<p class="bodytext"><strong>ನವದೆಹಲಿ</strong>: ಜಮ್ಮುವಿನಲ್ಲಿ ಅಕ್ರಮವಾಗಿ ಬಂಧಿಸಿಟ್ಟಿರುವ ಸುಮಾರು 150ರಿಂದ 170 ಮಂದಿ ರೋಹಿಂಗ್ಯಾ ಸಮುದಾಯದವರನ್ನು ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p class="bodytext">ರೋಹಿಂಗ್ಯಾ ಸಮುದಾಯದವರಿಗೆ ಆಶ್ರಯ ನೀಡಿದ್ದ ಮೊಹಮ್ಮದ್ ಸಲೀಮುಲ್ಲಾ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ರಾಯಭಾರ ಕಚೇರಿಯ ಪರಿಶೀಲನೆಯ ನಂತರ ಈ ಜನರು ಮ್ಯಾನ್ಮಾರ್ಗೆ ಗಡೀಪಾರು ಆಗುವ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p class="bodytext">ಜಮ್ಮುವಿನಲ್ಲಿ ಮಾತ್ರವಲ್ಲದೆ ದೇಶದಾದ್ಯಂತದರೋಹಿಂಗ್ಯಾ ನಿರಾಶ್ರಿತರಿಗೆ ನಿರಾಶ್ರಿತರ ಕಾರ್ಡ್ ನೀಡಿ, ಶಿಬಿರಗಳಲ್ಲಿ ಆಶ್ರಯ ನೀಡಿ ರಕ್ಷಣೆ ಮಾಡುವಂತೆ ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ಕೂಡ (ಯುಎನ್ಎಚ್ಸಿಆರ್) ನಿರ್ದೇಶನ ನೀಡಿದ್ದಾರೆ ಎನ್ನುವುದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p>.<p class="bodytext">ರೋಹಿಂಗ್ಯಾ ನಿರಾಶ್ರಿತರ ಬಯೋಮೆಟ್ರಿಕ್ ಪರಿಶೀಲನೆಗೆಜಮ್ಮು ಮತ್ತು ಕಾಶ್ಮೀರ ಆಡಳಿತವು ಕೈಗೊಂಡ ಕ್ರಮದ ನಂತರವೂ ಕೆಲವು ರೋಹಿಂಗ್ಯಾಗಳು ನಿರಾಶ್ರಿತರ ಶಿಬಿರಗಳಿಗೆ ಹಿಂತಿರುಗಲಿಲ್ಲ. ಹಾಗಾಗಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದಾರೆ ಎನ್ನುವ ಗೊಂದಲದ ಮಾಹಿತಿ ರೋಹಿಂಗ್ಯಾ ಕುಟುಂಬಗಳಿಂದ ಬಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p class="bodytext">ಜಮ್ಮುವಿನಲ್ಲಿ ರೋಹಿಂಗ್ಯಾ ನಿರಾಶ್ರಿತರ ಪರಿಸ್ಥಿತಿ ಅನಿಶ್ಚಿತವಾಗಿದೆ. ಅವರಿಗೆ ನೀಡಲಾದ ಯುಎನ್ಎಚ್ಸಿಆರ್ ನಿರಾಶ್ರಿತರ ಕಾರ್ಡ್ಗಳು ಸರಿಯಾಗಿಲ್ಲ ಎಂದು ಸರ್ಕಾರವೂ ಪದೇ ಪದೇ ಹೇಳುತ್ತಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ</strong>: ಜಮ್ಮುವಿನಲ್ಲಿ ಅಕ್ರಮವಾಗಿ ಬಂಧಿಸಿಟ್ಟಿರುವ ಸುಮಾರು 150ರಿಂದ 170 ಮಂದಿ ರೋಹಿಂಗ್ಯಾ ಸಮುದಾಯದವರನ್ನು ಬಿಡುಗಡೆ ಮಾಡುವಂತೆ ಕೋರಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p class="bodytext">ರೋಹಿಂಗ್ಯಾ ಸಮುದಾಯದವರಿಗೆ ಆಶ್ರಯ ನೀಡಿದ್ದ ಮೊಹಮ್ಮದ್ ಸಲೀಮುಲ್ಲಾ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅರ್ಜಿ ಸಲ್ಲಿಸಿದ್ದಾರೆ. ರಾಯಭಾರ ಕಚೇರಿಯ ಪರಿಶೀಲನೆಯ ನಂತರ ಈ ಜನರು ಮ್ಯಾನ್ಮಾರ್ಗೆ ಗಡೀಪಾರು ಆಗುವ ಶಿಕ್ಷೆಯನ್ನು ಎದುರಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p class="bodytext">ಜಮ್ಮುವಿನಲ್ಲಿ ಮಾತ್ರವಲ್ಲದೆ ದೇಶದಾದ್ಯಂತದರೋಹಿಂಗ್ಯಾ ನಿರಾಶ್ರಿತರಿಗೆ ನಿರಾಶ್ರಿತರ ಕಾರ್ಡ್ ನೀಡಿ, ಶಿಬಿರಗಳಲ್ಲಿ ಆಶ್ರಯ ನೀಡಿ ರಕ್ಷಣೆ ಮಾಡುವಂತೆ ವಿಶ್ವಸಂಸ್ಥೆಯ ನಿರಾಶ್ರಿತರ ಹೈ ಕಮಿಷನರ್ ಕೂಡ (ಯುಎನ್ಎಚ್ಸಿಆರ್) ನಿರ್ದೇಶನ ನೀಡಿದ್ದಾರೆ ಎನ್ನುವುದನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.</p>.<p class="bodytext">ರೋಹಿಂಗ್ಯಾ ನಿರಾಶ್ರಿತರ ಬಯೋಮೆಟ್ರಿಕ್ ಪರಿಶೀಲನೆಗೆಜಮ್ಮು ಮತ್ತು ಕಾಶ್ಮೀರ ಆಡಳಿತವು ಕೈಗೊಂಡ ಕ್ರಮದ ನಂತರವೂ ಕೆಲವು ರೋಹಿಂಗ್ಯಾಗಳು ನಿರಾಶ್ರಿತರ ಶಿಬಿರಗಳಿಗೆ ಹಿಂತಿರುಗಲಿಲ್ಲ. ಹಾಗಾಗಿ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಹಾಕಿದ್ದಾರೆ ಎನ್ನುವ ಗೊಂದಲದ ಮಾಹಿತಿ ರೋಹಿಂಗ್ಯಾ ಕುಟುಂಬಗಳಿಂದ ಬಂದಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.</p>.<p class="bodytext">ಜಮ್ಮುವಿನಲ್ಲಿ ರೋಹಿಂಗ್ಯಾ ನಿರಾಶ್ರಿತರ ಪರಿಸ್ಥಿತಿ ಅನಿಶ್ಚಿತವಾಗಿದೆ. ಅವರಿಗೆ ನೀಡಲಾದ ಯುಎನ್ಎಚ್ಸಿಆರ್ ನಿರಾಶ್ರಿತರ ಕಾರ್ಡ್ಗಳು ಸರಿಯಾಗಿಲ್ಲ ಎಂದು ಸರ್ಕಾರವೂ ಪದೇ ಪದೇ ಹೇಳುತ್ತಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>