<p><strong>ನವದೆಹಲಿ: </strong>ಪಿಎಂ-ಕೇರ್ಸ್ ನಿಧಿಯ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.</p>.<p>ಕೋವಿಡ್–19 ನಿಯಂತ್ರಣಕ್ಕೆ ಮತ್ತು ಇತರ ಯೋಜನೆಗಳಿಗೆ ಈ ನಿಧಿಯಿಂದ ಯಾವ ರೀತಿಯಲ್ಲಿ ಹಣವನ್ನು ಹಂಚಿಕೆ ಮಾಡಲಾಗಿದೆ ಎನ್ನುವ ವಿವರಗಳನ್ನು ನೀಡುವಂತೆ ಕೋರಲಾಗಿದೆ.</p>.<p>ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಈ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಇದುವರೆಗೆ ಪಿಎಂ ಕೇರ್ಸ್ ನಿಧಿಯ ಬಗ್ಗೆ ಪ್ರಧಾನಮಂತ್ರಿ ಕಚೇರಿ ನೀಡುವ ಪತ್ರಿಕಾ ಪ್ರಕಟಣೆಗಳಿಂದ ಮಾತ್ರ ಮಾಹಿತಿ ದೊರೆಯುತ್ತಿದೆ. ಹೀಗಾಗಿ, ಪ್ರಸ್ತುತ ಸ್ಥಿತಿಯ ಬಗ್ಗೆ ವಿವರಗಳನ್ನು ಒದಗಿಸಬೇಕು’ ಎಂದು ಅರ್ಜಿಯಲ್ಲಿ ಗೋಖಲೆ ಕೋರಿದ್ದಾರೆ.</p>.<p>‘ಕೋವಿಡ್–19 ಲಸಿಕೆ ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು. ಆದರೆ, ಲಸಿಕೆ ಅಭಿವೃದ್ಧಿಗೆ ಪಿಎಂ ಕೇರ್ಸ್ ನಿಧಿ ಮೂಲಕ ಸುಮಾರು ₹100 ಕೋಟಿ ನೀಡಲಾಗಿದೆ. ಇದೇ ಉದ್ದೇಶಕ್ಕಾಗಿ ಹೆಚ್ಚುವರಿ ನಿಧಿಯನ್ನು ನೀಡಲಾಗಿದೆಯೇ ಎನ್ನುವುದು ಸಹ ಸ್ಪಷ್ಟವಾಗಿಲ್ಲ’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಪಿಎಂ-ಕೇರ್ಸ್ ನಿಧಿಯ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.</p>.<p>ಕೋವಿಡ್–19 ನಿಯಂತ್ರಣಕ್ಕೆ ಮತ್ತು ಇತರ ಯೋಜನೆಗಳಿಗೆ ಈ ನಿಧಿಯಿಂದ ಯಾವ ರೀತಿಯಲ್ಲಿ ಹಣವನ್ನು ಹಂಚಿಕೆ ಮಾಡಲಾಗಿದೆ ಎನ್ನುವ ವಿವರಗಳನ್ನು ನೀಡುವಂತೆ ಕೋರಲಾಗಿದೆ.</p>.<p>ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಈ ಅರ್ಜಿ ಸಲ್ಲಿಸಿದ್ದಾರೆ.</p>.<p>‘ಇದುವರೆಗೆ ಪಿಎಂ ಕೇರ್ಸ್ ನಿಧಿಯ ಬಗ್ಗೆ ಪ್ರಧಾನಮಂತ್ರಿ ಕಚೇರಿ ನೀಡುವ ಪತ್ರಿಕಾ ಪ್ರಕಟಣೆಗಳಿಂದ ಮಾತ್ರ ಮಾಹಿತಿ ದೊರೆಯುತ್ತಿದೆ. ಹೀಗಾಗಿ, ಪ್ರಸ್ತುತ ಸ್ಥಿತಿಯ ಬಗ್ಗೆ ವಿವರಗಳನ್ನು ಒದಗಿಸಬೇಕು’ ಎಂದು ಅರ್ಜಿಯಲ್ಲಿ ಗೋಖಲೆ ಕೋರಿದ್ದಾರೆ.</p>.<p>‘ಕೋವಿಡ್–19 ಲಸಿಕೆ ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಈ ಮೊದಲು ಹೇಳಿತ್ತು. ಆದರೆ, ಲಸಿಕೆ ಅಭಿವೃದ್ಧಿಗೆ ಪಿಎಂ ಕೇರ್ಸ್ ನಿಧಿ ಮೂಲಕ ಸುಮಾರು ₹100 ಕೋಟಿ ನೀಡಲಾಗಿದೆ. ಇದೇ ಉದ್ದೇಶಕ್ಕಾಗಿ ಹೆಚ್ಚುವರಿ ನಿಧಿಯನ್ನು ನೀಡಲಾಗಿದೆಯೇ ಎನ್ನುವುದು ಸಹ ಸ್ಪಷ್ಟವಾಗಿಲ್ಲ’ ಎಂದು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>