<p><strong>ನವದೆಹಲಿ:</strong> ಅಂಗವಿಕಲ ವ್ಯಕ್ತಿಗಳು ಬಾಡಿಗೆ ಟ್ಯಾಕ್ಸಿ ಸೇವೆಗಳನ್ನು ಪಡೆದುಕೊಳ್ಳುವಾಗ ತಾರತಮ್ಯ ಎದುರಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್, ಕೇಂದ್ರ ಸರ್ಕಾರ ಮತ್ತು ಬಾಡಿಗೆ ಟ್ಯಾಕ್ಸಿ ಸೇವೆ ಒದಗಿಸುವ ಉಬರ್ ಕಂಪನಿಗೆ ಸೂಚಿಸಿದೆ.</p>.<p>ದೃಷ್ಟಿ ದೋಷದಿಂದ ಬಳಲುತ್ತಿರುವ ವಕೀಲ ರಾಹುಲ್ ಬಜಾಜ್ ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು ಕೇಂದ್ರ ಸರ್ಕಾರ ಮತ್ತು ಉಬರ್ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ಗೆ ನೋಟಿಸ್ ಜಾರಿಗೊಳಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಹೇಳಿದರು. </p>.<p>ಉಬರ್ ಆ್ಯಪ್ ಮೂಲಕ ಆಟೊ ಬುಕ್ ಮಾಡಿದ್ದ ತಮ್ಮ ಕಕ್ಷಿಗಾರ ಬಾಡಿಗೆ ಸೇವೆ ಪಡೆದುಕೊಳ್ಳುವಾಗ ತಾರತಮ್ಯ ಮತ್ತು ಅಗೌರವದ ವರ್ತನೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದ್ದಾರೆ ಎಂದು ರಾಹುಲ್ ಪರ ಹಾಜರಿದ್ದ ವಕೀಲರು ಆರೋಪಿಸಿದ್ದಾರೆ. </p>.<p>‘ಆಟೊ ಚಾಲಕನು ರಾಹುಲ್ ಅವರನ್ನು ನಿಗದಿತ ಸ್ಥಳಕ್ಕೆ ಡ್ರಾಪ್ ಮಾಡಲು ನಿರಾಕರಿಸಿದ್ದಾನೆ. ಇಷ್ಟವಿಲ್ಲದೆಯೇ ಸವಾರಿಗೆ ಒಪ್ಪಿದ ನಂತರ ಅಗೌರವ ತೋರಿದ್ದಾನೆ’ ಎಂದು ಅರ್ಜಿಯಲ್ಲಿ ದೂರಿದ್ದಾರೆ.</p>.<p>ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಅಂಗವಿಕಲ ವ್ಯಕ್ತಿಗಳು ಬಾಡಿಗೆ ಟ್ಯಾಕ್ಸಿ ಸೇವೆಗಳನ್ನು ಪಡೆದುಕೊಳ್ಳುವಾಗ ತಾರತಮ್ಯ ಎದುರಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್, ಕೇಂದ್ರ ಸರ್ಕಾರ ಮತ್ತು ಬಾಡಿಗೆ ಟ್ಯಾಕ್ಸಿ ಸೇವೆ ಒದಗಿಸುವ ಉಬರ್ ಕಂಪನಿಗೆ ಸೂಚಿಸಿದೆ.</p>.<p>ದೃಷ್ಟಿ ದೋಷದಿಂದ ಬಳಲುತ್ತಿರುವ ವಕೀಲ ರಾಹುಲ್ ಬಜಾಜ್ ಅವರ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸಂಜೀವ್ ನರುಲಾ ಅವರು ಕೇಂದ್ರ ಸರ್ಕಾರ ಮತ್ತು ಉಬರ್ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ಗೆ ನೋಟಿಸ್ ಜಾರಿಗೊಳಿಸಿದ್ದು, ಪ್ರತಿಕ್ರಿಯೆ ನೀಡುವಂತೆ ಹೇಳಿದರು. </p>.<p>ಉಬರ್ ಆ್ಯಪ್ ಮೂಲಕ ಆಟೊ ಬುಕ್ ಮಾಡಿದ್ದ ತಮ್ಮ ಕಕ್ಷಿಗಾರ ಬಾಡಿಗೆ ಸೇವೆ ಪಡೆದುಕೊಳ್ಳುವಾಗ ತಾರತಮ್ಯ ಮತ್ತು ಅಗೌರವದ ವರ್ತನೆ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದ್ದಾರೆ ಎಂದು ರಾಹುಲ್ ಪರ ಹಾಜರಿದ್ದ ವಕೀಲರು ಆರೋಪಿಸಿದ್ದಾರೆ. </p>.<p>‘ಆಟೊ ಚಾಲಕನು ರಾಹುಲ್ ಅವರನ್ನು ನಿಗದಿತ ಸ್ಥಳಕ್ಕೆ ಡ್ರಾಪ್ ಮಾಡಲು ನಿರಾಕರಿಸಿದ್ದಾನೆ. ಇಷ್ಟವಿಲ್ಲದೆಯೇ ಸವಾರಿಗೆ ಒಪ್ಪಿದ ನಂತರ ಅಗೌರವ ತೋರಿದ್ದಾನೆ’ ಎಂದು ಅರ್ಜಿಯಲ್ಲಿ ದೂರಿದ್ದಾರೆ.</p>.<p>ಪೀಠವು ಮುಂದಿನ ವಿಚಾರಣೆಯನ್ನು ಮಾರ್ಚ್ 27ಕ್ಕೆ ನಿಗದಿಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>