಂಗಳವಾರ ಸಾರ್ವಜನಿಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ‘ಮೇ 4 ರಂದು ಧ್ವನಿವರ್ಧಕದಲ್ಲಿ ಆಜಾನ್ ಮೊಳಗುವುದನ್ನು ಕೇಳಿದರೆ, ಆ ಸ್ಥಳಗಳಲ್ಲಿ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕದ ಮೂಲಕ ಮೊಳಗಿಸಿ. ಆಗ ಈ ಧ್ವನಿವರ್ಧಕಗಳ ಅಡಚಣೆ ಅವರಿಗೂ ಅರ್ಥವಾಗುತ್ತದೆ’ ಎಂದು ರಾಜ್ ಠಾಕ್ರೆ ಪತ್ರದಲ್ಲಿ ಹೇಳಿದ್ದಾರೆ.</p>.<p>‘ಆಜಾನ್ ಕೇಳಿಸಿದರೆ ‘100’ಕ್ಕೆ ಕರೆ ಮಾಡಿ, ಪೊಲೀಸರಿಗೆ ದೂರು ನೀಡಿ. ಪ್ರತಿಯೊಬ್ಬರೂ ಪ್ರತಿದಿನ ದೂರು ನೀಡಬೇಕು’ ಎಂದು ಎಂಎನ್ಎಸ್ ನಾಯಕ ಹೇಳಿದ್ದಾರೆ.</p>.<p>‘ಎಲ್ಲಾ ಸ್ಥಳೀಯ ಮಂಡಲಗಳು ಮತ್ತು ನಾಗರಿಕರು ಮಸೀದಿಗಳ ಧ್ವನಿವರ್ಧಕಗಳ ಸಮಸ್ಯೆಯ ಬಗ್ಗೆ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಬೇಕು. ಅದನ್ನು ಪೊಲೀಸ್ ಠಾಣೆಗೆ ಸಲ್ಲಿಸಬೇಕು’ ಎಂದು ಅವರು ಹೇಳಿದರು.</p>.<p>ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ಇದೇ 4ರೊಳಗೆ ತೆರವುಗೊಳಿಸಬೇಕು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರ ವಿರುದ್ಧ ಔರಂಗಾಬಾದ್ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಬುಧವಾರದಿಂದ ಆಜಾನ್ (ಇಸ್ಲಾಮಿಕ್ ಪ್ರಾರ್ಥನೆ ಕರೆ) ಎಲ್ಲೆಲ್ಲಿ ಕೇಳುತ್ತದೆಯೋ ಅಲ್ಲೆಲ್ಲ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾವನ್ನು ಮೊಳಗಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಮಂಗಳವಾರ ಸಾರ್ವಜನಿಕರಿಗೆ ಬಹಿರಂಗ ಪತ್ರ ಬರೆದಿರುವ ಅವರು, ‘ಮೇ 4 ರಂದು ಧ್ವನಿವರ್ಧಕದಲ್ಲಿ ಆಜಾನ್ ಮೊಳಗುವುದನ್ನು ಕೇಳಿದರೆ, ಆ ಸ್ಥಳಗಳಲ್ಲಿ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕದ ಮೂಲಕ ಮೊಳಗಿಸಿ. ಆಗ ಈ ಧ್ವನಿವರ್ಧಕಗಳ ಅಡಚಣೆ ಅವರಿಗೂ ಅರ್ಥವಾಗುತ್ತದೆ’ ಎಂದು ರಾಜ್ ಠಾಕ್ರೆ ಪತ್ರದಲ್ಲಿ ಹೇಳಿದ್ದಾರೆ.</p>.<p>‘ಆಜಾನ್ ಕೇಳಿಸಿದರೆ ‘100’ಕ್ಕೆ ಕರೆ ಮಾಡಿ, ಪೊಲೀಸರಿಗೆ ದೂರು ನೀಡಿ. ಪ್ರತಿಯೊಬ್ಬರೂ ಪ್ರತಿದಿನ ದೂರು ನೀಡಬೇಕು’ ಎಂದು ಎಂಎನ್ಎಸ್ ನಾಯಕ ಹೇಳಿದ್ದಾರೆ.</p>.<p>‘ಎಲ್ಲಾ ಸ್ಥಳೀಯ ಮಂಡಲಗಳು ಮತ್ತು ನಾಗರಿಕರು ಮಸೀದಿಗಳ ಧ್ವನಿವರ್ಧಕಗಳ ಸಮಸ್ಯೆಯ ಬಗ್ಗೆ ಸಹಿ ಸಂಗ್ರಹ ಅಭಿಯಾನ ಪ್ರಾರಂಭಿಸಬೇಕು. ಅದನ್ನು ಪೊಲೀಸ್ ಠಾಣೆಗೆ ಸಲ್ಲಿಸಬೇಕು’ ಎಂದು ಅವರು ಹೇಳಿದರು.</p>.<p>ಮಸೀದಿಗಳ ಮೇಲಿರುವ ಧ್ವನಿವರ್ಧಕಗಳನ್ನು ಇದೇ 4ರೊಳಗೆ ತೆರವುಗೊಳಿಸಬೇಕು ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದ ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ಅವರ ವಿರುದ್ಧ ಔರಂಗಾಬಾದ್ ಪೊಲೀಸರು ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>