<p><strong>ನವದೆಹಲಿ:</strong> ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆಗಸ್ಟ್ 1ರಂದು ತನ್ನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ಮುಂಬೈನ ಜೈಶ್ರೀ ಲಕ್ಷ್ಮಣರಾವ್ ಪಾಟೀಲ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.</p>.<p>‘ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಗುರುತಿಸುವ ವಿಶೇಷ ಅಧಿಕಾರವನ್ನು, ಸಂವಿಧಾನದ 341 ಹಾಗೂ 432ನೇ ವಿಧಿ ಅನ್ವಯ ರಾಷ್ಟ್ರಪತಿಗಳು ಮಾತ್ರ ಹೊಂದಿದ್ದಾರೆ’ ಎಂದು ಜೈಶ್ರೀ ಪಾಟೀಲ ಅರ್ಜಿಯಲ್ಲಿ ತಿಳಿಸಿದ್ದಾರೆ.</p>.<p>‘ಯಾವುದೇ ಸಮುದಾಯವು ಮುಂದುವರಿದಿದೆ ಅಥವಾ ಎಸ್ಸಿ/ಎಸ್ಟಿ ಪಟ್ಟಿಯಿಂದ ಹೊರಬಿದ್ದಿದೆ ಎಂದಾದಾಗ, ಅಂತಹ ಸಮುದಾಯಗಳನ್ನು ಪಟ್ಟಿಯಿಂದ ಹೊರಗಿಡುವ ಇಲ್ಲವೇ ಪಟ್ಟಿಗೆ ಸೇರಿಸುವ ಅಧಿಕಾರವನ್ನು 1950ರಲ್ಲಿ ಹೊರಡಿಸಿರುವ ಆದೇಶವು ಸಂಸತ್ಗೆ ಮಾತ್ರ ನೀಡಿದೆ. ಈ ವಿಷಯವನ್ನು ಸಮವರ್ತಿ ಪಟ್ಟಿಯಲ್ಲಿ ಸೇರಿಸುವ ಕುರಿತು ರಾಜ್ಯಗಳಿಂದಲೂ ಪರ್ಯಾಲೋಚನೆ ನಡೆದಿಲ್ಲ’ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.</p>.<p>‘ಕೆನೆಪದರದವರನ್ನು ಎಸ್ಟಿ, ಎಸ್ಟಿ ಪಟ್ಟಿಯಿಂದ ಹೊರಗಿಡುವುದಕ್ಕೆ ನೀಡುವ ಯಾವುದೇ ನಿರ್ದೇಶನವು ಕಾನೂನುಬಾಹಿರವಾಗುತ್ತದೆ. ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೂ ವಿರುದ್ಧವಾಗಲಿದೆ’ ಎಂದು ಜೈಶ್ರೀ ಪಾಟೀಲ ಅರ್ಜಿಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳವರಿಗೆ ಒಳಮೀಸಲಾತಿ ಕಲ್ಪಿಸುವ ಕುರಿತು ಆಗಸ್ಟ್ 1ರಂದು ತನ್ನ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.</p>.<p>ಮುಂಬೈನ ಜೈಶ್ರೀ ಲಕ್ಷ್ಮಣರಾವ್ ಪಾಟೀಲ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.</p>.<p>‘ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳನ್ನು ಗುರುತಿಸುವ ವಿಶೇಷ ಅಧಿಕಾರವನ್ನು, ಸಂವಿಧಾನದ 341 ಹಾಗೂ 432ನೇ ವಿಧಿ ಅನ್ವಯ ರಾಷ್ಟ್ರಪತಿಗಳು ಮಾತ್ರ ಹೊಂದಿದ್ದಾರೆ’ ಎಂದು ಜೈಶ್ರೀ ಪಾಟೀಲ ಅರ್ಜಿಯಲ್ಲಿ ತಿಳಿಸಿದ್ದಾರೆ.</p>.<p>‘ಯಾವುದೇ ಸಮುದಾಯವು ಮುಂದುವರಿದಿದೆ ಅಥವಾ ಎಸ್ಸಿ/ಎಸ್ಟಿ ಪಟ್ಟಿಯಿಂದ ಹೊರಬಿದ್ದಿದೆ ಎಂದಾದಾಗ, ಅಂತಹ ಸಮುದಾಯಗಳನ್ನು ಪಟ್ಟಿಯಿಂದ ಹೊರಗಿಡುವ ಇಲ್ಲವೇ ಪಟ್ಟಿಗೆ ಸೇರಿಸುವ ಅಧಿಕಾರವನ್ನು 1950ರಲ್ಲಿ ಹೊರಡಿಸಿರುವ ಆದೇಶವು ಸಂಸತ್ಗೆ ಮಾತ್ರ ನೀಡಿದೆ. ಈ ವಿಷಯವನ್ನು ಸಮವರ್ತಿ ಪಟ್ಟಿಯಲ್ಲಿ ಸೇರಿಸುವ ಕುರಿತು ರಾಜ್ಯಗಳಿಂದಲೂ ಪರ್ಯಾಲೋಚನೆ ನಡೆದಿಲ್ಲ’ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.</p>.<p>‘ಕೆನೆಪದರದವರನ್ನು ಎಸ್ಟಿ, ಎಸ್ಟಿ ಪಟ್ಟಿಯಿಂದ ಹೊರಗಿಡುವುದಕ್ಕೆ ನೀಡುವ ಯಾವುದೇ ನಿರ್ದೇಶನವು ಕಾನೂನುಬಾಹಿರವಾಗುತ್ತದೆ. ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೂ ವಿರುದ್ಧವಾಗಲಿದೆ’ ಎಂದು ಜೈಶ್ರೀ ಪಾಟೀಲ ಅರ್ಜಿಯಲ್ಲಿ ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>